ಮನರಂಜನೆ

ಮಹಾ ಕುಂಭಮೇಳದ ʻಮೊನಾಲಿಸಾʼಗೆ ಬಾಲಿವುಡ್‌ ಕರೆ

ಡೈರಿ ಆಫ್‌ ಮಣಿಪುರ ಚಿತ್ರದ ನಾಯಕಿಯಾಗಿ ಆಯ್ಕೆ

ಪ್ರಯಾಗರಾಜ್‌: ಆಕರ್ಷಕ ಕಣ್ಣು, ಕೃಷ್ಣ ವರ್ಣ, ಮುಗ್ಧ ನಗುವಿನ ಮೂಲಕ ಎಲ್ಲರನ್ನು ಸೆಳೆಯುತ್ತಿರುವ ಈಕೆಯ ಹೆಸರು ಮೊನಾಲಿಸಾ. ಮಧ್ಯಪ್ರದೇಶದ ಇಂದೋರ್‌ನ ಬಂಜಾರ ಬುಡಕಟ್ಟು ಸಮುದಾಯಕ್ಕೆ ಸೇರಿದ ಈಕೆ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದಳು.

ಕಳೆದ ಐದು ದಿನಗಳಿಂದ ಸಾಮಾಜಿಕ ಜಾಲತಾಣ ತೆರೆದರೆ ಸಾಕು ಈಕೆಯದ್ದೆ ಮಾತು. ಈಕೆಯ ಸೌಂದರ್ಯಕ್ಕೆ ಜನ ಮಾರು ಹೋಗಿದ್ದರು. ಇದೀಗ ಆ ಯುವತಿಗೆ ಬಾಲಿವುಡ್‌ ಸಿನಿಮಾದಲ್ಲಿ ನಟಿಸುವ ಅವಕಾಶ ದೊರೆತಿದೆ.

ಹೌದು… ಮಹಾ ಕುಂಭಮೇಳದಲ್ಲಿ ರುದ್ರಾಕ್ಷಿ, ಜಪಮಾಲೆ ಸೇರಿದಂತೆ ನಾನಾ ರೀತಿ ಸರಗಳನ್ನು ಮಾರುತ್ತಿದ್ದ ಈ ಬೆಡಗಿಯ ವಿಡಿಯೊವೊಂದನ್ನು ಇನ್‌ಫ್ಲೂಯೆನ್ಸರ್‌ ಒಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇಲ್ಲಿಂದ ಶುರುವಾದ ಈಕೆಯ ಹವಾ ಪ್ರತಿ ವಿಡಿಯೋ ಮಿಲಿಯನ್‌ಗಟ್ಟಲೆ ವೀಕ್ಷಣೆಯಾದವು. ಈಕೆಯ ಸರಳ ಸೌಂಧರ್ಯಕ್ಕೆ ಮೆಚ್ಚಿರುವ ನೆಟ್ಟಿಗರು ಮಹಾ ಕುಂಭಮೇಳದ ಮೊನಾಲಿಸಾ ಎಂದು ಕರೆದಿದ್ದಾರೆ.

