ಮನರಂಜನೆ

‘ಪೆನ್ ಡ್ರೈವ್’ನಲ್ಲಿ ಮಾಲಾಶ್ರೀ; ಚಿತ್ರೀಕರಣ ಪ್ರಾರಂಭ

ಎರಡು ತಿಂಗಳ ಹಿಂದೆಯೇ ತನಿಷಾ ಕುಪ್ಪುಂಡ ಅಭಿನಯದಲ್ಲಿ ‘ಪೆನ್‍ ಡ್ರೈವ್‍’ ಎಂಬ ಚಿತ್ರದ ಘೋಷಣೆಯಾಗಿತ್ತು. ಈಗ ಆ ಚಿತ್ರದ ಚಿತ್ರೀಕರಣ ಪ್ರಾರಂಭಭಾಗಿರುವುದಷ್ಟೇ ಅಲ್ಲ, ಚಿತ್ರತಂಡಕ್ಕೆ ಮಾಲಾಶ್ರೀ ಸಹ ಸೇರ್ಪಡೆಯಾಗಿದ್ದಾರೆ.

ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ರಾಜರಾಜೇಶ್ವರಿ ನಗರದ ನಿಮಿಷಾಂಬ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಕೃಷ್ಣೇ ಗೌಡ ಆರಂಭ ಫಲಕ ತೋರಿದರೆ, ಹಿರಿಯ ವಕೀಲ ರೇವಣ್ಣ ಸಿದ್ದಯ್ಯ ಕ್ಯಾಮೆರಾ ಚಾಲನೆ ಮಾಡಿದರು.

‘ಪೆನ್‍ ಡ್‍ರೈವ್‍’ ಚಿತ್ರದಲ್ಲಿ ಮಾಲಾಶ್ರೀ ಅವರ ಪಾತ್ರವೇನು? ಈ ವಿಷಯವನ್ನು ಚಿತ್ರತಂಡದವರು ಬಿಟ್ಟುಕೊಟ್ಟಿಲ್ಲ. ಅವರೊಂದು ಪ್ರಮುಖ ಪಾತ್ರ ಮಾಡುತ್ತಿದ್ದಾರೆ ಎಂದಷ್ಟೇ ಹೇಳಲಾಗಿದೆ. ಮಾಲಾಶ್ರೀ ಅವರು ‘ಆ್ಯಕ್ಷನ್‍ ಕ್ವೀನ್‍’ ಎಂದೇ ಜನಪ್ರಿಯರು. ಇದುವರೆಗೂ ಹಲವಾರು ಚಿತ್ರಗಳಲ್ಲಿ ಪೊಲೀಸ್‍ ಪಾತ್ರಗಳಲ್ಲಿ ಕಾಣಿಸಿಕೊಂಡವರು. ಈ ಚಿತ್ರದಲ್ಲೂ ಅವರು ಪೊಲೀಸ್‍ ಪಾತ್ರವನ್ನೇ ಮುಂದುವರೆಸಿರಬಹುದಾ? ಎಂಬ ಪ್ರಶ್ನೆಯೊಂದು ಎದ್ದಿದೆ.

ವಿಶೇಷವೆಂದರೆ, ಈ ಚಿತ್ರದಲ್ಲಿ ಮಾಲಾಶ್ರೀ ಜೊತೆಗೆ ‘ಬಿಗ್‍ ಬಾಸ್‍’ ಖ್ಯಾತಿಯ ತನಿಷಾ ಕುಪ್ಪುಂದ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ತನಿಷಾ ಈಗಾಗಲೇ ಕೆಲವು ಚಿತ್ರಗಳಲ್ಲಿ ಸಣ್ಣಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಈ ಬಾರಿ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.

ಮಾಲಾಶ್ರೀ ಮತ್ತು ತನಿಷಾ ಕುಪ್ಪುಂಡ ಜೊತೆಗೆ ರಾಧಿಕಾ ರಾಮ್, ಸಂಜನಾ ನಾಯ್ಡು, ಅರ್ಚನ, ರೇಣುಕಾ, ಗೀತಾ, ಭಾಗ್ಯ, ಗೀತಪ್ರಿಯ, ಕರಿಸುಬ್ಬು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ವಿ. ನಾಗೇಂದ್ರ ಪ್ರಸಾದ್ ಹಾಡುಗಳನ್ನು ಬರೆಯುವುದರ ಜೊತೆಗೆ ಸಂಗೀತವನ್ನೂ ಸಂಯೋಜಿಸುತ್ತಿದ್ದಾರೆ.

ಆರ್.ಎಚ್‍. ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್. ಹನುಮಂತರಾಜು ಹಾಗೂ ಲಯನ್ ಎಸ್. ವೆಂಕಟೇಶ್ ನಿರ್ಮಾಣದ ಈ ಚಿತ್ರಕ್ಕೆ ಸೆಬಾಸ್ಟಿನ್ ಡೇವಿಡ್ ಕಥೆ-ಚಿತ್ರಕಥೆ ಬರೆದು ನಿರ್ದೇಶನದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ.

ಭೂಮಿಕಾ

Recent Posts

ತುಮಕೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ

ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ…

1 hour ago

ಅಗತ್ಯವಿದ್ದರೆ ಹುಚ್ಚು ಬೀದಿ ನಾಯಿಗಳನ್ನು ಕೊಲ್ಲಿ: ಸುಪ್ರೀಂಕೋರ್ಟ್‌ ಅನುಮತಿ

ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್‌ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.…

1 hour ago

ಉಸಿರು ಚೆಲ್ಲಿದ ದುಬಾರೆಯ ಮಾರ್ತಾಂಡ ಆನೆ

ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್‌ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…

3 hours ago

ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್‌ ಬ್ರೇಕ್

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…

4 hours ago

ನಾಳೆ ರಾಜ್ಯಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌

ಬೆಂಗಳೂರು: ಆನ್‌ಲೈನ್‌ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌ ಆಗಲಿವೆ. ಅಖಿಲ…

4 hours ago

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

6 hours ago