ಮನರಂಜನೆ

‘ಕುಲದಲ್ಲಿ ಕೀಳ್ಯಾವುದೋ’ ಅಂತಿದ್ದಾರೆ ಮಡೆನೂರು ಮನು!

ಈಗಾಗಲೇ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ಅಭಿನಯದ ‘ಕೇದಾರನಾಥ್‍ ಕುರಿ ಫಾರಂ’ ಎಂಬ ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಮಧ್ಯೆ, ಅವರ ಇನ್ನೊಂದು ಚಿತ್ರ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರೀಕರಣ ಸದ್ಯದಲ್ಲೇ ಶುರುವಾಗಲಿದೆ.

‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಚಿತ್ರೀಕರಣ ಶುರುವಾಗುತ್ತಿರುವುದು ಈಗಾದರೂ, ಸಂಕ್ರಾಂತಿ ಹಬ್ಬದಂದು ಮುಹೂರ್ತವಾಗಿತ್ತು. ಯೋಗರಾಜ್‍ ಭಟ್‍ ನಿರ್ಮಾಣದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದಲ್ಲಿ ಮಡೆನೂರು ಮನುಗೆ ನಾಯಕಿಯಾಗಿ ಮೌನ ಗುಡ್ಡೆಮನೆ ನಟಿಸುತ್ತಿದ್ದಾರೆ.

ಚಿತ್ರ ಪ್ರಾರಂಭವಾದಾಗ ನಿರ್ದೇಶಕರಾಗಿದ್ದವರು ಯೋಗರಾಜ್‍ ಭಟ್‍ ಶಿಷ್ಯ ಶ್ರೇಯಸ್‍ ರಾಜ್‍ ಶೆಟ್ಟಿ. ಆದರೆ, ಈಗ ನಿರ್ದೇಶಕರು ಬದಲಾಗಿದ್ದಾರೆ. ಶ್ರೇಯಸ್‍ ರಾಜ್‍ ಶೆಟ್ಟಿ ಬದಲು, ಈಗ ಆ ಸ್ಥಾನಕ್ಕೆ ಚಿತ್ರಸಾಹಿತಿ ಕಂ ನಿರ್ದೇಶಕರಾದ ಕೆ. ರಾಮ್‍ನಾರಾಯಣ್‍ ಬಂದಿದ್ದಾರೆ. ಇನ್ನು, ಈ ಚಿತ್ರಕ್ಕೆ ಯೋಗರಾಜ್‍ ಭಟ್‍ ಅವರ ಮತ್ತೊಬ್ಬ ಶಿಷ್ಯ ಯೋಗಿ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದರು. ಚಿತ್ರದ ಕಥೆಯು 70ರ ದಶಕದ ಕಾಲಘಟ್ಟದಲ್ಲಿ ನಡೆಯಲಿದೆ ಎಂದು ಹೇಳಲಾಗಿತ್ತು. ಈಗ ಶೀರ್ಷಿಕೆ ಅದೇ ಇದ್ದರೂ, ಕಥೆ ಮತ್ತು ನಿರ್ದೇಶಕರು ಬದಲಾಗಿದ್ದಾರೆ. ಈಗ ಯೋಗರಾಜ್ ಭಟ್ ಹಾಗೂ ಇಸ್ಲಾಮುದ್ದೀನ್ ಅವರು ಚಿತ್ರಕ್ಕೆ ಕಥೆ ಬರೆದಿದ್ದಾರೆ.

ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ.ಕೆ ಮತ್ತು ವಿದ್ಯಾ ನಿರ್ಮಿಸುತ್ತಿರುವ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಫಸ್ಟ್ ಲುಕ್ ಟೀಸರ್ ಇತ್ತೀಚೆಗೆ ಬಿಡುಗಡೆ ಆಗಿದೆ. ಸಕಲೇಶಪುರ, ಹಾಸನ, ರಾಮನಗರ, ಬೆಂಗಳೂರು ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ಯೋಗರಾಜ್ ಭಟ್ ಹಾಗೂ ಜಯಂತ್ ಕಾಯ್ಕಿಣಿ ಅವರು ಚಿತ್ರದ ಹಾಡುಗಳನ್ನು ಬರೆದಿದ್ದು ಮನೋಮೂರ್ತಿ ಸಂಗೀತ ನೀಡುತ್ತಿದ್ದಾರೆ.

‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದಲ್ಲಿ ಮಡೆನೂರು ಮನು, ಮೌನ ಗುಡ್ಡೆಮನೆ, ರಂಗಾಯಣ ರಘು, ದಿಗಂತ್, ಶರತ್ ಲೋಹಿತಾಶ್ವ, ಸೋನಾಲ್ ಮೊಂತೆರೊ ಮುಂತಾದವರು ನಟಿಸುತ್ತಿದ್ದಾರೆ.

ಭೂಮಿಕಾ

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

8 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

21 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

21 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

21 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

21 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

21 hours ago