ಇನ್ನೂ ಬಾಲಿವುಡ್‌ ಸಹ ಈಕೆಯ ಸೌಂದರ್ಯಕ್ಕೆ ಮಾರು ಹೋಗಿದ್ದು, ಈ ಯುವತಿಗೆ ಬಾಲಿವುಡ್ ಸಿನಿಮಾದಲ್ಲಿ ನಟಿಸುವ ಅವಕಾಶ ದೊರಕಿಸಿದೆ. ಬಾಲಿವುಡ್ ನಿರ್ದೇಶಕ ಸನೋಜ್ ಮಿಶ್ರ, ಆ ಯುವತಿಗೆ ತಮ್ಮ ಸಿನಿಮಾದಲ್ಲಿ ಅವಕಾಶ ನೀಡಿದ್ದಾರೆ. ‘ಡೈರಿ ಆಫ್ ಮಣಿಪುರ್’ ಹೆಸರಿನ ಸಿನಿಮಾವನ್ನು ಸನೋಜ್ ಮಿಶ್ರ ನಿರ್ದೇಶನ ಮಾಡುತ್ತಿದ್ದು, ಆ ಸಿನಿಮಾದಲ್ಲಿ ಕುಂಭಮೇಳದ ಮೊನಾಲಿಸ ನಾಯಕಿ. ಇದಕ್ಕಾಗಿ ಮೊನಾಲಿಸಾ ಲುಕ್ ಟೆಸ್ಟ್ ನಡೆಸಲಾಗಿದೆ. ವೈರಲ್ ಯುವತಿಗೆ ಮೇಕೋವರ್ ಮಾಡಲಾಗಿದ್ದು, ಮೇಕೊವರ್ ವಿಡಿಯೋ ಇದೀಗ ವೈರಲ್ ಆಗಿದೆ. ಅಲ್ಲದೆ ಮೊನಾಲಿಸಾಗೆ ನಟನಾ ತರಬೇತಿಯನ್ನೂ ಸಹ ಕೊಡಿಸಲಾಗುತ್ತಿದೆ.

ಸ್ಯಾಂಡಲ್‌ವುಡ್‌ ನಟ ಶಿವರಾಜ ಕುಮಾರ ಅವರು ನಟಿಸುತ್ತಿರುವ ತೆಲಗು ಚಿತ್ರದಲ್ಲೂ ಮೊನಾಲಿಸಾಗೆ ಒಂದು ಪಾತ್ರ ನೀಡಲಾಗುವುದು ಎಂದು ಸಹ ಬಾಲಿವುಡ್‌ ಹಾಗೂ ಟಾಲಿವುಡ್‌ನಲ್ಲಿಯೂ ಪಿಸು ಪಿಸು ಮಾತುಗಳು ಶುರುವಾಗಿವೆ.

ಹೀಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದವರಿಗೆ ಸಿನಿಮಾ ಅವಕಾಶಗಳು ಲಭಿಸುವುದು ಇದು ಮೊದಲೇನೂ ಅಲ್ಲ. ಈ ಹಿಂದೆ ಬೀದಿಯಲ್ಲಿ ಹಾಡು ಹಾಡುತ್ತಿದ್ದ ರಾನು ಮಂಡಲ್‌ಗೆ ಬಾಲಿವುಡ್ ಸಿನಿಮಾ ಹಾಡು ಹಾಡುವ ಅವಕಾಶ ನೀಡಲಾಗಿತ್ತು. ಇದರಿಂದಾಗಿ ರಾನು ಮಂಡಲ್ ರಾತ್ರೋರಾತ್ರಿ ಸೆಲೆಬ್ರಿಟಿ ಆಗಿಬಿಟ್ಟಿ ದ್ದರು. ಕೇರಳದಲ್ಲಿ ಮೀನು ಮಾರುತ್ತಿದ್ದ ಯುವತಿಗೆ ಫ್ಯಾಷನ್ ಶೋನಲ್ಲಿ ಶೋ ಸ್ಟಾಪರ್ ಮಾಡಲಾಗಿತ್ತು. ಮಲಯಾಳಿ ನಟಿ ಪ್ರಿಯಾ ವಾರಿಯರ್ ಕೂಡ ಸ್ಟಾರ್ ಆಗಿದ್ದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ಕಣ್ಸನ್ನೆಯ ಒಂದು ಸಣ್ಣ ಕ್ಲಿಪ್‌ನಿಂದಲೇ. ಇದೀಗ ಮಹಾಕುಂಭದ 16 ವರ್ಷ ವಯಸ್ಸಿನ ಬೆಡಗಿ ಮೊನಾಲಿಸಾಳ ಸರದಿ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

8 hours ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

10 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

10 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

16 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

16 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

17 hours ago