ಮನರಂಜನೆ

ಕೊಂಬುಡಿಕ್ಕಿಗೆ ಹೊರಟ ಮಹೇಂದರ್ ; ಕಿಶೋರ್ ಜೊತೆ ಹೊಸ ಆಪರೇಷನ್

ಎರಡು ವರ್ಷಗಳ ಹಿಂದೆ ‘ಪಂಪ’ ಎಂಬ ಚಿತ್ರ ನಿರ್ದೇಶಿಸಿದ್ದ ಹಿರಿಯ ನಿರ್ದೇಶಕ ಎಸ್‍. ಮಹೇಂದರ್‍, ಆ ನಂತರ ಯಾವೊಂದು ಚಿತ್ರವನ್ನು ನಿರ್ದೇಶಿಸಿರಲಿಲ್ಲ. ಈಗ ಅವರು ‘ಆಪರೇಷನ್‍ ಕೊಂಬುಡಿಕ್ಕಿ’ ಎಂಬ ಹೊಸ ಚಿತ್ರವನ್ನು ಘೋಷಿಸುತ್ತಿದ್ದಾರೆ.

ಕೊಂಬುಡಿಕ್ಕಿ ಎನ್ನುವುದು ಚಾಮರಾಜನಗರ ಜಿಲ್ಲೆಯ, ಕೊಳ್ಳೆಗಾಲ ತಾಲ್ಲೂಕಿನಲ್ಲಿರುವ ಒಂದು ಕುಗ್ರಾಮ. ನಗರ ಪ್ರದೇಶದಿಂದ ದೂರವಿರುವ ಈ ಹಳ್ಳಿಗೆ ಕೆಲವು ವರ್ಷಗಳ ಹಿಂದಿನವರೆಗೂ ಯಾವುದೇ ಸೌಕರ್ಯ, ಸೌಲಭ್ಯ ಸಿಕ್ಕಿರಲಿಲ್ಲ. ಇಲ್ಲಿ ನಡೆದ ಒಂದು ಘಟನೆಯನ್ನಿಟ್ಟುಕೊಂಡು ಮಹೇಂದರ್‍ ಚಿತ್ರ ಮಾಡುತ್ತಿರುವ ಸುದ್ದಿ ಇದೆ.

ಬಹಳ ವರ್ಷಗಳ ನಂತರ ಈ ಚಿತ್ರಕ್ಕಾಗಿ ಕಿಶೋರ್‍ ಅವರ ಜೊತೆಗೆ ಕೈಜೋಡಿಸುತ್ತಿದ್ದಾರೆ ಮಹೇಂದರ್‍. ಇದಕ್ಕೂ ಮೊದಲು ‘ಅಕ್ಕ ತಂಗಿ’ ಚಿತ್ರಕ್ಕಾಗಿ ಇಬ್ಬರೂ ಒಟ್ಟಿಗೆ ಕೆಲಸ ಮಾಡಿದ್ದರು. ಈಗ ಕಿಶೋರ್‍ ಅವರನ್ನು ನಾಯಕನನ್ನಾಗಿಸಿಕೊಂಡು ಅವರೊಂದು ಹೊಸ ಚಿತ್ರದ ನಿರ್ದೇಶನಕ್ಕೆ ಕೈ ಹಾಕಿದ್ದಾರೆ ಮಹೇಂದರ್.

ಈ ಹಿಂದೆ, ರಮೇಶ್‍ ಅರವಿಂದ್‍ ಅಭಿನಯದ ‘ಶಿವಾಜಿ ಸುರತ್ಕಲ್‍’ ಮತ್ತು ‘ಶಿವಾಜಿ ಸುರತ್ಕಲ್‍ 2’ ಚಿತ್ರಗಳನ್ನು ನಿರ್ಮಿಸಿದ್ದ ಅನೂಪ್‍ ಹನುಮಂತೇಗೌಡ, ತಮ್ಮ ಮೂರನೇ ಚಿತ್ರವಾಗಿ ‘ಆಪರೇಷನ್ ಕೊಂಬುಡಿಕ್ಕಿ’ಯನ್ನು ಕೈಗೆತ್ತಿಕೊಂಡಿದ್ದಾರೆ. ಈ ಚಿತ್ರವನ್ನು ಸಿಲ್ವರ್‌ ಸ್ಕ್ರೀನ್‌ ಸ್ಟುಡಿಯೋಸ್ ಎಂಬ ನಿರ್ಮಾಣ ಸಂಸ್ಥೆಯಡಿ ಅನೂಪ್‍ ಈ ಚಿತ್ರವನ್ನು ನಿರ್ಮಿಸಿದ್ದಾರೆ.

‘ಆಪರೇಷನ್ ಕೊಂಬುಡಿಕ್ಕಿ’ ಚಿತ್ರದ ಕಲಾವಿದರ ಆಯ್ಕೆ ನಡೆಯುತ್ತಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ. ಈ ಚಿತ್ರಕ್ಕೆ ರವಿ ಬಸ್ರೂರು ಸಂಗೀತ ಸಂಯೋಜಿಸುತ್ತಿದ್ದು, ‘ಹೆಬ್ಬುಲಿ’ ಖ್ಯಾತಿಯ ಕರುಣಾಕರ್‍ ಛಾಯಾಗ್ರಹಣ ಮಾಡುತ್ತಿದ್ದಾರೆ. ದೀಪು ಎಸ್‍. ಕುಮಾರ್ ಅವರ ಸಂಕಲನವಿದೆ.

ಭೂಮಿಕಾ

Recent Posts

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

2 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

2 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

2 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

2 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

2 hours ago

ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯ : ಸಮಿತಿ ರಚನೆ

ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ…

3 hours ago