ಮನರಂಜನೆ

ಅರಸಯ್ಯನಾದ ಮಹಾಂತೇಶ್: ಸೆ.19ಕ್ಕೆ ‘ಪ್ರೇಮ ಪ್ರಸಂಗ’

ಪುನೀತ್‍ ರಾಜಕುಮಾರ್ ನಿರ್ಮಾಣದ ‘ಫ್ರೆಂಚ್‍ ಬಿರಿಯಾನಿ’ ಚಿತ್ರದಲ್ಲಿನ ವಿಭಿನ್ನ ಪಾತ್ರ ಮತ್ತು ಪಾತ್ರ ಪೋಷಣೆಯ ಮೂಲಕ ಗಮನ ಸೆಳೆದವರು ಮಹಾಂತೇಶ್‍ ಹಿರೇಮಠ. ಇದೀಗ ಅವರು ‘ಅರಸಯ್ಯನ ಪ್ರೇಮ ಪ್ರಸಂಗ’ ಎಂಬ ಚಿತ್ರಕ್ಕೆ ಹೀರೋ ಆಗಿದ್ದಾರೆ. ಈ ಚಿತ್ರವು ಸೆ.19ರಂದು ಬಿಡುಗಡೆ ಆಗುತ್ತಿದ್ದು, ಅದಕ್ಕೂ ಮೊದಲು ಇತ್ತೀಚೆಗೆ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಯುವ ರಾಜಕುಮಾರ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಮೇಘಶ್ರೀ ರಾಜೇಶ್ ನಿರ್ಮಾಣದ ಈ ಚಿತ್ರಕ್ಕೆ ಜೆ.ವಿ.ಆರ್ ದೀಪು ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಮಹಾಂತೇಶ್‍ಗೆ ನಾಯಕಿಯಾಗಿ ರಶ್ಮಿತ R ಗೌಡ ನಟಿಸಿದ್ದು, ಪಿ.ಡಿ. ಸತೀಶ್‍, ಜಹಾಂಗೀರ್‍, ವಿಜಯ್‍ ಚೆಂಡೂರು, ರಾಘು ರಾಮನಕೊಪ್ಪ ಮುಂತಾದವರು ನಟಿಸಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ಮಹಾಂತೇಶ್‍, ‘ನಾನು ಜನರಿಗೆ ಪರಿಚಯವಾಗಿದ್ದೇ ಪುನೀತ್ ರಾಜಕುಮಾರ್ ನಿರ್ಮಾಣದ ‘ಫ್ರೆಂಚ್ ಬಿರಿಯಾನಿ’ ಚಿತ್ರದ ಮೂಲಕ. ಇಂದು ಪುನೀತ್ ಅವರ ಕುಟುಂಬದ ಯುವ ರಾಜಕುಮಾರ್ ನಾನು ನಾಯಕನಾಗಿ ನಟಿಸಿರುವ ಈ ಚಿತ್ರದ ಟ್ರೇಲರ್ ಅನಾವರಣ ಮಾಡಿದ್ದು ಸಂತೋಷವಾಗಿದೆ. ನಾವು ಕೆಲವು ಸ್ನೇಹಿತರು ಸೇರಿ ಈ ಸಿನಮಾದ ಕುರಿತು ಆಲೋಚಿಸುತ್ತಿದ್ದಾಗ,‌‌ ನಾನು ಈ ಚಿತ್ರದ ನಾಯಕ ಅಂತ ನಿರ್ಧಾರವಾಗಿರಲಿಲ್ಲ. ನಂತರ ಎಲ್ಲರೂ ನೀನೇ ಈ ಪಾತ್ರ ಮಾಡು ಎಂದರು. ನಂತರ ನಮ್ಮ ಚಿತ್ರದ ನಿರ್ಮಾಣಕ್ಕೆ ರಾಜೇಶ್ ಅವರು ಮುಂದಾದರು. ಒಳ್ಳೆಯ ಕಲಾವಿದರ ಹಾಗೂ ತಂತ್ರಜ್ಞರ ತಂಡದ ಚಿತ್ರ ಚೆನ್ನಾಗಿ ಮೂಡಿಬಂದಿದೆ’ ಎಂದರು.

