ಮನರಂಜನೆ

‘ಮಾದೇವ’ನಿಗೆ 25 ದಿನಗಳ ಸಂಭ್ರಮ; ನೆನಪಿನ ಕಾಣಿಕೆ ಕೊಟ್ಟು ಸಂಭ್ರಮಿಸಿದ ಚಿತ್ರತಂಡ

ವಿನೋದ್‍ ಪ್ರಭಾಕರ್‌ ಅಭಿನಯದ ‘ಮಾದೇವ’ ಚಿತ್ರವು ಜೂನ್‍.06ರಂದು ಬಿಡುಗಡೆಯಾಗಿ, ಯಶಸ್ವಿಯಾಗಿ 25 ದಿನಗಳನ್ನು ಪೂರೈಸಿದೆ. ಈ ಸಂತೋಷವನ್ನು ಹಂಚಿಕೊಳ್ಳುವ ನಿಟ್ಟಿನಲ್ಲಿ ಚಿತ್ರತಂಡದವರು ಸಂತೋಷ ಕೂಟ ಏರ್ಪಡಿಸಿ, ಚಿತ್ರಕ್ಕೆ ಕೆಲಸ ಮಾಡಿದ ಕಲಾವಿದರು ಮತ್ತು ತಂತ್ರಜ್ಞರಿಗೆ ನೆನಪಿನ ಕಾಣಿಕೆಗಳನ್ನು ನೀಡಿ ಗೌರವಿಸಿದರು.

ಯಶಸ್ಸಿನ ಸಂಭ್ರಮದಲ್ಲಿ ಮಾತನಾಡಿದ ವಿನೋದ್‍ ಪ್ರಭಾಕರ್‌, ‘ಈ ಕಥೆಯನ್ನು ಯಾವ ಧೈರ್ಯದ ಮೇಲೆ ನನ್ನ ಹತ್ತಿರ ತಂದರೋ ಗೊತ್ತಿಲ್ಲ. ಈ ತರಹದ್ದೊಂದು ಪಾತ್ರ ಕನ್ನಡದಲ್ಲಿ ಬಂದಿರಲಿಲ್ಲ. ನನಗೆ ತೀರಾ ಹೊಸದು. ಈ ಪಾತ್ರಕ್ಕೆ ಜೀವ ತುಂಬುವುದಕ್ಕೆ ಪ್ರಯತ್ನಿಸಿದ್ದೇನೆ. ಚಿತ್ರ ನೋಡಿದವರೆಲ್ಲರೂ ನಿಮ್ಮ ಅಭಿನಯಕ್ಕೆ ನಿಮಗೆ ಪ್ರಶಸ್ತಿ ಸಿಗಬೇಕು ಅಂತ ಹೇಳುತ್ತಿದ್ದಾರೆ’ ಎಂದು ಖುಷಿಪಡುತ್ತಾರೆ.

ಚಿತ್ರದಲ್ಲೊಂದು ಅತಿಥಿ ಪಾತ್ರ ಮಾಡಿರುವ ಮಾಲಾಶ್ರೀ ಮಾತನಾಡಿ, ‘ಒಳ್ಳೆಯ ಚಿತ್ರಗಳನ್ನು ದೇವರೂ ಕೈಬಿಡುವುದಿಲ್ಲ, ಜನರೂ ಕೈಬಿಡುವುದಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ನಾನು ನಾಯಕಿಯಾಗಿ ಅಭಿನಯಿಸಿದ ಹಲವು ಚಿತ್ರಗಳು ಯಶಸ್ವಿಯಾಗಿವೆ. ಇದೇ ಮೊದಲ ಬಾರಿಗೆ ನಾನು ಪೋಷಕ ಪಾತ್ರ ಮಾಡಿದ ಚಿತ್ರ ಯಶಸ್ವಿಯಾಗಿ ನಾನು ನೆನಪಿನ ಕಾಣಿಕೆ ಸ್ವೀಕರಿಸುವಂತಾಗಿದೆ. ಎಷ್ಟೋ ವಿಲನ್‍ಗಳಿಗೆ ಹೊಡೆದಿದ್ದೇನೆ, ಶ್ರುತಿಯಂತಹ ಲೇಡಿ ವಿಲನ್‍ಗೆ ಹೊಡೀಬೇಕು ಅಂತ ಆಸೆ’ ಎಂದರು.

