ಎರಡು ವರ್ಷಗಳ ಹಿಂದೆ ‘ಪಂಪ’ ಎಂಬ ಚಿತ್ರ ನಿರ್ದೇಶಿಸಿದ್ದ ಹಿರಿಯ ನಿರ್ದೇಶಕ ಎಸ್. ಮಹೇಂದರ್, ಆ ನಂತರ ಯಾವೊಂದು ಚಿತ್ರವನ್ನು ನಿರ್ದೇಶಿಸಿರಲಿಲ್ಲ. ಈಗ ಅವರು ‘ಆಪರೇಷನ್ ಕೊಂಬುಡಿಕ್ಕಿ’ ಎಂಬ ಹೊಸ ಚಿತ್ರವನ್ನು ಘೋಷಿಸುತ್ತಿದ್ದಾರೆ.
ಕೊಂಬುಡಿಕ್ಕಿ ಎನ್ನುವುದು ಚಾಮರಾಜನಗರ ಜಿಲ್ಲೆಯ, ಕೊಳ್ಳೆಗಾಲ ತಾಲ್ಲೂಕಿನಲ್ಲಿರುವ ಒಂದು ಕುಗ್ರಾಮ. ನಗರ ಪ್ರದೇಶದಿಂದ ದೂರವಿರುವ ಈ ಹಳ್ಳಿಗೆ ಕೆಲವು ವರ್ಷಗಳ ಹಿಂದಿನವರೆಗೂ ಯಾವುದೇ ಸೌಕರ್ಯ, ಸೌಲಭ್ಯ ಸಿಕ್ಕಿರಲಿಲ್ಲ. ಇಲ್ಲಿ ನಡೆದ ಒಂದು ಘಟನೆಯನ್ನಿಟ್ಟುಕೊಂಡು ಮಹೇಂದರ್ ಚಿತ್ರ ಮಾಡುತ್ತಿರುವ ಸುದ್ದಿ ಇದೆ.
ಬಹಳ ವರ್ಷಗಳ ನಂತರ ಈ ಚಿತ್ರಕ್ಕಾಗಿ ಕಿಶೋರ್ ಅವರ ಜೊತೆಗೆ ಕೈಜೋಡಿಸುತ್ತಿದ್ದಾರೆ ಮಹೇಂದರ್. ಇದಕ್ಕೂ ಮೊದಲು ‘ಅಕ್ಕ ತಂಗಿ’ ಚಿತ್ರಕ್ಕಾಗಿ ಇಬ್ಬರೂ ಒಟ್ಟಿಗೆ ಕೆಲಸ ಮಾಡಿದ್ದರು. ಈಗ ಕಿಶೋರ್ ಅವರನ್ನು ನಾಯಕನನ್ನಾಗಿಸಿಕೊಂಡು ಅವರೊಂದು ಹೊಸ ಚಿತ್ರದ ನಿರ್ದೇಶನಕ್ಕೆ ಕೈ ಹಾಕಿದ್ದಾರೆ ಮಹೇಂದರ್.
ಈ ಹಿಂದೆ, ರಮೇಶ್ ಅರವಿಂದ್ ಅಭಿನಯದ ‘ಶಿವಾಜಿ ಸುರತ್ಕಲ್’ ಮತ್ತು ‘ಶಿವಾಜಿ ಸುರತ್ಕಲ್ 2’ ಚಿತ್ರಗಳನ್ನು ನಿರ್ಮಿಸಿದ್ದ ಅನೂಪ್ ಹನುಮಂತೇಗೌಡ, ತಮ್ಮ ಮೂರನೇ ಚಿತ್ರವಾಗಿ ‘ಆಪರೇಷನ್ ಕೊಂಬುಡಿಕ್ಕಿ’ಯನ್ನು ಕೈಗೆತ್ತಿಕೊಂಡಿದ್ದಾರೆ. ಈ ಚಿತ್ರವನ್ನು ಸಿಲ್ವರ್ ಸ್ಕ್ರೀನ್ ಸ್ಟುಡಿಯೋಸ್ ಎಂಬ ನಿರ್ಮಾಣ ಸಂಸ್ಥೆಯಡಿ ಅನೂಪ್ ಈ ಚಿತ್ರವನ್ನು ನಿರ್ಮಿಸಿದ್ದಾರೆ.
‘ಆಪರೇಷನ್ ಕೊಂಬುಡಿಕ್ಕಿ’ ಚಿತ್ರದ ಕಲಾವಿದರ ಆಯ್ಕೆ ನಡೆಯುತ್ತಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ. ಈ ಚಿತ್ರಕ್ಕೆ ರವಿ ಬಸ್ರೂರು ಸಂಗೀತ ಸಂಯೋಜಿಸುತ್ತಿದ್ದು, ‘ಹೆಬ್ಬುಲಿ’ ಖ್ಯಾತಿಯ ಕರುಣಾಕರ್ ಛಾಯಾಗ್ರಹಣ ಮಾಡುತ್ತಿದ್ದಾರೆ. ದೀಪು ಎಸ್. ಕುಮಾರ್ ಅವರ ಸಂಕಲನವಿದೆ.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…