ಮನರಂಜನೆ

ಕೊಂಬುಡಿಕ್ಕಿಗೆ ಹೊರಟ ಮಹೇಂದರ್ ; ಕಿಶೋರ್ ಜೊತೆ ಹೊಸ ಆಪರೇಷನ್

ಎರಡು ವರ್ಷಗಳ ಹಿಂದೆ ‘ಪಂಪ’ ಎಂಬ ಚಿತ್ರ ನಿರ್ದೇಶಿಸಿದ್ದ ಹಿರಿಯ ನಿರ್ದೇಶಕ ಎಸ್‍. ಮಹೇಂದರ್‍, ಆ ನಂತರ ಯಾವೊಂದು ಚಿತ್ರವನ್ನು ನಿರ್ದೇಶಿಸಿರಲಿಲ್ಲ. ಈಗ ಅವರು ‘ಆಪರೇಷನ್‍ ಕೊಂಬುಡಿಕ್ಕಿ’ ಎಂಬ ಹೊಸ ಚಿತ್ರವನ್ನು ಘೋಷಿಸುತ್ತಿದ್ದಾರೆ.

ಕೊಂಬುಡಿಕ್ಕಿ ಎನ್ನುವುದು ಚಾಮರಾಜನಗರ ಜಿಲ್ಲೆಯ, ಕೊಳ್ಳೆಗಾಲ ತಾಲ್ಲೂಕಿನಲ್ಲಿರುವ ಒಂದು ಕುಗ್ರಾಮ. ನಗರ ಪ್ರದೇಶದಿಂದ ದೂರವಿರುವ ಈ ಹಳ್ಳಿಗೆ ಕೆಲವು ವರ್ಷಗಳ ಹಿಂದಿನವರೆಗೂ ಯಾವುದೇ ಸೌಕರ್ಯ, ಸೌಲಭ್ಯ ಸಿಕ್ಕಿರಲಿಲ್ಲ. ಇಲ್ಲಿ ನಡೆದ ಒಂದು ಘಟನೆಯನ್ನಿಟ್ಟುಕೊಂಡು ಮಹೇಂದರ್‍ ಚಿತ್ರ ಮಾಡುತ್ತಿರುವ ಸುದ್ದಿ ಇದೆ.

ಬಹಳ ವರ್ಷಗಳ ನಂತರ ಈ ಚಿತ್ರಕ್ಕಾಗಿ ಕಿಶೋರ್‍ ಅವರ ಜೊತೆಗೆ ಕೈಜೋಡಿಸುತ್ತಿದ್ದಾರೆ ಮಹೇಂದರ್‍. ಇದಕ್ಕೂ ಮೊದಲು ‘ಅಕ್ಕ ತಂಗಿ’ ಚಿತ್ರಕ್ಕಾಗಿ ಇಬ್ಬರೂ ಒಟ್ಟಿಗೆ ಕೆಲಸ ಮಾಡಿದ್ದರು. ಈಗ ಕಿಶೋರ್‍ ಅವರನ್ನು ನಾಯಕನನ್ನಾಗಿಸಿಕೊಂಡು ಅವರೊಂದು ಹೊಸ ಚಿತ್ರದ ನಿರ್ದೇಶನಕ್ಕೆ ಕೈ ಹಾಕಿದ್ದಾರೆ ಮಹೇಂದರ್.

ಈ ಹಿಂದೆ, ರಮೇಶ್‍ ಅರವಿಂದ್‍ ಅಭಿನಯದ ‘ಶಿವಾಜಿ ಸುರತ್ಕಲ್‍’ ಮತ್ತು ‘ಶಿವಾಜಿ ಸುರತ್ಕಲ್‍ 2’ ಚಿತ್ರಗಳನ್ನು ನಿರ್ಮಿಸಿದ್ದ ಅನೂಪ್‍ ಹನುಮಂತೇಗೌಡ, ತಮ್ಮ ಮೂರನೇ ಚಿತ್ರವಾಗಿ ‘ಆಪರೇಷನ್ ಕೊಂಬುಡಿಕ್ಕಿ’ಯನ್ನು ಕೈಗೆತ್ತಿಕೊಂಡಿದ್ದಾರೆ. ಈ ಚಿತ್ರವನ್ನು ಸಿಲ್ವರ್‌ ಸ್ಕ್ರೀನ್‌ ಸ್ಟುಡಿಯೋಸ್ ಎಂಬ ನಿರ್ಮಾಣ ಸಂಸ್ಥೆಯಡಿ ಅನೂಪ್‍ ಈ ಚಿತ್ರವನ್ನು ನಿರ್ಮಿಸಿದ್ದಾರೆ.

‘ಆಪರೇಷನ್ ಕೊಂಬುಡಿಕ್ಕಿ’ ಚಿತ್ರದ ಕಲಾವಿದರ ಆಯ್ಕೆ ನಡೆಯುತ್ತಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ. ಈ ಚಿತ್ರಕ್ಕೆ ರವಿ ಬಸ್ರೂರು ಸಂಗೀತ ಸಂಯೋಜಿಸುತ್ತಿದ್ದು, ‘ಹೆಬ್ಬುಲಿ’ ಖ್ಯಾತಿಯ ಕರುಣಾಕರ್‍ ಛಾಯಾಗ್ರಹಣ ಮಾಡುತ್ತಿದ್ದಾರೆ. ದೀಪು ಎಸ್‍. ಕುಮಾರ್ ಅವರ ಸಂಕಲನವಿದೆ.

ಭೂಮಿಕಾ

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

3 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

3 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

3 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

3 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

3 hours ago