ಮನರಂಜನೆ

ಕೊಂಬುಡಿಕ್ಕಿಗೆ ಹೊರಟ ಮಹೇಂದರ್ ; ಕಿಶೋರ್ ಜೊತೆ ಹೊಸ ಆಪರೇಷನ್

ಎರಡು ವರ್ಷಗಳ ಹಿಂದೆ ‘ಪಂಪ’ ಎಂಬ ಚಿತ್ರ ನಿರ್ದೇಶಿಸಿದ್ದ ಹಿರಿಯ ನಿರ್ದೇಶಕ ಎಸ್‍. ಮಹೇಂದರ್‍, ಆ ನಂತರ ಯಾವೊಂದು ಚಿತ್ರವನ್ನು ನಿರ್ದೇಶಿಸಿರಲಿಲ್ಲ. ಈಗ ಅವರು ‘ಆಪರೇಷನ್‍ ಕೊಂಬುಡಿಕ್ಕಿ’ ಎಂಬ ಹೊಸ ಚಿತ್ರವನ್ನು ಘೋಷಿಸುತ್ತಿದ್ದಾರೆ.

ಕೊಂಬುಡಿಕ್ಕಿ ಎನ್ನುವುದು ಚಾಮರಾಜನಗರ ಜಿಲ್ಲೆಯ, ಕೊಳ್ಳೆಗಾಲ ತಾಲ್ಲೂಕಿನಲ್ಲಿರುವ ಒಂದು ಕುಗ್ರಾಮ. ನಗರ ಪ್ರದೇಶದಿಂದ ದೂರವಿರುವ ಈ ಹಳ್ಳಿಗೆ ಕೆಲವು ವರ್ಷಗಳ ಹಿಂದಿನವರೆಗೂ ಯಾವುದೇ ಸೌಕರ್ಯ, ಸೌಲಭ್ಯ ಸಿಕ್ಕಿರಲಿಲ್ಲ. ಇಲ್ಲಿ ನಡೆದ ಒಂದು ಘಟನೆಯನ್ನಿಟ್ಟುಕೊಂಡು ಮಹೇಂದರ್‍ ಚಿತ್ರ ಮಾಡುತ್ತಿರುವ ಸುದ್ದಿ ಇದೆ.

ಬಹಳ ವರ್ಷಗಳ ನಂತರ ಈ ಚಿತ್ರಕ್ಕಾಗಿ ಕಿಶೋರ್‍ ಅವರ ಜೊತೆಗೆ ಕೈಜೋಡಿಸುತ್ತಿದ್ದಾರೆ ಮಹೇಂದರ್‍. ಇದಕ್ಕೂ ಮೊದಲು ‘ಅಕ್ಕ ತಂಗಿ’ ಚಿತ್ರಕ್ಕಾಗಿ ಇಬ್ಬರೂ ಒಟ್ಟಿಗೆ ಕೆಲಸ ಮಾಡಿದ್ದರು. ಈಗ ಕಿಶೋರ್‍ ಅವರನ್ನು ನಾಯಕನನ್ನಾಗಿಸಿಕೊಂಡು ಅವರೊಂದು ಹೊಸ ಚಿತ್ರದ ನಿರ್ದೇಶನಕ್ಕೆ ಕೈ ಹಾಕಿದ್ದಾರೆ ಮಹೇಂದರ್.

ಈ ಹಿಂದೆ, ರಮೇಶ್‍ ಅರವಿಂದ್‍ ಅಭಿನಯದ ‘ಶಿವಾಜಿ ಸುರತ್ಕಲ್‍’ ಮತ್ತು ‘ಶಿವಾಜಿ ಸುರತ್ಕಲ್‍ 2’ ಚಿತ್ರಗಳನ್ನು ನಿರ್ಮಿಸಿದ್ದ ಅನೂಪ್‍ ಹನುಮಂತೇಗೌಡ, ತಮ್ಮ ಮೂರನೇ ಚಿತ್ರವಾಗಿ ‘ಆಪರೇಷನ್ ಕೊಂಬುಡಿಕ್ಕಿ’ಯನ್ನು ಕೈಗೆತ್ತಿಕೊಂಡಿದ್ದಾರೆ. ಈ ಚಿತ್ರವನ್ನು ಸಿಲ್ವರ್‌ ಸ್ಕ್ರೀನ್‌ ಸ್ಟುಡಿಯೋಸ್ ಎಂಬ ನಿರ್ಮಾಣ ಸಂಸ್ಥೆಯಡಿ ಅನೂಪ್‍ ಈ ಚಿತ್ರವನ್ನು ನಿರ್ಮಿಸಿದ್ದಾರೆ.

‘ಆಪರೇಷನ್ ಕೊಂಬುಡಿಕ್ಕಿ’ ಚಿತ್ರದ ಕಲಾವಿದರ ಆಯ್ಕೆ ನಡೆಯುತ್ತಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ. ಈ ಚಿತ್ರಕ್ಕೆ ರವಿ ಬಸ್ರೂರು ಸಂಗೀತ ಸಂಯೋಜಿಸುತ್ತಿದ್ದು, ‘ಹೆಬ್ಬುಲಿ’ ಖ್ಯಾತಿಯ ಕರುಣಾಕರ್‍ ಛಾಯಾಗ್ರಹಣ ಮಾಡುತ್ತಿದ್ದಾರೆ. ದೀಪು ಎಸ್‍. ಕುಮಾರ್ ಅವರ ಸಂಕಲನವಿದೆ.

ಭೂಮಿಕಾ

Recent Posts

ಉಪಸಭಾಪತಿಗೆ ಚಿತ್ರಹಿಂಸೆ ಆರೋಪ : ಐಪಿಎಸ್‌ ಅಧಿಕಾರಿ ಬಂಧನ

ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…

7 hours ago

ಮಾರ್ಚ್‌ 11ರಿಂದ ವೈದ್ಯಾಧಿಕಾರಿಗಳ ಮುಷ್ಕರ : ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…

7 hours ago

ಟ್ರಂಪ್‌ ಜಾಗತಿಕ ಸುಂಕ ರದ್ದು : ವರದಿ

ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…

8 hours ago

ಸಫಾರಿ ಆದಾಯದ ಶೇ.35 ಭಾಗ ಕಾಡಿನಂಚಿನ ಜನಕಲ್ಯಾಣಕ್ಕೆ ಬಳಕೆ : ಖಂಡ್ರೆ

ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…

8 hours ago

ವನ್ಯಜೀವಿ ಸಂಚಾರ | ಕಾಡಂಚಿನ ಗ್ರಾಮದ ಮುಖಂಡರಿಗೆ ಮಾಹಿತಿ ರವಾನಿಸಲು ಖಂಡ್ರೆ ಸೂಚನೆ

ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…

9 hours ago

ಮನರೇಗಾ ನಾಶ | ಜನರ ಅನ್ನ ಕಿತ್ತುಕೊಳ್ಳುತ್ತಿರುವ ಕೇಂದ್ರ ; ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…

9 hours ago