Madeva Kannada film 25 days celebration
ವಿನೋದ್ ಪ್ರಭಾಕರ್ ಅಭಿನಯದ ‘ಮಾದೇವ’ ಚಿತ್ರವು ಜೂನ್.06ರಂದು ಬಿಡುಗಡೆಯಾಗಿ, ಯಶಸ್ವಿಯಾಗಿ 25 ದಿನಗಳನ್ನು ಪೂರೈಸಿದೆ. ಈ ಸಂತೋಷವನ್ನು ಹಂಚಿಕೊಳ್ಳುವ ನಿಟ್ಟಿನಲ್ಲಿ ಚಿತ್ರತಂಡದವರು ಸಂತೋಷ ಕೂಟ ಏರ್ಪಡಿಸಿ, ಚಿತ್ರಕ್ಕೆ ಕೆಲಸ ಮಾಡಿದ ಕಲಾವಿದರು ಮತ್ತು ತಂತ್ರಜ್ಞರಿಗೆ ನೆನಪಿನ ಕಾಣಿಕೆಗಳನ್ನು ನೀಡಿ ಗೌರವಿಸಿದರು.
ಯಶಸ್ಸಿನ ಸಂಭ್ರಮದಲ್ಲಿ ಮಾತನಾಡಿದ ವಿನೋದ್ ಪ್ರಭಾಕರ್, ‘ಈ ಕಥೆಯನ್ನು ಯಾವ ಧೈರ್ಯದ ಮೇಲೆ ನನ್ನ ಹತ್ತಿರ ತಂದರೋ ಗೊತ್ತಿಲ್ಲ. ಈ ತರಹದ್ದೊಂದು ಪಾತ್ರ ಕನ್ನಡದಲ್ಲಿ ಬಂದಿರಲಿಲ್ಲ. ನನಗೆ ತೀರಾ ಹೊಸದು. ಈ ಪಾತ್ರಕ್ಕೆ ಜೀವ ತುಂಬುವುದಕ್ಕೆ ಪ್ರಯತ್ನಿಸಿದ್ದೇನೆ. ಚಿತ್ರ ನೋಡಿದವರೆಲ್ಲರೂ ನಿಮ್ಮ ಅಭಿನಯಕ್ಕೆ ನಿಮಗೆ ಪ್ರಶಸ್ತಿ ಸಿಗಬೇಕು ಅಂತ ಹೇಳುತ್ತಿದ್ದಾರೆ’ ಎಂದು ಖುಷಿಪಡುತ್ತಾರೆ.
ಚಿತ್ರದಲ್ಲೊಂದು ಅತಿಥಿ ಪಾತ್ರ ಮಾಡಿರುವ ಮಾಲಾಶ್ರೀ ಮಾತನಾಡಿ, ‘ಒಳ್ಳೆಯ ಚಿತ್ರಗಳನ್ನು ದೇವರೂ ಕೈಬಿಡುವುದಿಲ್ಲ, ಜನರೂ ಕೈಬಿಡುವುದಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ನಾನು ನಾಯಕಿಯಾಗಿ ಅಭಿನಯಿಸಿದ ಹಲವು ಚಿತ್ರಗಳು ಯಶಸ್ವಿಯಾಗಿವೆ. ಇದೇ ಮೊದಲ ಬಾರಿಗೆ ನಾನು ಪೋಷಕ ಪಾತ್ರ ಮಾಡಿದ ಚಿತ್ರ ಯಶಸ್ವಿಯಾಗಿ ನಾನು ನೆನಪಿನ ಕಾಣಿಕೆ ಸ್ವೀಕರಿಸುವಂತಾಗಿದೆ. ಎಷ್ಟೋ ವಿಲನ್ಗಳಿಗೆ ಹೊಡೆದಿದ್ದೇನೆ, ಶ್ರುತಿಯಂತಹ ಲೇಡಿ ವಿಲನ್ಗೆ ಹೊಡೀಬೇಕು ಅಂತ ಆಸೆ’ ಎಂದರು.
ಇವತ್ತಿನ ಕಾಲಘಟ್ಟದಲ್ಲಿ ಒಂದು ಚಿತ್ರ 25 ದಿನ ಓಡಿದರೆ, ಅದು 25 ವಾರ ಓಡಿದಂತೆ ಎಂದ ಶ್ರುತಿ, ಈ ಚಿತ್ರವೇನಾದರೂ 25 ದಿನ ಓಡಿದ್ದರೆ ಅದಕ್ಕೆ ವಿನೋದ್ ಪ್ರಭಾಕರ್ ಪ್ರಮುಖ ಕಾರಣ. ಚಿತ್ರದ ಫ್ರೇಮ್ನಲ್ಲೂ ವಿನೋದ್, ಟೈಗರ್ ಪ್ರಭಾಕರ್ ಅವರನ್ನು ನೆನಪಿಸಿದ್ದಾರೆ’ ಎಂದರು.
ನವೀನ್ ರೆಡ್ಡಿ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸಿರುವ ‘ಮಾದೇವ’ ಚಿತ್ರದಲ್ಲಿ ವಿನೋದ್ ಪ್ರಭಾಕರ್ಗೆ ನಾಯಕಿಯಾಗಿ ಸೋನಾಲ್ ಮೊಂತೆರೊ ಅಭಿನಯಿಸಿದ್ದಾರೆ. ಮಿಕ್ಕಂತೆ ಶ್ರೀನಗರ ಕಿಟ್ಟಿ, ಮಾಲಾಶ್ರೀ, ಶ್ರುತಿ, ಅಚ್ಯುತ್ ಕುಮಾರ್, ಕಾಕ್ರೋಜ್ ಸುಧೀ, ಮೈಕೋ ನಾಗರಾಜ್, ಬಲ ರಾಜ್ವಾಡಿ, ಮುನಿ, ಚೈತ್ರಾ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಪ್ರದ್ಯೋತ್ತನ್ ಸಂಗೀತ, ಬಾಲಕೃಷ್ಣ ತೋಟ ಛಾಯಾಗ್ರಹಣವಿದೆ. ಈ ಚಿತ್ರವನ್ನು ಕೇಶವ ನಿರ್ಮಿಸಿದ್ದಾರೆ.
ಶ್ರೀನಗರ: ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾದ ಅಮರನಾಥ ಗುಹೆಗೆ ವಾರ್ಷಿಕ ತೀರ್ಥಯಾತ್ರೆ ಈ ವರ್ಷ ಜುಲೈ 3ರಂದು ಆರಂಭವಾಗಲಿದೆ. ಕೇಂದ್ರಾಡಳಿತ…
ಮೈಸೂರು: ಇದೇ ಏಪ್ರಿಲ್.15ರಂದು ನಾಗಮಂಗಲದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಅಂದು ಪ್ರಧಾನಿ ನರೇಂದ್ರ…
ಬೆಂಗಳೂರು: ಬಾಗಲಕೋಟೆ ಜಿಲ್ಲೆ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಬ್ಲಾಕ್ಮೇಲ್ ಆರೋಪ…
ಬೆಂಗಳೂರು: ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು…
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಹಾಗೂ ನಾಳೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…