ಮನರಂಜನೆ

‘ಮಾದೇವ’ನಿಗೆ 25 ದಿನಗಳ ಸಂಭ್ರಮ; ನೆನಪಿನ ಕಾಣಿಕೆ ಕೊಟ್ಟು ಸಂಭ್ರಮಿಸಿದ ಚಿತ್ರತಂಡ

ವಿನೋದ್‍ ಪ್ರಭಾಕರ್‌ ಅಭಿನಯದ ‘ಮಾದೇವ’ ಚಿತ್ರವು ಜೂನ್‍.06ರಂದು ಬಿಡುಗಡೆಯಾಗಿ, ಯಶಸ್ವಿಯಾಗಿ 25 ದಿನಗಳನ್ನು ಪೂರೈಸಿದೆ. ಈ ಸಂತೋಷವನ್ನು ಹಂಚಿಕೊಳ್ಳುವ ನಿಟ್ಟಿನಲ್ಲಿ ಚಿತ್ರತಂಡದವರು ಸಂತೋಷ ಕೂಟ ಏರ್ಪಡಿಸಿ, ಚಿತ್ರಕ್ಕೆ ಕೆಲಸ ಮಾಡಿದ ಕಲಾವಿದರು ಮತ್ತು ತಂತ್ರಜ್ಞರಿಗೆ ನೆನಪಿನ ಕಾಣಿಕೆಗಳನ್ನು ನೀಡಿ ಗೌರವಿಸಿದರು.

ಯಶಸ್ಸಿನ ಸಂಭ್ರಮದಲ್ಲಿ ಮಾತನಾಡಿದ ವಿನೋದ್‍ ಪ್ರಭಾಕರ್‌, ‘ಈ ಕಥೆಯನ್ನು ಯಾವ ಧೈರ್ಯದ ಮೇಲೆ ನನ್ನ ಹತ್ತಿರ ತಂದರೋ ಗೊತ್ತಿಲ್ಲ. ಈ ತರಹದ್ದೊಂದು ಪಾತ್ರ ಕನ್ನಡದಲ್ಲಿ ಬಂದಿರಲಿಲ್ಲ. ನನಗೆ ತೀರಾ ಹೊಸದು. ಈ ಪಾತ್ರಕ್ಕೆ ಜೀವ ತುಂಬುವುದಕ್ಕೆ ಪ್ರಯತ್ನಿಸಿದ್ದೇನೆ. ಚಿತ್ರ ನೋಡಿದವರೆಲ್ಲರೂ ನಿಮ್ಮ ಅಭಿನಯಕ್ಕೆ ನಿಮಗೆ ಪ್ರಶಸ್ತಿ ಸಿಗಬೇಕು ಅಂತ ಹೇಳುತ್ತಿದ್ದಾರೆ’ ಎಂದು ಖುಷಿಪಡುತ್ತಾರೆ.

ಚಿತ್ರದಲ್ಲೊಂದು ಅತಿಥಿ ಪಾತ್ರ ಮಾಡಿರುವ ಮಾಲಾಶ್ರೀ ಮಾತನಾಡಿ, ‘ಒಳ್ಳೆಯ ಚಿತ್ರಗಳನ್ನು ದೇವರೂ ಕೈಬಿಡುವುದಿಲ್ಲ, ಜನರೂ ಕೈಬಿಡುವುದಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ನಾನು ನಾಯಕಿಯಾಗಿ ಅಭಿನಯಿಸಿದ ಹಲವು ಚಿತ್ರಗಳು ಯಶಸ್ವಿಯಾಗಿವೆ. ಇದೇ ಮೊದಲ ಬಾರಿಗೆ ನಾನು ಪೋಷಕ ಪಾತ್ರ ಮಾಡಿದ ಚಿತ್ರ ಯಶಸ್ವಿಯಾಗಿ ನಾನು ನೆನಪಿನ ಕಾಣಿಕೆ ಸ್ವೀಕರಿಸುವಂತಾಗಿದೆ. ಎಷ್ಟೋ ವಿಲನ್‍ಗಳಿಗೆ ಹೊಡೆದಿದ್ದೇನೆ, ಶ್ರುತಿಯಂತಹ ಲೇಡಿ ವಿಲನ್‍ಗೆ ಹೊಡೀಬೇಕು ಅಂತ ಆಸೆ’ ಎಂದರು.

ಇವತ್ತಿನ ಕಾಲಘಟ್ಟದಲ್ಲಿ ಒಂದು ಚಿತ್ರ 25 ದಿನ ಓಡಿದರೆ, ಅದು 25 ವಾರ ಓಡಿದಂತೆ ಎಂದ ಶ್ರುತಿ, ಈ ಚಿತ್ರವೇನಾದರೂ 25 ದಿನ ಓಡಿದ್ದರೆ ಅದಕ್ಕೆ ವಿನೋದ್‍ ಪ್ರಭಾಕರ್‌ ಪ್ರಮುಖ ಕಾರಣ. ಚಿತ್ರದ ಫ್ರೇಮ್‍ನಲ್ಲೂ ವಿನೋದ್‍, ಟೈಗರ್‌ ಪ್ರಭಾಕರ್ ಅವರನ್ನು ನೆನಪಿಸಿದ್ದಾರೆ’ ಎಂದರು.

ನವೀನ್‍ ರೆಡ್ಡಿ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸಿರುವ ‘ಮಾದೇವ’ ಚಿತ್ರದಲ್ಲಿ ವಿನೋದ್ ಪ್ರಭಾಕರ್‌ಗೆ ನಾಯಕಿಯಾಗಿ ಸೋನಾಲ್ ಮೊಂತೆರೊ ಅಭಿನಯಿಸಿದ್ದಾರೆ. ಮಿಕ್ಕಂತೆ ಶ್ರೀನಗರ ಕಿಟ್ಟಿ, ಮಾಲಾಶ್ರೀ, ಶ್ರುತಿ, ಅಚ್ಯುತ್‍ ಕುಮಾರ್, ಕಾಕ್ರೋಜ್ ಸುಧೀ, ಮೈಕೋ ನಾಗರಾಜ್, ಬಲ ರಾಜ್ವಾಡಿ, ಮುನಿ, ಚೈತ್ರಾ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಪ್ರದ್ಯೋತ್ತನ್ ಸಂಗೀತ, ಬಾಲಕೃಷ್ಣ ತೋಟ ಛಾಯಾಗ್ರಹಣವಿದೆ. ಈ ಚಿತ್ರವನ್ನು ಕೇಶವ ನಿರ್ಮಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

1 hour ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

3 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

3 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

9 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

9 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

10 hours ago