ಮನರಂಜನೆ

ಕೊಂಬುಡಿಕ್ಕಿಗೆ ಹೊರಟ ಮಹೇಂದರ್ ; ಕಿಶೋರ್ ಜೊತೆ ಹೊಸ ಆಪರೇಷನ್

ಎರಡು ವರ್ಷಗಳ ಹಿಂದೆ ‘ಪಂಪ’ ಎಂಬ ಚಿತ್ರ ನಿರ್ದೇಶಿಸಿದ್ದ ಹಿರಿಯ ನಿರ್ದೇಶಕ ಎಸ್‍. ಮಹೇಂದರ್‍, ಆ ನಂತರ ಯಾವೊಂದು ಚಿತ್ರವನ್ನು ನಿರ್ದೇಶಿಸಿರಲಿಲ್ಲ. ಈಗ ಅವರು ‘ಆಪರೇಷನ್‍ ಕೊಂಬುಡಿಕ್ಕಿ’ ಎಂಬ ಹೊಸ ಚಿತ್ರವನ್ನು ಘೋಷಿಸುತ್ತಿದ್ದಾರೆ.

ಕೊಂಬುಡಿಕ್ಕಿ ಎನ್ನುವುದು ಚಾಮರಾಜನಗರ ಜಿಲ್ಲೆಯ, ಕೊಳ್ಳೆಗಾಲ ತಾಲ್ಲೂಕಿನಲ್ಲಿರುವ ಒಂದು ಕುಗ್ರಾಮ. ನಗರ ಪ್ರದೇಶದಿಂದ ದೂರವಿರುವ ಈ ಹಳ್ಳಿಗೆ ಕೆಲವು ವರ್ಷಗಳ ಹಿಂದಿನವರೆಗೂ ಯಾವುದೇ ಸೌಕರ್ಯ, ಸೌಲಭ್ಯ ಸಿಕ್ಕಿರಲಿಲ್ಲ. ಇಲ್ಲಿ ನಡೆದ ಒಂದು ಘಟನೆಯನ್ನಿಟ್ಟುಕೊಂಡು ಮಹೇಂದರ್‍ ಚಿತ್ರ ಮಾಡುತ್ತಿರುವ ಸುದ್ದಿ ಇದೆ.

ಬಹಳ ವರ್ಷಗಳ ನಂತರ ಈ ಚಿತ್ರಕ್ಕಾಗಿ ಕಿಶೋರ್‍ ಅವರ ಜೊತೆಗೆ ಕೈಜೋಡಿಸುತ್ತಿದ್ದಾರೆ ಮಹೇಂದರ್‍. ಇದಕ್ಕೂ ಮೊದಲು ‘ಅಕ್ಕ ತಂಗಿ’ ಚಿತ್ರಕ್ಕಾಗಿ ಇಬ್ಬರೂ ಒಟ್ಟಿಗೆ ಕೆಲಸ ಮಾಡಿದ್ದರು. ಈಗ ಕಿಶೋರ್‍ ಅವರನ್ನು ನಾಯಕನನ್ನಾಗಿಸಿಕೊಂಡು ಅವರೊಂದು ಹೊಸ ಚಿತ್ರದ ನಿರ್ದೇಶನಕ್ಕೆ ಕೈ ಹಾಕಿದ್ದಾರೆ ಮಹೇಂದರ್.

ಈ ಹಿಂದೆ, ರಮೇಶ್‍ ಅರವಿಂದ್‍ ಅಭಿನಯದ ‘ಶಿವಾಜಿ ಸುರತ್ಕಲ್‍’ ಮತ್ತು ‘ಶಿವಾಜಿ ಸುರತ್ಕಲ್‍ 2’ ಚಿತ್ರಗಳನ್ನು ನಿರ್ಮಿಸಿದ್ದ ಅನೂಪ್‍ ಹನುಮಂತೇಗೌಡ, ತಮ್ಮ ಮೂರನೇ ಚಿತ್ರವಾಗಿ ‘ಆಪರೇಷನ್ ಕೊಂಬುಡಿಕ್ಕಿ’ಯನ್ನು ಕೈಗೆತ್ತಿಕೊಂಡಿದ್ದಾರೆ. ಈ ಚಿತ್ರವನ್ನು ಸಿಲ್ವರ್‌ ಸ್ಕ್ರೀನ್‌ ಸ್ಟುಡಿಯೋಸ್ ಎಂಬ ನಿರ್ಮಾಣ ಸಂಸ್ಥೆಯಡಿ ಅನೂಪ್‍ ಈ ಚಿತ್ರವನ್ನು ನಿರ್ಮಿಸಿದ್ದಾರೆ.

