ಡೈರಿ ಆಫ್ ಮಣಿಪುರ ಚಿತ್ರದ ನಾಯಕಿಯಾಗಿ ಆಯ್ಕೆ
ಪ್ರಯಾಗರಾಜ್: ಆಕರ್ಷಕ ಕಣ್ಣು, ಕೃಷ್ಣ ವರ್ಣ, ಮುಗ್ಧ ನಗುವಿನ ಮೂಲಕ ಎಲ್ಲರನ್ನು ಸೆಳೆಯುತ್ತಿರುವ ಈಕೆಯ ಹೆಸರು ಮೊನಾಲಿಸಾ. ಮಧ್ಯಪ್ರದೇಶದ ಇಂದೋರ್ನ ಬಂಜಾರ ಬುಡಕಟ್ಟು ಸಮುದಾಯಕ್ಕೆ ಸೇರಿದ ಈಕೆ ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದಳು.
ಕಳೆದ ಐದು ದಿನಗಳಿಂದ ಸಾಮಾಜಿಕ ಜಾಲತಾಣ ತೆರೆದರೆ ಸಾಕು ಈಕೆಯದ್ದೆ ಮಾತು. ಈಕೆಯ ಸೌಂದರ್ಯಕ್ಕೆ ಜನ ಮಾರು ಹೋಗಿದ್ದರು. ಇದೀಗ ಆ ಯುವತಿಗೆ ಬಾಲಿವುಡ್ ಸಿನಿಮಾದಲ್ಲಿ ನಟಿಸುವ ಅವಕಾಶ ದೊರೆತಿದೆ.
ಹೌದು… ಮಹಾ ಕುಂಭಮೇಳದಲ್ಲಿ ರುದ್ರಾಕ್ಷಿ, ಜಪಮಾಲೆ ಸೇರಿದಂತೆ ನಾನಾ ರೀತಿ ಸರಗಳನ್ನು ಮಾರುತ್ತಿದ್ದ ಈ ಬೆಡಗಿಯ ವಿಡಿಯೊವೊಂದನ್ನು ಇನ್ಫ್ಲೂಯೆನ್ಸರ್ ಒಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇಲ್ಲಿಂದ ಶುರುವಾದ ಈಕೆಯ ಹವಾ ಪ್ರತಿ ವಿಡಿಯೋ ಮಿಲಿಯನ್ಗಟ್ಟಲೆ ವೀಕ್ಷಣೆಯಾದವು. ಈಕೆಯ ಸರಳ ಸೌಂಧರ್ಯಕ್ಕೆ ಮೆಚ್ಚಿರುವ ನೆಟ್ಟಿಗರು ಮಹಾ ಕುಂಭಮೇಳದ ಮೊನಾಲಿಸಾ ಎಂದು ಕರೆದಿದ್ದಾರೆ.
ಇನ್ನೂ ಬಾಲಿವುಡ್ ಸಹ ಈಕೆಯ ಸೌಂದರ್ಯಕ್ಕೆ ಮಾರು ಹೋಗಿದ್ದು, ಈ ಯುವತಿಗೆ ಬಾಲಿವುಡ್ ಸಿನಿಮಾದಲ್ಲಿ ನಟಿಸುವ ಅವಕಾಶ ದೊರಕಿಸಿದೆ. ಬಾಲಿವುಡ್ ನಿರ್ದೇಶಕ ಸನೋಜ್ ಮಿಶ್ರ, ಆ ಯುವತಿಗೆ ತಮ್ಮ ಸಿನಿಮಾದಲ್ಲಿ ಅವಕಾಶ ನೀಡಿದ್ದಾರೆ. ‘ಡೈರಿ ಆಫ್ ಮಣಿಪುರ್’ ಹೆಸರಿನ ಸಿನಿಮಾವನ್ನು ಸನೋಜ್ ಮಿಶ್ರ ನಿರ್ದೇಶನ ಮಾಡುತ್ತಿದ್ದು, ಆ ಸಿನಿಮಾದಲ್ಲಿ ಕುಂಭಮೇಳದ ಮೊನಾಲಿಸ ನಾಯಕಿ. ಇದಕ್ಕಾಗಿ ಮೊನಾಲಿಸಾ ಲುಕ್ ಟೆಸ್ಟ್ ನಡೆಸಲಾಗಿದೆ. ವೈರಲ್ ಯುವತಿಗೆ ಮೇಕೋವರ್ ಮಾಡಲಾಗಿದ್ದು, ಮೇಕೊವರ್ ವಿಡಿಯೋ ಇದೀಗ ವೈರಲ್ ಆಗಿದೆ. ಅಲ್ಲದೆ ಮೊನಾಲಿಸಾಗೆ ನಟನಾ ತರಬೇತಿಯನ್ನೂ ಸಹ ಕೊಡಿಸಲಾಗುತ್ತಿದೆ.
ಸ್ಯಾಂಡಲ್ವುಡ್ ನಟ ಶಿವರಾಜ ಕುಮಾರ ಅವರು ನಟಿಸುತ್ತಿರುವ ತೆಲಗು ಚಿತ್ರದಲ್ಲೂ ಮೊನಾಲಿಸಾಗೆ ಒಂದು ಪಾತ್ರ ನೀಡಲಾಗುವುದು ಎಂದು ಸಹ ಬಾಲಿವುಡ್ ಹಾಗೂ ಟಾಲಿವುಡ್ನಲ್ಲಿಯೂ ಪಿಸು ಪಿಸು ಮಾತುಗಳು ಶುರುವಾಗಿವೆ.
ಹೀಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದವರಿಗೆ ಸಿನಿಮಾ ಅವಕಾಶಗಳು ಲಭಿಸುವುದು ಇದು ಮೊದಲೇನೂ ಅಲ್ಲ. ಈ ಹಿಂದೆ ಬೀದಿಯಲ್ಲಿ ಹಾಡು ಹಾಡುತ್ತಿದ್ದ ರಾನು ಮಂಡಲ್ಗೆ ಬಾಲಿವುಡ್ ಸಿನಿಮಾ ಹಾಡು ಹಾಡುವ ಅವಕಾಶ ನೀಡಲಾಗಿತ್ತು. ಇದರಿಂದಾಗಿ ರಾನು ಮಂಡಲ್ ರಾತ್ರೋರಾತ್ರಿ ಸೆಲೆಬ್ರಿಟಿ ಆಗಿಬಿಟ್ಟಿ ದ್ದರು. ಕೇರಳದಲ್ಲಿ ಮೀನು ಮಾರುತ್ತಿದ್ದ ಯುವತಿಗೆ ಫ್ಯಾಷನ್ ಶೋನಲ್ಲಿ ಶೋ ಸ್ಟಾಪರ್ ಮಾಡಲಾಗಿತ್ತು. ಮಲಯಾಳಿ ನಟಿ ಪ್ರಿಯಾ ವಾರಿಯರ್ ಕೂಡ ಸ್ಟಾರ್ ಆಗಿದ್ದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ಕಣ್ಸನ್ನೆಯ ಒಂದು ಸಣ್ಣ ಕ್ಲಿಪ್ನಿಂದಲೇ. ಇದೀಗ ಮಹಾಕುಂಭದ 16 ವರ್ಷ ವಯಸ್ಸಿನ ಬೆಡಗಿ ಮೊನಾಲಿಸಾಳ ಸರದಿ.
ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…
ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…
ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…