ಮನರಂಜನೆ

ಮಲಯಾಳಂಗೆ KVN ಪ್ರೊಡಕ್ಷನ್ಸ್; ‘ಮಂಜುಮ್ಮೆಲ್ ಬಾಯ್ಸ್’ ನಿರ್ದೇಶಕರೊಂದಿಗೆ ಚಿತ್ರ

ಕನ್ನಡದ ಜನಪ್ರಿಯ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಕೆವಿಎನ್‍ ಪ್ರೊಡಕ್ಷನ್ಸ್, ನೂರಾರು ಕೋಟಿಗಳನ್ನು ಈಗಾಗಲೇ ಚಿತ್ರರಂಗದಲ್ಲಿ ಹೂಡಿಕೆ ಮಾಡಿದೆ. ಯಶ್‍ ಅಭಿನಯದ ‘ಟಾಕ್ಸಿಕ್‍’, ಧ್ರುವ ಸರ್ಜಾ ಅಭಿನಯದ ‘ಕೆಡಿ – ದಿ ಡೆವಿಲ್‍’ ಮತ್ತು ತಮಿಳಿನ ವಿಜಯ್‍ ಅಭಿನಯದಲ್ಲಿ ಚಿತ್ರಗಳನ್ನು ನಿರ್ಮಿಸುತ್ತಿದೆ. ಇದೆಲ್ಲದರ ಮಧ್ಯೆ, KVN ಪ್ರೊಡಕ್ಷನ್ಸ್ನ ವೆಂಕಟ್‍ನಾರಾಯಣ್‍, ಮಲಯಾಳಂನಲ್ಲಿ ಚಿತ್ರವೊಂದನ್ನು ನಿರ್ಮಿಸುವುದಕ್ಕೆ ಸಜ್ಜಾಗಿದ್ದಾರೆ. ಈ ಚಿತ್ರವನ್ನು ಅವರು ತೆಸ್ಪಿಯನ್ ಫಿಲ್ಮ್ಸ್ ಜೊತೆಗೆ ಸೇರಿ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ.

ಕಳೆದ ವರ್ಷ ವಿಜಯ್‍ ಅಭಿನಯದ ಚಿತ್ರವನ್ನು ನಿರ್ಮಿಸುವ ಮೂಲಕ ತಮಿಳು ಚಿತ್ರರಂಗಕ್ಕೆ ಕಾಲಿಟ್ಟಿದ್ದ KVN ಪ್ರೊಡಕ್ಷನ್ಸ್ ಸಂಸ್ಥೆಯು, ಇದೀಗ ಮಲಯಾಳಂ ಚಿತ್ರವನ್ನು ನಿರ್ಮಿಸುವ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟಿದೆ. ಈ ಚಿತ್ರವನ್ನು ಚಿದಂಬರಂ ನಿರ್ದೇಶನ ಮಾಡುತ್ತಿದ್ದಾರೆ. ಕಳೆದ ವರ್ಷ ಮಲಯಾಳಂನಲ್ಲಿ ಬಿಡುಗಡೆಯಾದ ಅತ್ಯಂತ ಯಶಸ್ವಿ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ನಿರ್ಮಿಸಿದ್ದು, ಇದೇ ಚಿದಂಬರಂ. ಇನ್ನು, ‘ರೋಮಾಂಚನಂ’, ‘ಆವೇಶಂ’ ಮುಂತಾದ ಚಿತ್ರಗಳಿಗೆ ಕಥೆ ಬರೆದಿರುವ ಜೀತು ಮಾಧವನ್ ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ.

ಈ ಕುರಿತು ಮಾತನಾಡಿರುವ ವೆಂಕಟ್‍ ಕೆ ನಾರಾಯಣ್‍, ’ನಾವು ನಮ್ಮ ಸಂಸ್ಥೆಯಿಂದ ಭಿನ್ನ ಬಗೆಯ, ಸದಭಿರುಚಿಯ ಮನರಂಜನಾತ್ಮಕ ಸಿನಿಮಾಗಳನ್ನ ನೀಡಲು ಮುಂದಾಗಿದ್ದೇವೆ. ಅದರಂತೆ ಹೊಸ ಚಿಂತನೆ ಇರುವ ನಿರ್ದೇಶಕರ ಮೂಲಕ ಪ್ರೇಕ್ಷಕರನ್ನು ತಲುಪುವತ್ತ ಹೆಜ್ಜೆ ಇಟ್ಟಿದ್ದೇವೆ. ಈ ಪ್ರಯತ್ನದಲ್ಲಿ ಇದೀಗ ಮಲಯಾಳಂನಲ್ಲಿ ಚಿತ್ರರಂಗಕ್ಕೆ ಕಾಲಿಡುವುದರ ಜೊತೆಗೆ, ಮಲಯಾಳಂನ ನಮ್ಮ ಮೊದಲ ಚಿತ್ರಕ್ಕಾಗಿ ಚಿದಂಬರಂ ಅವರ ಜೊತೆಗೆ ಕೈಜೋಡಿಸಿದ್ದೇವೆ’ ಎನ್ನುತ್ತಾರೆ.

