ಮನರಂಜನೆ

ಅರಸಯ್ಯನಾದ ಮಹಾಂತೇಶ್: ಸೆ.19ಕ್ಕೆ ‘ಪ್ರೇಮ ಪ್ರಸಂಗ’

ಪುನೀತ್‍ ರಾಜಕುಮಾರ್ ನಿರ್ಮಾಣದ ‘ಫ್ರೆಂಚ್‍ ಬಿರಿಯಾನಿ’ ಚಿತ್ರದಲ್ಲಿನ ವಿಭಿನ್ನ ಪಾತ್ರ ಮತ್ತು ಪಾತ್ರ ಪೋಷಣೆಯ ಮೂಲಕ ಗಮನ ಸೆಳೆದವರು ಮಹಾಂತೇಶ್‍ ಹಿರೇಮಠ. ಇದೀಗ ಅವರು ‘ಅರಸಯ್ಯನ ಪ್ರೇಮ ಪ್ರಸಂಗ’ ಎಂಬ ಚಿತ್ರಕ್ಕೆ ಹೀರೋ ಆಗಿದ್ದಾರೆ. ಈ ಚಿತ್ರವು ಸೆ.19ರಂದು ಬಿಡುಗಡೆ ಆಗುತ್ತಿದ್ದು, ಅದಕ್ಕೂ ಮೊದಲು ಇತ್ತೀಚೆಗೆ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಯುವ ರಾಜಕುಮಾರ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಮೇಘಶ್ರೀ ರಾಜೇಶ್ ನಿರ್ಮಾಣದ ಈ ಚಿತ್ರಕ್ಕೆ ಜೆ.ವಿ.ಆರ್ ದೀಪು ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಮಹಾಂತೇಶ್‍ಗೆ ನಾಯಕಿಯಾಗಿ ರಶ್ಮಿತ R ಗೌಡ ನಟಿಸಿದ್ದು, ಪಿ.ಡಿ. ಸತೀಶ್‍, ಜಹಾಂಗೀರ್‍, ವಿಜಯ್‍ ಚೆಂಡೂರು, ರಾಘು ರಾಮನಕೊಪ್ಪ ಮುಂತಾದವರು ನಟಿಸಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ಮಹಾಂತೇಶ್‍, ‘ನಾನು ಜನರಿಗೆ ಪರಿಚಯವಾಗಿದ್ದೇ ಪುನೀತ್ ರಾಜಕುಮಾರ್ ನಿರ್ಮಾಣದ ‘ಫ್ರೆಂಚ್ ಬಿರಿಯಾನಿ’ ಚಿತ್ರದ ಮೂಲಕ. ಇಂದು ಪುನೀತ್ ಅವರ ಕುಟುಂಬದ ಯುವ ರಾಜಕುಮಾರ್ ನಾನು ನಾಯಕನಾಗಿ ನಟಿಸಿರುವ ಈ ಚಿತ್ರದ ಟ್ರೇಲರ್ ಅನಾವರಣ ಮಾಡಿದ್ದು ಸಂತೋಷವಾಗಿದೆ. ನಾವು ಕೆಲವು ಸ್ನೇಹಿತರು ಸೇರಿ ಈ ಸಿನಮಾದ ಕುರಿತು ಆಲೋಚಿಸುತ್ತಿದ್ದಾಗ,‌‌ ನಾನು ಈ ಚಿತ್ರದ ನಾಯಕ ಅಂತ ನಿರ್ಧಾರವಾಗಿರಲಿಲ್ಲ. ನಂತರ ಎಲ್ಲರೂ ನೀನೇ ಈ ಪಾತ್ರ ಮಾಡು ಎಂದರು. ನಂತರ ನಮ್ಮ ಚಿತ್ರದ ನಿರ್ಮಾಣಕ್ಕೆ ರಾಜೇಶ್ ಅವರು ಮುಂದಾದರು. ಒಳ್ಳೆಯ ಕಲಾವಿದರ ಹಾಗೂ ತಂತ್ರಜ್ಞರ ತಂಡದ ಚಿತ್ರ ಚೆನ್ನಾಗಿ ಮೂಡಿಬಂದಿದೆ’ ಎಂದರು.

ನಿರ್ದೇಶಕ ದೀಪು, ‘ಲೂಸಿಯಾ’ ಪವನ್ ಕುಮಾರ್ ಅವರ ಬಳಿ ಕೆಲಸ ಮಾಡಿದ್ದರಂತೆ. ‘ನಿರ್ದೇಶಕನಾಗಿ ಇದು ಮೊದಲ ಚಿತ್ರ. ಇದೊಂದು ಗ್ರಾಮೀಣ ಸೊಗಡಿನ ಪ್ರೇಮಕಥೆ. ಚಿತ್ರ ಸೆಪ್ಟೆಂಬರ್ 19 ರಂದು ತೆರೆಗೆ ಬರಲಿದೆ’ ಎಂದರು.

‘ಅರಸಯ್ಯನ ಪ್ರೇಮ ಪ್ರಸಂಗ’ ಚಿತತ್ರಕ್ಕೆ ಪ್ರವೀನ್‍ ಮತ್ತು ಪ್ರದೀಪ್‍ ಬಿ.ವಿ ಸಂಗಿತ ಸಂಯೋಜಿಸಿದ್ದು, ಗುರುಪ್ರಸಾದ್‍ ನಾರ್ನಾಡ್‍ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

3 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

3 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

4 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

4 hours ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಸೆಪ್ಟಂಬರ್‌ 18 ಶುಕ್ರವಾರ

4 hours ago