ಮನರಂಜನೆ

‘ಪೆನ್ ಡ್ರೈವ್’ನಲ್ಲಿ ಮಾಲಾಶ್ರೀ; ಚಿತ್ರೀಕರಣ ಪ್ರಾರಂಭ

ಎರಡು ತಿಂಗಳ ಹಿಂದೆಯೇ ತನಿಷಾ ಕುಪ್ಪುಂಡ ಅಭಿನಯದಲ್ಲಿ ‘ಪೆನ್‍ ಡ್ರೈವ್‍’ ಎಂಬ ಚಿತ್ರದ ಘೋಷಣೆಯಾಗಿತ್ತು. ಈಗ ಆ ಚಿತ್ರದ ಚಿತ್ರೀಕರಣ ಪ್ರಾರಂಭಭಾಗಿರುವುದಷ್ಟೇ ಅಲ್ಲ, ಚಿತ್ರತಂಡಕ್ಕೆ ಮಾಲಾಶ್ರೀ ಸಹ ಸೇರ್ಪಡೆಯಾಗಿದ್ದಾರೆ.

ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ರಾಜರಾಜೇಶ್ವರಿ ನಗರದ ನಿಮಿಷಾಂಬ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಕೃಷ್ಣೇ ಗೌಡ ಆರಂಭ ಫಲಕ ತೋರಿದರೆ, ಹಿರಿಯ ವಕೀಲ ರೇವಣ್ಣ ಸಿದ್ದಯ್ಯ ಕ್ಯಾಮೆರಾ ಚಾಲನೆ ಮಾಡಿದರು.

‘ಪೆನ್‍ ಡ್‍ರೈವ್‍’ ಚಿತ್ರದಲ್ಲಿ ಮಾಲಾಶ್ರೀ ಅವರ ಪಾತ್ರವೇನು? ಈ ವಿಷಯವನ್ನು ಚಿತ್ರತಂಡದವರು ಬಿಟ್ಟುಕೊಟ್ಟಿಲ್ಲ. ಅವರೊಂದು ಪ್ರಮುಖ ಪಾತ್ರ ಮಾಡುತ್ತಿದ್ದಾರೆ ಎಂದಷ್ಟೇ ಹೇಳಲಾಗಿದೆ. ಮಾಲಾಶ್ರೀ ಅವರು ‘ಆ್ಯಕ್ಷನ್‍ ಕ್ವೀನ್‍’ ಎಂದೇ ಜನಪ್ರಿಯರು. ಇದುವರೆಗೂ ಹಲವಾರು ಚಿತ್ರಗಳಲ್ಲಿ ಪೊಲೀಸ್‍ ಪಾತ್ರಗಳಲ್ಲಿ ಕಾಣಿಸಿಕೊಂಡವರು. ಈ ಚಿತ್ರದಲ್ಲೂ ಅವರು ಪೊಲೀಸ್‍ ಪಾತ್ರವನ್ನೇ ಮುಂದುವರೆಸಿರಬಹುದಾ? ಎಂಬ ಪ್ರಶ್ನೆಯೊಂದು ಎದ್ದಿದೆ.

ವಿಶೇಷವೆಂದರೆ, ಈ ಚಿತ್ರದಲ್ಲಿ ಮಾಲಾಶ್ರೀ ಜೊತೆಗೆ ‘ಬಿಗ್‍ ಬಾಸ್‍’ ಖ್ಯಾತಿಯ ತನಿಷಾ ಕುಪ್ಪುಂದ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ತನಿಷಾ ಈಗಾಗಲೇ ಕೆಲವು ಚಿತ್ರಗಳಲ್ಲಿ ಸಣ್ಣಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಈ ಬಾರಿ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.

