ಮನರಂಜನೆ

‘ತಾಯಿನೇ ದೇವರ?’ ಎಂದು ಕೇಳುತ್ತಿದ್ದಾರೆ ಮಾಲಾಶ್ರೀ

ಹಿರಿಯ ನಟಿ ಮಾಲಾಶ್ರೀ ಇತ್ತೀಚೆಗಷ್ಟೇ ‘ಪೆನ್‍ ಡ್ರೈವ್‍’ ಇಟ್ಟುಕೊಂಡು ತನಿಖೆ ಮಾಡುವುದಕ್ಕೆ ಹೊರಟಿದ್ದರು. ‘ಮೆಜೆಸ್ಟಿಕ್ 2’ ಚಿತ್ರದಲ್ಲಿ ನಾಯಕನೊಂದಿಗೆ ಹೆಜ್ಜೆ ಹಾಕಿದ್ದರು. ಈಗ ‘ತಾಯಿನೇ ದೇವರ?’ ಎಂದು ಕೇಳುತ್ತಿದ್ದಾರೆ.

ಪ್ರಪಂಚದಲ್ಲಿ ತಾಯಿಯನ್ನು ದೇವರಿಗೆ ಹೋಲಿಸುತ್ತಾರೆ. ಈ ವಿಷಯವನ್ನೇ ಮುಖ್ಯವಾಗಿಟ್ಟುಕೊಂಡು ’ತಾಯಿನೇ ದೇವರ?’ ಎಂಬ ಚಿತ್ರ ಪ್ರಾರಂಭವಾಗಿದೆ. ಮಾಗಡಿ ರಸ್ತೆಯ ಲಕ್ಷೀಪುರದಲ್ಲಿರುವ ’ದಕ್ಷಿಣ ಶಿರಡಿ ಶ್ರೀ ಸಾಯಿ ಮಂದಿರ’ದಲ್ಲಿ ಚಿತ್ರದ ಮುಹೂರ್ತ ಇತ್ತೀಚೆಗೆ ನಡೆದಿದೆ.

ಈ ಚಿತ್ರವನ್ನು ಡಾ. ಸಾಯಿ ಸತೀಶ್ ತೋಟಯ್ಯ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರರಂಗದಲ್ಲಿ 16 ವರ್ಷ ಅನುಭವವಿರುವ ಅವರು, ಕಳೆದ ಎಂಟು ವರ್ಷಗಳಿಂದ ಚಿತ್ರರಂಗದಿಂದ ದೂರ ಇದ್ದರಂತೆ. ಈಗ ಶ್ರೀ ಸಾಯಿಶಕ್ತಿ ಸಿನಿ ಕಂಬೈನ್ಸ್ ಎಂಬ ನಿರ್ಮಾಣ ಸಂಸ್ಥೆಯನ್ನು ಹುಟ್ಟುಹಾಕಿ, ಕಥೆ, ಚಿತ್ರಕಥೆ ಬರೆದು ನಿರ್ಮಾಣವನ್ನೂ ಮಾಡುತ್ತಿದ್ದಾರೆ. ಈ ಚಿತ್ರವನ್ನು ಅಭಿಮಾನ್ ಎಚ್. ಕಾಗಿನಲ್ಲಿ ನಿರ್ದೇಶನ ಮಾಡುತ್ತಿದ್ದಾರೆ.