ನಿರ್ದೇಶಕ ದೀಪು, ‘ಲೂಸಿಯಾ’ ಪವನ್ ಕುಮಾರ್ ಅವರ ಬಳಿ ಕೆಲಸ ಮಾಡಿದ್ದರಂತೆ. ‘ನಿರ್ದೇಶಕನಾಗಿ ಇದು ಮೊದಲ ಚಿತ್ರ. ಇದೊಂದು ಗ್ರಾಮೀಣ ಸೊಗಡಿನ ಪ್ರೇಮಕಥೆ. ಚಿತ್ರ ಸೆಪ್ಟೆಂಬರ್ 19 ರಂದು ತೆರೆಗೆ ಬರಲಿದೆ’ ಎಂದರು.

‘ಅರಸಯ್ಯನ ಪ್ರೇಮ ಪ್ರಸಂಗ’ ಚಿತತ್ರಕ್ಕೆ ಪ್ರವೀನ್‍ ಮತ್ತು ಪ್ರದೀಪ್‍ ಬಿ.ವಿ ಸಂಗಿತ ಸಂಯೋಜಿಸಿದ್ದು, ಗುರುಪ್ರಸಾದ್‍ ನಾರ್ನಾಡ್‍ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ನಾಳೆ ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ವಿಧಾನಮಂಡಲ ಬಜೆಟ್‌ ಅಧಿವೇಶನದ ಹಿನ್ನೆಲೆಯಲ್ಲಿ ನಾಳೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. ನಾಳೆ ಮಾರ್ಚ್.‌10ರಂದು ಸಂಜೆ ಬೆಂಗಳೂರಿನ…

59 mins ago

ಮಂಡ್ಯ| 2 ವರ್ಷದ ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ

ಮಂಡ್ಯ: ಜಿಲ್ಲೆಯ ಕೆ.ಆರ್‌.ಪೇಟೆಯ ಜಯನಗರದಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ದಂಪತಿಗಳು ತಮ್ಮ ಎರಡು ವರ್ಷದ ಮಗುವಿನ ಕತ್ತು ಸೀಳಿ ತಾವೂ…

1 hour ago

ನಂಜನಗೂಡು| ಕಸುವಿನಹಳ್ಳಿ ಗ್ರಾಮದಲ್ಲಿ ಅದ್ಧೂರಿಯಾಗಿ ಜರುಗಿದ ಶ್ರೀ ನಾರಾಯಣಸ್ವಾಮಿ ದೇಗುಲದ ಜೀರ್ಣೋದ್ಧಾರ ಕಾರ್ಯಕ್ರಮ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಪುರಾತನ ಶ್ರೀ ನಾರಾಯಣಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮವು…

2 hours ago

ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ: ಕಾಂಗ್ರೆಸ್‌ ಉಸ್ತುವಾರಿ ಸಮಿತಿ ಪಟ್ಟಿ ಪ್ರಕಟ

ಬೆಂಗಳೂರು: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಟೀಂ ರಚನೆ ಮಾಡಿದ್ದಾರೆ. ಉಪಚುನಾವಣೆಗೆ ಉಸ್ತುವಾರಿ ಸಮಿತಿ ರಚನೆ…

2 hours ago

ಆರ್‌ಎಸ್‌ಎಸ್‌ ಅನ್ನು ಯಾರೂ ಬ್ಯಾನ್‌ ಮಾಡಲು ಆಗಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಬೆಂಗಳೂರು: ಆರ್‌ಎಸ್‌ಎಸ್‌ ಮುಗಿಸುತ್ತೇವೆ ಎನ್ನುವವರು ಭ್ರಮೆಯಲ್ಲಿದ್ದಾರೆ. ನಮ್ಮ ಸಂಘಟನೆಯನ್ನು ಯಾರಿಂದಲೂ ನಿಲ್ಲಿಸಲು ಸಾಧ್ಯವಿಲ್ಲ ಎಂಬ ಕೇಂದ್ರದ ಮಾಜಿ ಸಚಿವ ಅನಂತ್‌…

2 hours ago

ಬಿಳಿಗಿರಿರಂಗನಬೆಟ್ಟ: ಬಂಡೆ ಮೇಲೆ ಚಿರತೆ ವಿಶ್ರಾಂತಿ: ವಿಡಿಯೋ ವೈರಲ್‌

ಚಾಮರಾಜನಗರ: ಗಡಿ ಜಿಲ್ಲೆ ಹಾಗೂ ಹುಲಿಗಳ ನಾಡು ಎಂದೇ ಪ್ರಸಿದ್ಧಿ ಪಡೆದಿರುವ ಚಾಮರಾಜನಗರದಲ್ಲಿ ಕಾಡು ಪ್ರಾಣಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿವೆ.…

3 hours ago