ಮನರಂಜನೆ

‘ಮಹಾರಾಜ ಆಗೆಂದು…’ ವಿನಯ್‍ಗೆ ಹರಸಿದ ಅರುಣಾ ಬಾಲರಾಜ್‍

ಕೆಲವು ದಿನಗಳ ಹಿಂದಷ್ಟೇ ‘ನಿದ್ರಾದೇವಿ ನೆಕ್ಸ್ಟ್ ಡೋರ್’ ಚಿತ್ರದ ತಾಯಿ-ಮಗನ ಸೆಂಟಿಮೆಂಟ್‍ ಹಾಡು ಬಿಡುಗಡೆಯಾಗಿತ್ತು. ಇದೀಗ ವಿನಯ್‍ ರಾಜಕುಮಾರ್ ಅಭಿನಯದ ‘ಅಂದೊಂದಿತ್ತು ಕಾಲ’ ಚಿತ್ರವು ಇದೇ ಆಗಸ್ಟ್ 29ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ ಗಣೇಶ ಹಬ್ಬಕ್ಕೂ ಮುನ್ನಾ ದಿನ ಚಿತ್ರದ ‘ಮಹಾರಾಜ ಆಗೆಂದು …’ ಎಂಬ ತಾಯಿ ಸೆಂಟಿಮೆಂಟ್ ಹಾಡನ್ನು ಬಿಡುಗಡೆ ಮಾಡಲಾಯಿತು.

‘ಕೆಜಿಎಫ್’ ಖ್ಯಾತಿಯ ಕಿನ್ನಾಳ್‍ ರಾಜ್ ಸಾಹಿತ್ಯ ಬರೆದಿರುವ ಈ ಹಾಡನ್ನು ಸುನಿಲ್ ಕಶ್ಯಪ್ ಹಾಡಿದ್ದಾರೆ. ಹಾಡಿನಲ್ಲಿ ಅರುಣಾ ಬಾಲರಾಜ್‍ ಮತ್ತು ವಿನಯ್‍ ರಾಜಕುಮಾರ್ ಕಾಣಿಸಿಕೊಂಡಿದ್ದಾರೆ.

ವಿನಯ್ ರಾಜಕುಮಾರ್‍ಗೆ ಈ ಚಿತ್ರ ಬಹಳ ವಿಶೇಷವಂತೆ. ‘ಇದೊಂದು ನಿರ್ದೇಶಕನ ಲೈಫ್ ಜರ್ನಿ. ಕೀರ್ತಿ ಅವರು ತಮ್ಮ ಜೀವನದಲ್ಲಿ ನಡೆದ ಘಟನೆಗಳನ್ನು ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಅದರಲ್ಲೂ ಅವರ ಸಿನಿಮಾ ಬದುಕಿನ ಸುತ್ತಮುತ್ತ ನಡೆದದ್ದನ್ನು ಕಥೆಯಾಗಿಸಿಕೊಂಡು ಬಹಳ ಸಹಜವಾಗಿ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ನನ್ನ ಪಾತ್ರಕ್ಕೆ ಮೂರು ಶೇಡ್‍ಗಳಿವೆ. ಚಿತ್ರದಲ್ಲಿ ನನ್ನ ಅಮ್ಮನಾಗಿ ಅರುಣಾ ಬಾಲರಾಜ್ ಕಾಣಿಸಿಕೊಂಡಿದ್ದಾರೆ. ಅವರ ಜೊತೆ ನನ್ನ ಮೂರನೇ ಚಿತ್ರ ಇದು. ಎಲ್ಲಾ ವರ್ಗದವರಿಗೂ ಇಷ್ಟವಾಗುವಂತ ಕಥೆ ಒಳಗೊಂಡಿದೆ’ ಎಂದರು.

ತಾಯಿ ಪಾತ್ರ ಮಾಡಿರುವ ಅರುಣಾ ಬಾಲರಾಜ್ ಮಾತನಾಡಿ, ‘ಮಗನನ್ನು ಆಶೀರ್ವಾದ ಮಾಡಿ ಕಳಿಸಿದ ಮೇಲೆ ಹೇಗೆ ಹೆಸರು ಮಾಡುತ್ತಾನೆ ಎಂಬುದರ ಮೇಲೆ ಕಥೆ ಇದೆ. ನಾನು ಡಬ್ಬಿಂಗ್ ಮಾಡುವ ಸಮಯದಲ್ಲಿ ಕೆಲವು ದೃಶ್ಯಗಳನ್ನು ನೋಡಿದ್ದೇನೆ. ಚಿತ್ರ ಬಹಳ ಚೆನ್ನಾಗಿ ಮೂಡಿಬಂದಿದೆ. ಅದರಲ್ಲೂ ಅಭಿಷೇಕ್‍ ಕಾಸರಗೋಡು ಅವರ ಛಾಯಾಗ್ರಹಣ ಅದ್ಭುತವಾಗಿ ಮೂಡಿ ಬಂದಿದೆ. ತಾಯಿ ತಾನು ಕಷ್ಟ ಪಟ್ಟರು ಮಕ್ಕಳಿಗೆ ಸಾಧನೆ ಮಾಡಲು ಕಳಿಸಲು ಏನೆಲ್ಲಾ ಶ್ರಮ ಪಡುತ್ತಾಳೆ ಎಂಬುದನ್ನು ಈ ಚಿತ್ರದಲ್ಲಿ ನೋಡಬಹುದು’ ಎಂದರು.

‘ಅಂದೊಂದಿತ್ತು ಕಾಲ’ ಚಿತ್ರದಲ್ಲಿ ವಿನಯ್‍ ರಾಜ್‍ಕುಮಾರ್ ಮತ್ತು ಅದಿತಿ ಜೊತೆಗೆ ನಿಶಾ ರವಿಕೃಷ್ಣನ್, ಜಗ್ಗಪ್ಪ, ಅರುಣಾ ಬಾಲರಾಜ್‍ ಮುಂತಾದವರು ನಟಿಸಿದ್ದು, ರವಿಚಂದ್ರನ್‍ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆಂಗಳೂರು, ತೀರ್ಥಹಳ್ಳಿ ಮುಂತಾದ ಕಡೆ ಚಿತ್ರದ ಚಿತ್ರೀಕರಣವಾಗಿದೆ. ಈ ಚಿತ್ರವನ್ನು ಭುವನ್‍ ಸಿನಿಮಾಸ್‍ ಅಡಿ ಸುರೇಶ್‍ ನಿರ್ಮಿಸಿದ್ದಾರೆ. ಚಿತ್ರಕ್ಕೆ ಅಭಿಷೇಕ್‍ ಕಾಸರಗೋಡು ಛಾಯಾಗ್ರಹಣವಿದೆ.

 

 

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

12 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

12 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

12 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

12 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

12 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

13 hours ago