ಅಮ್ಮ, ಮಗಳ ಪ್ರೇರಣೆ ಇಟ್ಟುಕೊಂಡು ಬರೆದೆ ಕಥೆ ಇದು ಎನ್ನುವ ಅವರು, ‘ವಾಸ್ತವವಾಗಿ ಎಲ್ಲರ ಮನೆಯಲ್ಲಿ ಏನು ನಡೆಯುತ್ತದೋ ಅದನ್ನೇ ತೋರಿಸುತ್ತಿದ್ದೇನೆ. ಮೂರು ತಾಯಂದರ ಸುತ್ತ ಚಿತ್ರವು ಸಾಗುತ್ತದೆ. ಅದರಲ್ಲಿ ಪ್ರಮುಖವಾಗಿ ಭವ್ಯ ನಟಿಸುತ್ತಿದ್ದಾರೆ. ಮಾಲಾಶ್ರೀ ಪವರ್ ಫುಲ್ ಪೋಲೀಸ್ ಅಧಿಕಾರಿಯಾಗಿ, ಇಲ್ಲಿಯವರೆಗೂ ಕಾಣಿಸದ ರೀತಿಯಲ್ಲಿ ಇರುತ್ತಾರೆ. ಮಾಜಿ ಸಚಿವ ಹೆಚ್.ಎಂ.ರೇವಣ್ಣ ತಮ್ಮನ ಮಗಳು ಅನ್ವಿತಾ ಮೂರ್ತಿ ನಾಯಕಿಯರಲ್ಲಿ ಒಬ್ಬರಾಗಿರುತ್ತಾರೆ. ನೋಡುಗರು ಒಂದು ಟಿಕೆಟ್ ತೆಗೆದುಕೊಂಡರೆ, ಎರಡು ಸಿನಿಮಾ ನೋಡಿದಂತೆ ಅನಿಸುತ್ತದೆ’ ಎಂದರು.

ಈ ಚಿತ್ರದಲ್ಲಿ ಮೂವರು ನಾಯಕರು, ಮೂವರು ನಾಯಕಿಯರು ಇರುತ್ತಾರಂತೆ. ಈ ಪೈಕಿ ಒಬ್ಬ ನಾಯಕ, ನಾಯಕಿಯ ಹೆಸರನ್ನು ಗೌಪ್ಯವಾಗಿಡಲಾಗಿದೆ. ಇವರೊಂದಿಗೆ ದೊಡ್ಡಣ್ಣ, ಡಿಂಗ್ರಿ ನಾಗರಾಜ್, ಹೊನ್ನವಳ್ಳಿ ಕೃಷ್ಣ, ಬಾಲರಾಜ್, ಸ್ವಾತಿ ಗುರುದತ್, ರೇಖದಾಸ್, ಅಪೂರ್ವ, ಅನ್ವಿತಾ ಮೂರ್ತಿ, ಜೀವಿತಾ ಪ್ರಕಾಶ್, ರಾಜ್‌ಮನೀಶ್, ಗಣೇಶ್, ಪಂಕಜ, ಮುಂತಾದವರು ಅಭಿನಯಿಸುತ್ತಿದ್ದಾರೆ. ನಾಲ್ಕು ಹಾಡುಗಳು ಇರಲಿದೆ. ಬೆಂಗಳೂರು, ಮಂಗಳೂರು, ಚಿಕ್ಕಮಗಳೂರು ಕಡೆಗಳಲ್ಲಿ ಚಿತ್ರೀಕರಣ ನಡೆಸಲು ಯೋಜನೆ ಹಾಕಲಾಗಿದೆ.

ಮಾಲಾಶ್ರೀ ಇದರಲ್ಲೂ ಪೊಲೀಸ್‍ ಅಧಿಕಾರಿಯೊಂದಿಗೆ ಕಾಣಿಸಿಕೊಂಡರೂ, ಇದರಲ್ಲಿ ಅವರ ಪಾತ್ರ ಬೇರೆಯದೇ ಇರುತ್ತದಂತೆ. ‘ಇಷ್ಟು ವರ್ಷ ಪೋಲೀಸ್ ಆಫೀಸರ್ ಆಗಿ ವಿಲನ್‌ಗಳೊಂದಿಗೆ ಸೆಣಸಾಡುತ್ತಿದ್ದೆ. ಇದರಲ್ಲಿ ಹೆಚ್ಚು ಮಹಿಳೆಯರೊಂದಿಗೆ ಸನ್ನಿವೇಶಗಳು ಬರಲಿದೆ. ’ಹೃದಯ ಹಾಡಿತು’, ’ಸೋಲಿಲ್ಲದ ಸರದಾರ’ ನಂತರ ಭವ್ಯ ಅವರೊಂದಿಗೆ ತೆರೆ ಹಂಚಿಕೊಳ್ಳುತ್ತಿರುವುದು ಸಂತಸ ತಂದಿದೆ’ ಎಂದರು ಮಾಲಾಶ್ರೀ.

ಭೂಮಿಕಾ

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

7 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

9 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

10 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

10 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

10 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

11 hours ago