‘ಆಪರೇಷನ್ ಕೊಂಬುಡಿಕ್ಕಿ’ ಚಿತ್ರದ ಕಲಾವಿದರ ಆಯ್ಕೆ ನಡೆಯುತ್ತಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ. ಈ ಚಿತ್ರಕ್ಕೆ ರವಿ ಬಸ್ರೂರು ಸಂಗೀತ ಸಂಯೋಜಿಸುತ್ತಿದ್ದು, ‘ಹೆಬ್ಬುಲಿ’ ಖ್ಯಾತಿಯ ಕರುಣಾಕರ್‍ ಛಾಯಾಗ್ರಹಣ ಮಾಡುತ್ತಿದ್ದಾರೆ. ದೀಪು ಎಸ್‍. ಕುಮಾರ್ ಅವರ ಸಂಕಲನವಿದೆ.

ಭೂಮಿಕಾ

Recent Posts

ಕೂಡುಮಂಗಳೂರು | ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಅಪಘಾತ : ಸವಾರ ಸಾವು, ಪತ್ನಿ ಗಂಭೀರ

ಕೊಡಗು : ವಾಹನ ತಪಾಸಣೆ (ಚೆಕಿಂಗ್) ನಡೆಸುತ್ತಿದ್ದ ಪೊಲೀಸರನ್ನು ಕಂಡು ಗಾಬರಿಯಾಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ,…

11 mins ago

ಸಫಾರಿ ಪುನರಾರಂಭ : ಮೈಸೂರು ಅರಣ್ಯಭವನಕ್ಕೆ ರೈತ ಮುಖಂಡರ ಮುತ್ತಿಗೆ

ಮೈಸೂರು : ನಾಗರಹೊಳೆ ಮತ್ತು ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನರಾರಂಭಿಸಿರುವುದನ್ನು ಖಂಡಿಸಿ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ನಗರದ ಅಶೋಕಪುರಂನಲ್ಲಿರುವ…

25 mins ago

32 ಕ್ಷೇತ್ರಗಳ ಟಾರ್ಗೆಟ್‌: ನಿಖಿಲ್‌ ಕುಮಾರಸ್ವಾಮಿ ರಾಜ್ಯ ಪ್ರವಾಸ

ಬೆಂಗಳೂರು: ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು 2ನೇ ಹಂತದ…

2 hours ago

1.60 ಕೋಟಿ ಲಂಚ ಪಡೆದು ಮುಡಾ ಮಾಜಿ ಆಯುಕ್ತ ನಟೇಶ್‌ಗೆ ಬಡ್ತಿ: ದಾಖಲೆ ಬಿಡುಗಡೆ ಮಾಡಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಲ್ಲದೇ ದಾಖಲೆಗಳನ್ನು ಬಿಡುಗಡೆ…

2 hours ago

ಫೆಬ್ರವರಿ.25ರಂದು ಅಜ್ಜಿಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ: ಬಡಗಲಪುರ ನಾಗೇಂದ್ರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ…

2 hours ago

ಕ್ರಿಕೆಟ್‌ ಪಂದ್ಯಾವಳಿ ವೇಳೆ ಜೇನುನೊಣಗಳ ದಾಳಿ: ಅಂಪೈರ್‌ ದಾರುಣ ಸಾವು

ಉನ್ನಾವೋ: ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ಹಿಂಡು ದಾಳಿ ಮಾಡಿದ ಪರಿಣಾಮ 65 ವರ್ಷದ ಅಂಪೈರ್ ಸಾವನ್ನಪ್ಪಿದ್ದು, ಹಲವಾರು ಆಟಗಾರರು…

3 hours ago