ಮನರಂಜನೆ

ಅರಸಯ್ಯನಾದ ಮಹಾಂತೇಶ್: ಸೆ.19ಕ್ಕೆ ‘ಪ್ರೇಮ ಪ್ರಸಂಗ’

ಪುನೀತ್‍ ರಾಜಕುಮಾರ್ ನಿರ್ಮಾಣದ ‘ಫ್ರೆಂಚ್‍ ಬಿರಿಯಾನಿ’ ಚಿತ್ರದಲ್ಲಿನ ವಿಭಿನ್ನ ಪಾತ್ರ ಮತ್ತು ಪಾತ್ರ ಪೋಷಣೆಯ ಮೂಲಕ ಗಮನ ಸೆಳೆದವರು ಮಹಾಂತೇಶ್‍ ಹಿರೇಮಠ. ಇದೀಗ ಅವರು ‘ಅರಸಯ್ಯನ ಪ್ರೇಮ ಪ್ರಸಂಗ’ ಎಂಬ ಚಿತ್ರಕ್ಕೆ ಹೀರೋ ಆಗಿದ್ದಾರೆ. ಈ ಚಿತ್ರವು ಸೆ.19ರಂದು ಬಿಡುಗಡೆ ಆಗುತ್ತಿದ್ದು, ಅದಕ್ಕೂ ಮೊದಲು ಇತ್ತೀಚೆಗೆ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಯುವ ರಾಜಕುಮಾರ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಮೇಘಶ್ರೀ ರಾಜೇಶ್ ನಿರ್ಮಾಣದ ಈ ಚಿತ್ರಕ್ಕೆ ಜೆ.ವಿ.ಆರ್ ದೀಪು ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಮಹಾಂತೇಶ್‍ಗೆ ನಾಯಕಿಯಾಗಿ ರಶ್ಮಿತ R ಗೌಡ ನಟಿಸಿದ್ದು, ಪಿ.ಡಿ. ಸತೀಶ್‍, ಜಹಾಂಗೀರ್‍, ವಿಜಯ್‍ ಚೆಂಡೂರು, ರಾಘು ರಾಮನಕೊಪ್ಪ ಮುಂತಾದವರು ನಟಿಸಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ಮಹಾಂತೇಶ್‍, ‘ನಾನು ಜನರಿಗೆ ಪರಿಚಯವಾಗಿದ್ದೇ ಪುನೀತ್ ರಾಜಕುಮಾರ್ ನಿರ್ಮಾಣದ ‘ಫ್ರೆಂಚ್ ಬಿರಿಯಾನಿ’ ಚಿತ್ರದ ಮೂಲಕ. ಇಂದು ಪುನೀತ್ ಅವರ ಕುಟುಂಬದ ಯುವ ರಾಜಕುಮಾರ್ ನಾನು ನಾಯಕನಾಗಿ ನಟಿಸಿರುವ ಈ ಚಿತ್ರದ ಟ್ರೇಲರ್ ಅನಾವರಣ ಮಾಡಿದ್ದು ಸಂತೋಷವಾಗಿದೆ. ನಾವು ಕೆಲವು ಸ್ನೇಹಿತರು ಸೇರಿ ಈ ಸಿನಮಾದ ಕುರಿತು ಆಲೋಚಿಸುತ್ತಿದ್ದಾಗ,‌‌ ನಾನು ಈ ಚಿತ್ರದ ನಾಯಕ ಅಂತ ನಿರ್ಧಾರವಾಗಿರಲಿಲ್ಲ. ನಂತರ ಎಲ್ಲರೂ ನೀನೇ ಈ ಪಾತ್ರ ಮಾಡು ಎಂದರು. ನಂತರ ನಮ್ಮ ಚಿತ್ರದ ನಿರ್ಮಾಣಕ್ಕೆ ರಾಜೇಶ್ ಅವರು ಮುಂದಾದರು. ಒಳ್ಳೆಯ ಕಲಾವಿದರ ಹಾಗೂ ತಂತ್ರಜ್ಞರ ತಂಡದ ಚಿತ್ರ ಚೆನ್ನಾಗಿ ಮೂಡಿಬಂದಿದೆ’ ಎಂದರು.

ನಿರ್ದೇಶಕ ದೀಪು, ‘ಲೂಸಿಯಾ’ ಪವನ್ ಕುಮಾರ್ ಅವರ ಬಳಿ ಕೆಲಸ ಮಾಡಿದ್ದರಂತೆ. ‘ನಿರ್ದೇಶಕನಾಗಿ ಇದು ಮೊದಲ ಚಿತ್ರ. ಇದೊಂದು ಗ್ರಾಮೀಣ ಸೊಗಡಿನ ಪ್ರೇಮಕಥೆ. ಚಿತ್ರ ಸೆಪ್ಟೆಂಬರ್ 19 ರಂದು ತೆರೆಗೆ ಬರಲಿದೆ’ ಎಂದರು.

‘ಅರಸಯ್ಯನ ಪ್ರೇಮ ಪ್ರಸಂಗ’ ಚಿತತ್ರಕ್ಕೆ ಪ್ರವೀನ್‍ ಮತ್ತು ಪ್ರದೀಪ್‍ ಬಿ.ವಿ ಸಂಗಿತ ಸಂಯೋಜಿಸಿದ್ದು, ಗುರುಪ್ರಸಾದ್‍ ನಾರ್ನಾಡ್‍ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

7 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

7 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

7 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

7 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

7 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

7 hours ago