ಮನರಂಜನೆ

‘ಕುಲದಲ್ಲಿ ಕೀಳ್ಯಾವುದೋ’ ಅಂತಿದ್ದಾರೆ ಮಡೆನೂರು ಮನು!

ಈಗಾಗಲೇ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ಅಭಿನಯದ ‘ಕೇದಾರನಾಥ್‍ ಕುರಿ ಫಾರಂ’ ಎಂಬ ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಮಧ್ಯೆ, ಅವರ ಇನ್ನೊಂದು ಚಿತ್ರ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರೀಕರಣ ಸದ್ಯದಲ್ಲೇ ಶುರುವಾಗಲಿದೆ.

‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಚಿತ್ರೀಕರಣ ಶುರುವಾಗುತ್ತಿರುವುದು ಈಗಾದರೂ, ಸಂಕ್ರಾಂತಿ ಹಬ್ಬದಂದು ಮುಹೂರ್ತವಾಗಿತ್ತು. ಯೋಗರಾಜ್‍ ಭಟ್‍ ನಿರ್ಮಾಣದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದಲ್ಲಿ ಮಡೆನೂರು ಮನುಗೆ ನಾಯಕಿಯಾಗಿ ಮೌನ ಗುಡ್ಡೆಮನೆ ನಟಿಸುತ್ತಿದ್ದಾರೆ.

ಚಿತ್ರ ಪ್ರಾರಂಭವಾದಾಗ ನಿರ್ದೇಶಕರಾಗಿದ್ದವರು ಯೋಗರಾಜ್‍ ಭಟ್‍ ಶಿಷ್ಯ ಶ್ರೇಯಸ್‍ ರಾಜ್‍ ಶೆಟ್ಟಿ. ಆದರೆ, ಈಗ ನಿರ್ದೇಶಕರು ಬದಲಾಗಿದ್ದಾರೆ. ಶ್ರೇಯಸ್‍ ರಾಜ್‍ ಶೆಟ್ಟಿ ಬದಲು, ಈಗ ಆ ಸ್ಥಾನಕ್ಕೆ ಚಿತ್ರಸಾಹಿತಿ ಕಂ ನಿರ್ದೇಶಕರಾದ ಕೆ. ರಾಮ್‍ನಾರಾಯಣ್‍ ಬಂದಿದ್ದಾರೆ. ಇನ್ನು, ಈ ಚಿತ್ರಕ್ಕೆ ಯೋಗರಾಜ್‍ ಭಟ್‍ ಅವರ ಮತ್ತೊಬ್ಬ ಶಿಷ್ಯ ಯೋಗಿ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದರು. ಚಿತ್ರದ ಕಥೆಯು 70ರ ದಶಕದ ಕಾಲಘಟ್ಟದಲ್ಲಿ ನಡೆಯಲಿದೆ ಎಂದು ಹೇಳಲಾಗಿತ್ತು. ಈಗ ಶೀರ್ಷಿಕೆ ಅದೇ ಇದ್ದರೂ, ಕಥೆ ಮತ್ತು ನಿರ್ದೇಶಕರು ಬದಲಾಗಿದ್ದಾರೆ. ಈಗ ಯೋಗರಾಜ್ ಭಟ್ ಹಾಗೂ ಇಸ್ಲಾಮುದ್ದೀನ್ ಅವರು ಚಿತ್ರಕ್ಕೆ ಕಥೆ ಬರೆದಿದ್ದಾರೆ.

ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ.ಕೆ ಮತ್ತು ವಿದ್ಯಾ ನಿರ್ಮಿಸುತ್ತಿರುವ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಫಸ್ಟ್ ಲುಕ್ ಟೀಸರ್ ಇತ್ತೀಚೆಗೆ ಬಿಡುಗಡೆ ಆಗಿದೆ. ಸಕಲೇಶಪುರ, ಹಾಸನ, ರಾಮನಗರ, ಬೆಂಗಳೂರು ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ಯೋಗರಾಜ್ ಭಟ್ ಹಾಗೂ ಜಯಂತ್ ಕಾಯ್ಕಿಣಿ ಅವರು ಚಿತ್ರದ ಹಾಡುಗಳನ್ನು ಬರೆದಿದ್ದು ಮನೋಮೂರ್ತಿ ಸಂಗೀತ ನೀಡುತ್ತಿದ್ದಾರೆ.

‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದಲ್ಲಿ ಮಡೆನೂರು ಮನು, ಮೌನ ಗುಡ್ಡೆಮನೆ, ರಂಗಾಯಣ ರಘು, ದಿಗಂತ್, ಶರತ್ ಲೋಹಿತಾಶ್ವ, ಸೋನಾಲ್ ಮೊಂತೆರೊ ಮುಂತಾದವರು ನಟಿಸುತ್ತಿದ್ದಾರೆ.

ಭೂಮಿಕಾ

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

12 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

12 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

13 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

13 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

13 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

13 hours ago