ಮನರಂಜನೆ

ಹೊಸ ದಾಖಲೆ ಬರೆದ ‘ಮಹಾವತಾರ ನರಸಿಂಹ’; ಜಾಗತಿಕವಾಗಿ 175 ಕೋಟಿ ರೂ. ಗಳಿಕೆ

ಭಾರತೀಯ ಚಿತ್ರಗಳು 100 ಕೋಟಿ ಕ್ಲಬ್‍ ಸೇರುವುದು ಹೊಸ ವಿಷಯವೇ ಅಲ್ಲ. ಯಾವುದೋ ಕಾಲಕ್ಕೆ ಅಂಥದ್ದೊಂದು ಸಾಧನೆ ಆಗಿದೆ. ಜನಪ್ರಿಯ ನಟರ ಮತ್ತು ತಂತ್ರಜ್ಞರ ಚಿತ್ರವೊಂದು 100 ಕೋಟಿ ರೂ. ಕ್ಲಬ್‍ ಸೇರುವುದು ದೊಡ್ಡ ವಿಷಯವೇ ಅಲ್ಲ. ಹೊಸಬರ, ಅದರಲ್ಲೂ ಯಾವುದೇ ಜನಪ್ರಿಯ ನಟರು ಇರದ ಆ್ಯನಿಮೇಟೆಡ್‍ ಚಿತ್ರವೊಂದು ಅಂಥದ್ದೊಂದು ದಾಖಲೆ ಮಾಡುವುದು ಅಪರೂಪ. ಈಗ ಅಂಥದ್ದೊಂದು ಸಾಧನೆಯನ್ನು ‘ಮಹಾವತಾರ ನರಸಿಂಹ’ ಮಾಡಿದೆ.

ಭಕ್ತ ಪ್ರಹ್ಲಾದನ ಕಥೆಯನ್ನು ಹೇಳುವ ‘ಮಹಾವತಾರ ನರಸಿಂಹ’ ಚಿತ್ರವು ಬಾಕ್ಸ್ ಆಫೀಸ್‍ನಲ್ಲಿ ಹೊಸ ದಾಖಲೆಯನ್ನೇ ಸೃಷ್ಟಿ ಮಾಡಿದೆ. ಜುಲೈ.25ರಂದು ಕನ್ನಡ ಸೇರಿದಂತೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ದೇಶಾದ್ಯಂತ ಬಿಡಗುಡೆ ಆದ ಈ ಚಿತ್ರವು ಒಟ್ಟಾರೆ 175 ಕೋಟಿ ರೂ. ಗಳಿಕೆ ದಾಟಿದ್ದು, ಈ ವಾರಾಂತ್ಯಕ್ಕೆ ಚಿತ್ರವು 200 ಕೋಟಿ ರೂ. ಕ್ಲಬ್‍ ಸೇರಲಿದೆ ಎಂದು ಹೇಳಲಾಗುತ್ತಿದೆ.

ಆ್ಯನಿಮೇಟೆಡ್‍ ಚಿತ್ರಗಳ ಪೈಕಿ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ಹೆಗ್ಗಳಿಕೆ ‘ಮಹಾವತಾರ ನರಸಿಂಹ’ ಪಾತ್ರವಾಗಿದ್ದು, ಆ ನಿಟ್ಟಿನಲ್ಲಿ ಹೊಸ ದಾಖಲೆಯನ್ನೇ ಬರೆದಿದೆ. ಕನ್ನಡದಲ್ಲಿ ಈ ಚಿತ್ರವನ್ನು ಪ್ರತಿಷ್ಠಿತ ಚಿತ್ರ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್ ಅರ್ಪಿಸುವುದರ ಜೊತೆಗೆ ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದೆ.

‘ಮಹಾವತಾರ ನರಸಿಂಹ’ ಚಿತ್ರವನ್ನು ಕ್ಲೀಂ ಪ್ರೊಡಕ್ಷನ್ಸ್ ಸಂಸ್ಥೆಯಡಿ ಶಿಲ್ಪಾ ಧವನ್‍ ನಿರ್ಮಿಸಿದರೆ, ಅವರ ಪತಿ ಅಶ್ವಿನ್ ಕುಮಾರ್ ನಿರ್ದೇಶಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

1 hour ago

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

4 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

5 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

6 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

6 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

6 hours ago