ಮನರಂಜನೆ

ಕೊಂಬುಡಿಕ್ಕಿಗೆ ಹೊರಟ ಮಹೇಂದರ್ ; ಕಿಶೋರ್ ಜೊತೆ ಹೊಸ ಆಪರೇಷನ್

ಎರಡು ವರ್ಷಗಳ ಹಿಂದೆ ‘ಪಂಪ’ ಎಂಬ ಚಿತ್ರ ನಿರ್ದೇಶಿಸಿದ್ದ ಹಿರಿಯ ನಿರ್ದೇಶಕ ಎಸ್‍. ಮಹೇಂದರ್‍, ಆ ನಂತರ ಯಾವೊಂದು ಚಿತ್ರವನ್ನು ನಿರ್ದೇಶಿಸಿರಲಿಲ್ಲ. ಈಗ ಅವರು ‘ಆಪರೇಷನ್‍ ಕೊಂಬುಡಿಕ್ಕಿ’ ಎಂಬ ಹೊಸ ಚಿತ್ರವನ್ನು ಘೋಷಿಸುತ್ತಿದ್ದಾರೆ.

ಕೊಂಬುಡಿಕ್ಕಿ ಎನ್ನುವುದು ಚಾಮರಾಜನಗರ ಜಿಲ್ಲೆಯ, ಕೊಳ್ಳೆಗಾಲ ತಾಲ್ಲೂಕಿನಲ್ಲಿರುವ ಒಂದು ಕುಗ್ರಾಮ. ನಗರ ಪ್ರದೇಶದಿಂದ ದೂರವಿರುವ ಈ ಹಳ್ಳಿಗೆ ಕೆಲವು ವರ್ಷಗಳ ಹಿಂದಿನವರೆಗೂ ಯಾವುದೇ ಸೌಕರ್ಯ, ಸೌಲಭ್ಯ ಸಿಕ್ಕಿರಲಿಲ್ಲ. ಇಲ್ಲಿ ನಡೆದ ಒಂದು ಘಟನೆಯನ್ನಿಟ್ಟುಕೊಂಡು ಮಹೇಂದರ್‍ ಚಿತ್ರ ಮಾಡುತ್ತಿರುವ ಸುದ್ದಿ ಇದೆ.

ಬಹಳ ವರ್ಷಗಳ ನಂತರ ಈ ಚಿತ್ರಕ್ಕಾಗಿ ಕಿಶೋರ್‍ ಅವರ ಜೊತೆಗೆ ಕೈಜೋಡಿಸುತ್ತಿದ್ದಾರೆ ಮಹೇಂದರ್‍. ಇದಕ್ಕೂ ಮೊದಲು ‘ಅಕ್ಕ ತಂಗಿ’ ಚಿತ್ರಕ್ಕಾಗಿ ಇಬ್ಬರೂ ಒಟ್ಟಿಗೆ ಕೆಲಸ ಮಾಡಿದ್ದರು. ಈಗ ಕಿಶೋರ್‍ ಅವರನ್ನು ನಾಯಕನನ್ನಾಗಿಸಿಕೊಂಡು ಅವರೊಂದು ಹೊಸ ಚಿತ್ರದ ನಿರ್ದೇಶನಕ್ಕೆ ಕೈ ಹಾಕಿದ್ದಾರೆ ಮಹೇಂದರ್.

ಈ ಹಿಂದೆ, ರಮೇಶ್‍ ಅರವಿಂದ್‍ ಅಭಿನಯದ ‘ಶಿವಾಜಿ ಸುರತ್ಕಲ್‍’ ಮತ್ತು ‘ಶಿವಾಜಿ ಸುರತ್ಕಲ್‍ 2’ ಚಿತ್ರಗಳನ್ನು ನಿರ್ಮಿಸಿದ್ದ ಅನೂಪ್‍ ಹನುಮಂತೇಗೌಡ, ತಮ್ಮ ಮೂರನೇ ಚಿತ್ರವಾಗಿ ‘ಆಪರೇಷನ್ ಕೊಂಬುಡಿಕ್ಕಿ’ಯನ್ನು ಕೈಗೆತ್ತಿಕೊಂಡಿದ್ದಾರೆ. ಈ ಚಿತ್ರವನ್ನು ಸಿಲ್ವರ್‌ ಸ್ಕ್ರೀನ್‌ ಸ್ಟುಡಿಯೋಸ್ ಎಂಬ ನಿರ್ಮಾಣ ಸಂಸ್ಥೆಯಡಿ ಅನೂಪ್‍ ಈ ಚಿತ್ರವನ್ನು ನಿರ್ಮಿಸಿದ್ದಾರೆ.

‘ಆಪರೇಷನ್ ಕೊಂಬುಡಿಕ್ಕಿ’ ಚಿತ್ರದ ಕಲಾವಿದರ ಆಯ್ಕೆ ನಡೆಯುತ್ತಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ. ಈ ಚಿತ್ರಕ್ಕೆ ರವಿ ಬಸ್ರೂರು ಸಂಗೀತ ಸಂಯೋಜಿಸುತ್ತಿದ್ದು, ‘ಹೆಬ್ಬುಲಿ’ ಖ್ಯಾತಿಯ ಕರುಣಾಕರ್‍ ಛಾಯಾಗ್ರಹಣ ಮಾಡುತ್ತಿದ್ದಾರೆ. ದೀಪು ಎಸ್‍. ಕುಮಾರ್ ಅವರ ಸಂಕಲನವಿದೆ.

ಭೂಮಿಕಾ

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

8 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

8 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

8 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

8 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

8 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

8 hours ago