ಎರಡು ವರ್ಷಗಳ ಹಿಂದೆ ‘ಪಂಪ’ ಎಂಬ ಚಿತ್ರ ನಿರ್ದೇಶಿಸಿದ್ದ ಹಿರಿಯ ನಿರ್ದೇಶಕ ಎಸ್. ಮಹೇಂದರ್, ಆ ನಂತರ ಯಾವೊಂದು ಚಿತ್ರವನ್ನು ನಿರ್ದೇಶಿಸಿರಲಿಲ್ಲ. ಈಗ ಅವರು ‘ಆಪರೇಷನ್ ಕೊಂಬುಡಿಕ್ಕಿ’ ಎಂಬ ಹೊಸ ಚಿತ್ರವನ್ನು ಘೋಷಿಸುತ್ತಿದ್ದಾರೆ.
ಕೊಂಬುಡಿಕ್ಕಿ ಎನ್ನುವುದು ಚಾಮರಾಜನಗರ ಜಿಲ್ಲೆಯ, ಕೊಳ್ಳೆಗಾಲ ತಾಲ್ಲೂಕಿನಲ್ಲಿರುವ ಒಂದು ಕುಗ್ರಾಮ. ನಗರ ಪ್ರದೇಶದಿಂದ ದೂರವಿರುವ ಈ ಹಳ್ಳಿಗೆ ಕೆಲವು ವರ್ಷಗಳ ಹಿಂದಿನವರೆಗೂ ಯಾವುದೇ ಸೌಕರ್ಯ, ಸೌಲಭ್ಯ ಸಿಕ್ಕಿರಲಿಲ್ಲ. ಇಲ್ಲಿ ನಡೆದ ಒಂದು ಘಟನೆಯನ್ನಿಟ್ಟುಕೊಂಡು ಮಹೇಂದರ್ ಚಿತ್ರ ಮಾಡುತ್ತಿರುವ ಸುದ್ದಿ ಇದೆ.
ಬಹಳ ವರ್ಷಗಳ ನಂತರ ಈ ಚಿತ್ರಕ್ಕಾಗಿ ಕಿಶೋರ್ ಅವರ ಜೊತೆಗೆ ಕೈಜೋಡಿಸುತ್ತಿದ್ದಾರೆ ಮಹೇಂದರ್. ಇದಕ್ಕೂ ಮೊದಲು ‘ಅಕ್ಕ ತಂಗಿ’ ಚಿತ್ರಕ್ಕಾಗಿ ಇಬ್ಬರೂ ಒಟ್ಟಿಗೆ ಕೆಲಸ ಮಾಡಿದ್ದರು. ಈಗ ಕಿಶೋರ್ ಅವರನ್ನು ನಾಯಕನನ್ನಾಗಿಸಿಕೊಂಡು ಅವರೊಂದು ಹೊಸ ಚಿತ್ರದ ನಿರ್ದೇಶನಕ್ಕೆ ಕೈ ಹಾಕಿದ್ದಾರೆ ಮಹೇಂದರ್.
ಈ ಹಿಂದೆ, ರಮೇಶ್ ಅರವಿಂದ್ ಅಭಿನಯದ ‘ಶಿವಾಜಿ ಸುರತ್ಕಲ್’ ಮತ್ತು ‘ಶಿವಾಜಿ ಸುರತ್ಕಲ್ 2’ ಚಿತ್ರಗಳನ್ನು ನಿರ್ಮಿಸಿದ್ದ ಅನೂಪ್ ಹನುಮಂತೇಗೌಡ, ತಮ್ಮ ಮೂರನೇ ಚಿತ್ರವಾಗಿ ‘ಆಪರೇಷನ್ ಕೊಂಬುಡಿಕ್ಕಿ’ಯನ್ನು ಕೈಗೆತ್ತಿಕೊಂಡಿದ್ದಾರೆ. ಈ ಚಿತ್ರವನ್ನು ಸಿಲ್ವರ್ ಸ್ಕ್ರೀನ್ ಸ್ಟುಡಿಯೋಸ್ ಎಂಬ ನಿರ್ಮಾಣ ಸಂಸ್ಥೆಯಡಿ ಅನೂಪ್ ಈ ಚಿತ್ರವನ್ನು ನಿರ್ಮಿಸಿದ್ದಾರೆ.
‘ಆಪರೇಷನ್ ಕೊಂಬುಡಿಕ್ಕಿ’ ಚಿತ್ರದ ಕಲಾವಿದರ ಆಯ್ಕೆ ನಡೆಯುತ್ತಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ. ಈ ಚಿತ್ರಕ್ಕೆ ರವಿ ಬಸ್ರೂರು ಸಂಗೀತ ಸಂಯೋಜಿಸುತ್ತಿದ್ದು, ‘ಹೆಬ್ಬುಲಿ’ ಖ್ಯಾತಿಯ ಕರುಣಾಕರ್ ಛಾಯಾಗ್ರಹಣ ಮಾಡುತ್ತಿದ್ದಾರೆ. ದೀಪು ಎಸ್. ಕುಮಾರ್ ಅವರ ಸಂಕಲನವಿದೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…