ಈ ಹೊಸ ಚಿತ್ರದ ಪೋಸ್ಟರ್‍ ಬಿಡುಡೆಯಾಗಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ತಾಯಿಯೊಬ್ಬಳು ನಗರದತ್ತ ನಡೆದು ಹೋಗುತ್ತಿರುವ ಮತ್ತು ಆಕೆಯನ್ನು ಅವಳ ಮಗ ನೋಡುತ್ತಿರುವ ದೃಶ್ಯವಿದೆ. ಇದೊಂದು ತಾಯಿ-ಮಗನ ಸೆಂಟಿಮಮೆಂಟ್‍ನ ಚಿತ್ರವಿರಬಹುದು ಎಂದು ಹೇಳಲಾಗುತ್ತಿದೆ.

KVN ಪ್ರೊಡಕ್ಷನ್ಸ್ ಸಂಸ್ಥೆಯ ಮೊದಲ ಮಲಯಾಳಂ ಚಿತ್ರಕ್ಕೆ ಶೈಜು ಖಾಲೆದ್‍ ಛಾಯಾಗ್ರಹಣ, ಸುಶಿನ್‍ ಶ್ಯಾಮ್‍ ಸಂಗೀತವಿದೆ. ಇನ್ನು, ಕಲಾವಿದರ ಪಟ್ಟಿ ಇನ್ನಷ್ಟೇ ಬಿಡುಗಡೆ ಆಗಬೇಕಿದೆ.

ಭೂಮಿಕಾ

Recent Posts

ಮದ್ದೂರು| ಚಿಕ್ಕದೊಡ್ಡಿಯಲ್ಲಿ ಬೋನಿಗೆ ಬಿದ್ದ ಚಿರತೆ

ಮದ್ದೂರು: ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೊಪ್ಪ ಸಮೀಪದ ಗೂಳೂರು-ಚಿಕ್ಕದೊಡ್ಡಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ ಬೋನಿಗೆ ಚಿರತೆಯೊಂದು ಸೆರೆಯಾಗಿದೆ.…

21 mins ago

ನಂದಿನಿ ಉತ್ಪನ್ನಗಳ ಕುರಿತು ವದಂತಿಗಳಿಗೆ ಕಿವಿಗೊಡಬೇಡಿ: ಕೆಎಂಎಫ್‌

ಬೆಂಗಳೂರು: ನಂದಿನಿ ಬ್ರಾಂಡ್‌ನ ಕೆಲವು ಉತ್ಪನ್ನಗಳ ಸೇವನೆ ಅಸುರಕ್ಷಿತ, ಆರೋಗ್ಯಕ್ಕೆ ಹಾನಿ ಎಂದೆಲ್ಲಾ ಸೋಷಿಯಲ್‌ ಮೀಡಿಯಾದಲ್ಲಿ ಹೇಳಿಕೆಗಳು ವೈರಲ್‌ ಆಗುತ್ತಿವೆ.…

38 mins ago

ಸಿಎಂ ಸಿದ್ದರಾಮಯ್ಯ ಆಡಳಿತ ನೋಡಿ ಜನ ನಗುತ್ತಿದ್ದಾರೆ: ಎಂಎಲ್‌ಸಿ ಎಚ್.ವಿಶ್ವನಾಥ್‌ ಲೇವಡಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತ ವೈಖರಿ ನೋಡಿ ಜನ ಛೀ... ಥೂ.. ಎನ್ನುತ್ತಿದ್ದಾರೆ. ಇಂಥ ಆಡಳಿತ ಕೊಡಲು ನಿಮಗೆ ನಾಚಿಕೆಯಾಗುವುದಿಲ್ಲವೇ?…

50 mins ago

ಫೆಬ್ರವರಿ.20ರಂದು ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

53 mins ago

ಫೆ.28ರಿಂದ ದ್ವಿತೀಯ ಪಿಯುಸಿ, ಮಾರ್ಚ್.‌18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ 2026-27 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ- 1 ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ಹಾಗೂ…

1 hour ago

ಕುಶಾಲನಗರ| ಲಂಚ ಪಡೆಯುತ್ತಿದ್ದ ನೌಕರ ಲೋಕಾಯುಕ್ತ ಬಲೆಗೆ

ಕುಶಾಲನಗರ: ಗುತ್ತಿಗೆದಾರ ಲೈಸೆನ್ಸ್‌ ನೀಡಲು ಲೋಕೋಪಯೋಗಿ ಇಲಾಖೆ ಕಚೇರಿಯ ನೌಕರನೊಬ್ಬ ಲಂಚ ಪಡೆಯುತ್ತಿದ್ದ ಸಂದರ್ಭ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದು,…

1 hour ago