ಮನರಂಜನೆ

‘ಮಹಾರಾಜ ಆಗೆಂದು…’ ವಿನಯ್‍ಗೆ ಹರಸಿದ ಅರುಣಾ ಬಾಲರಾಜ್‍

ಕೆಲವು ದಿನಗಳ ಹಿಂದಷ್ಟೇ ‘ನಿದ್ರಾದೇವಿ ನೆಕ್ಸ್ಟ್ ಡೋರ್’ ಚಿತ್ರದ ತಾಯಿ-ಮಗನ ಸೆಂಟಿಮೆಂಟ್‍ ಹಾಡು ಬಿಡುಗಡೆಯಾಗಿತ್ತು. ಇದೀಗ ವಿನಯ್‍ ರಾಜಕುಮಾರ್ ಅಭಿನಯದ ‘ಅಂದೊಂದಿತ್ತು ಕಾಲ’ ಚಿತ್ರವು ಇದೇ ಆಗಸ್ಟ್ 29ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ ಗಣೇಶ ಹಬ್ಬಕ್ಕೂ ಮುನ್ನಾ ದಿನ ಚಿತ್ರದ ‘ಮಹಾರಾಜ ಆಗೆಂದು …’ ಎಂಬ ತಾಯಿ ಸೆಂಟಿಮೆಂಟ್ ಹಾಡನ್ನು ಬಿಡುಗಡೆ ಮಾಡಲಾಯಿತು.

‘ಕೆಜಿಎಫ್’ ಖ್ಯಾತಿಯ ಕಿನ್ನಾಳ್‍ ರಾಜ್ ಸಾಹಿತ್ಯ ಬರೆದಿರುವ ಈ ಹಾಡನ್ನು ಸುನಿಲ್ ಕಶ್ಯಪ್ ಹಾಡಿದ್ದಾರೆ. ಹಾಡಿನಲ್ಲಿ ಅರುಣಾ ಬಾಲರಾಜ್‍ ಮತ್ತು ವಿನಯ್‍ ರಾಜಕುಮಾರ್ ಕಾಣಿಸಿಕೊಂಡಿದ್ದಾರೆ.

ವಿನಯ್ ರಾಜಕುಮಾರ್‍ಗೆ ಈ ಚಿತ್ರ ಬಹಳ ವಿಶೇಷವಂತೆ. ‘ಇದೊಂದು ನಿರ್ದೇಶಕನ ಲೈಫ್ ಜರ್ನಿ. ಕೀರ್ತಿ ಅವರು ತಮ್ಮ ಜೀವನದಲ್ಲಿ ನಡೆದ ಘಟನೆಗಳನ್ನು ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಅದರಲ್ಲೂ ಅವರ ಸಿನಿಮಾ ಬದುಕಿನ ಸುತ್ತಮುತ್ತ ನಡೆದದ್ದನ್ನು ಕಥೆಯಾಗಿಸಿಕೊಂಡು ಬಹಳ ಸಹಜವಾಗಿ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ನನ್ನ ಪಾತ್ರಕ್ಕೆ ಮೂರು ಶೇಡ್‍ಗಳಿವೆ. ಚಿತ್ರದಲ್ಲಿ ನನ್ನ ಅಮ್ಮನಾಗಿ ಅರುಣಾ ಬಾಲರಾಜ್ ಕಾಣಿಸಿಕೊಂಡಿದ್ದಾರೆ. ಅವರ ಜೊತೆ ನನ್ನ ಮೂರನೇ ಚಿತ್ರ ಇದು. ಎಲ್ಲಾ ವರ್ಗದವರಿಗೂ ಇಷ್ಟವಾಗುವಂತ ಕಥೆ ಒಳಗೊಂಡಿದೆ’ ಎಂದರು.

ತಾಯಿ ಪಾತ್ರ ಮಾಡಿರುವ ಅರುಣಾ ಬಾಲರಾಜ್ ಮಾತನಾಡಿ, ‘ಮಗನನ್ನು ಆಶೀರ್ವಾದ ಮಾಡಿ ಕಳಿಸಿದ ಮೇಲೆ ಹೇಗೆ ಹೆಸರು ಮಾಡುತ್ತಾನೆ ಎಂಬುದರ ಮೇಲೆ ಕಥೆ ಇದೆ. ನಾನು ಡಬ್ಬಿಂಗ್ ಮಾಡುವ ಸಮಯದಲ್ಲಿ ಕೆಲವು ದೃಶ್ಯಗಳನ್ನು ನೋಡಿದ್ದೇನೆ. ಚಿತ್ರ ಬಹಳ ಚೆನ್ನಾಗಿ ಮೂಡಿಬಂದಿದೆ. ಅದರಲ್ಲೂ ಅಭಿಷೇಕ್‍ ಕಾಸರಗೋಡು ಅವರ ಛಾಯಾಗ್ರಹಣ ಅದ್ಭುತವಾಗಿ ಮೂಡಿ ಬಂದಿದೆ. ತಾಯಿ ತಾನು ಕಷ್ಟ ಪಟ್ಟರು ಮಕ್ಕಳಿಗೆ ಸಾಧನೆ ಮಾಡಲು ಕಳಿಸಲು ಏನೆಲ್ಲಾ ಶ್ರಮ ಪಡುತ್ತಾಳೆ ಎಂಬುದನ್ನು ಈ ಚಿತ್ರದಲ್ಲಿ ನೋಡಬಹುದು’ ಎಂದರು.

‘ಅಂದೊಂದಿತ್ತು ಕಾಲ’ ಚಿತ್ರದಲ್ಲಿ ವಿನಯ್‍ ರಾಜ್‍ಕುಮಾರ್ ಮತ್ತು ಅದಿತಿ ಜೊತೆಗೆ ನಿಶಾ ರವಿಕೃಷ್ಣನ್, ಜಗ್ಗಪ್ಪ, ಅರುಣಾ ಬಾಲರಾಜ್‍ ಮುಂತಾದವರು ನಟಿಸಿದ್ದು, ರವಿಚಂದ್ರನ್‍ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆಂಗಳೂರು, ತೀರ್ಥಹಳ್ಳಿ ಮುಂತಾದ ಕಡೆ ಚಿತ್ರದ ಚಿತ್ರೀಕರಣವಾಗಿದೆ. ಈ ಚಿತ್ರವನ್ನು ಭುವನ್‍ ಸಿನಿಮಾಸ್‍ ಅಡಿ ಸುರೇಶ್‍ ನಿರ್ಮಿಸಿದ್ದಾರೆ. ಚಿತ್ರಕ್ಕೆ ಅಭಿಷೇಕ್‍ ಕಾಸರಗೋಡು ಛಾಯಾಗ್ರಹಣವಿದೆ.

 

 

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

11 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

11 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

11 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

11 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

11 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

11 hours ago