ಇವತ್ತಿನ ಕಾಲಘಟ್ಟದಲ್ಲಿ ಒಂದು ಚಿತ್ರ 25 ದಿನ ಓಡಿದರೆ, ಅದು 25 ವಾರ ಓಡಿದಂತೆ ಎಂದ ಶ್ರುತಿ, ಈ ಚಿತ್ರವೇನಾದರೂ 25 ದಿನ ಓಡಿದ್ದರೆ ಅದಕ್ಕೆ ವಿನೋದ್‍ ಪ್ರಭಾಕರ್‌ ಪ್ರಮುಖ ಕಾರಣ. ಚಿತ್ರದ ಫ್ರೇಮ್‍ನಲ್ಲೂ ವಿನೋದ್‍, ಟೈಗರ್‌ ಪ್ರಭಾಕರ್ ಅವರನ್ನು ನೆನಪಿಸಿದ್ದಾರೆ’ ಎಂದರು.

ನವೀನ್‍ ರೆಡ್ಡಿ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸಿರುವ ‘ಮಾದೇವ’ ಚಿತ್ರದಲ್ಲಿ ವಿನೋದ್ ಪ್ರಭಾಕರ್‌ಗೆ ನಾಯಕಿಯಾಗಿ ಸೋನಾಲ್ ಮೊಂತೆರೊ ಅಭಿನಯಿಸಿದ್ದಾರೆ. ಮಿಕ್ಕಂತೆ ಶ್ರೀನಗರ ಕಿಟ್ಟಿ, ಮಾಲಾಶ್ರೀ, ಶ್ರುತಿ, ಅಚ್ಯುತ್‍ ಕುಮಾರ್, ಕಾಕ್ರೋಜ್ ಸುಧೀ, ಮೈಕೋ ನಾಗರಾಜ್, ಬಲ ರಾಜ್ವಾಡಿ, ಮುನಿ, ಚೈತ್ರಾ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಪ್ರದ್ಯೋತ್ತನ್ ಸಂಗೀತ, ಬಾಲಕೃಷ್ಣ ತೋಟ ಛಾಯಾಗ್ರಹಣವಿದೆ. ಈ ಚಿತ್ರವನ್ನು ಕೇಶವ ನಿರ್ಮಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಆಷಾಢ ಶುಕ್ರವಾರ : ಪೂರ್ವಸಿದ್ದತೆ ಪರಿಶೀಲಿಸಿದ ಸಚಿವ ಯತೀಂದ್ರ

ಮೈಸೂರು : ಆಷಾಢ ಶುಕ್ರವಾರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ವಿಶೇಷ ಪೂಜೆ ಪ್ರಯುಕ್ತ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ…

11 hours ago

ಮಂಡ್ಯ ವಿವಿ ಅಭಿವೃದ್ಧಿಗೆ ಅನುಮಾನವೇ ಅಡ್ಡಿ

ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…

19 hours ago

ಕೊಡಗು ವಿಶ್ವವಿದ್ಯಾಲಯ ಬಗೆಹರಿಯದ ಕೊರಗು!

ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…

19 hours ago

ಚಾ.ನಗರ ವಿವಿಗೆ ಅತಿಥಿ ಅಧ್ಯಾಪಕರೇ ಆಧಾರ!

ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…

19 hours ago

ಮೈಸೂರು ವಿವಿಗೆ ಹಣಕಾಸು ಮುಗ್ಗಟ್ಟು

ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…

19 hours ago

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…

22 hours ago