ಮಾಲಾಶ್ರೀ ಮತ್ತು ತನಿಷಾ ಕುಪ್ಪುಂಡ ಜೊತೆಗೆ ರಾಧಿಕಾ ರಾಮ್, ಸಂಜನಾ ನಾಯ್ಡು, ಅರ್ಚನ, ರೇಣುಕಾ, ಗೀತಾ, ಭಾಗ್ಯ, ಗೀತಪ್ರಿಯ, ಕರಿಸುಬ್ಬು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ವಿ. ನಾಗೇಂದ್ರ ಪ್ರಸಾದ್ ಹಾಡುಗಳನ್ನು ಬರೆಯುವುದರ ಜೊತೆಗೆ ಸಂಗೀತವನ್ನೂ ಸಂಯೋಜಿಸುತ್ತಿದ್ದಾರೆ.

ಆರ್.ಎಚ್‍. ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್. ಹನುಮಂತರಾಜು ಹಾಗೂ ಲಯನ್ ಎಸ್. ವೆಂಕಟೇಶ್ ನಿರ್ಮಾಣದ ಈ ಚಿತ್ರಕ್ಕೆ ಸೆಬಾಸ್ಟಿನ್ ಡೇವಿಡ್ ಕಥೆ-ಚಿತ್ರಕಥೆ ಬರೆದು ನಿರ್ದೇಶನದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ.

ಭೂಮಿಕಾ

Recent Posts

2ನೇ ಮದುವೆಗೆ ಸಜ್ಜಾಗಿದ್ದ ವರ : ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ ಮೊದಲ ಹೆಂಡತಿ!

ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…

1 hour ago

ಕೆಎಸ್‌ಆರ್‌ಟಿಸಿ ಬಸ್‌ ಮೇಲೆ ತಂಬಾಕು ಪ್ರಚಾರ : ತೆರವಿಗೆ ಫೆ.15 ಗಡವು

ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ…

2 hours ago

ಕೇಂದ್ರ ಸೂಚನೆ ಮೇರೆಗೆ ದರ ಏರಿಕೆ ಕೈಬಿಟ್ಟ ನಮ್ಮ ಮೆಟ್ರೋ

ಬೆಂಗಳೂರು : ಮೆಟ್ರೋ ದರ ಏರಿಕೆಗೆ ಬಿಎಂಆರ್‌ಸಿಎಲ್ ಬ್ರೇಕ್ ಹಾಕಿದೆ. ಸೋಮವಾರದಿಂದ ಶೇ.5ರಷ್ಟು ದರ ಏರಿಕೆಗೆ ಬಿಎಂಆರ್‌ಸಿಎಲ್ ಮುಂದಾಗಿತ್ತು. ಆದರೆ…

2 hours ago

ಮೈಸೂರು | ಕೇಂದ್ರ ಕಾರಾಗೃಹಕ್ಕೆ ಭೇಟಿ, ಪರಿಶೀಲನೆ ನಡೆಸಿದ ಅಲೋಕ್‌ಕುಮಾರ್‌

ಮೈಸೂರು : ಸಜಾ ಬಂಧಿಗಳು ಕಾರಾಗೃಹದಿಂದ ಬಿಡುಗಡೆಯಾಗುವುದರೊಳಗೆ ಉತ್ತಮ ನಡತೆಯನ್ನು ಹೊಂದಿ ಹೊರಗೆ ಹೋದ ಬಳಿಕ ಸಮಾಜಮುಖಿ ಜೀವನ ಆರಂಭಿಸಬೇಕು…

2 hours ago

2028ಕ್ಕೆ ಮೈತ್ರಿ ಸರ್ಕಾರ | ಎಚ್‌ಡಿಕೆ ಸಿಎಂ ಎಂದ ಜಿ.ಟಿ.ಹರೀಶ್‌ಗೌಡ

ಹುಣಸೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್‌ಗೌಡ…

2 hours ago

ಪ್ರೀತಿ ಹೆಸರಿನಲ್ಲಿ ಬೆದರಿಕೆ : ತಾಯಿ-ಮಗಳ ಆತ್ಮಹತ್ಯೆ

ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ…

2 hours ago