ಕನ್ನಡದ ಜನಪ್ರಿಯ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಕೆವಿಎನ್ ಪ್ರೊಡಕ್ಷನ್ಸ್, ನೂರಾರು ಕೋಟಿಗಳನ್ನು ಈಗಾಗಲೇ ಚಿತ್ರರಂಗದಲ್ಲಿ ಹೂಡಿಕೆ ಮಾಡಿದೆ. ಯಶ್ ಅಭಿನಯದ ‘ಟಾಕ್ಸಿಕ್’, ಧ್ರುವ ಸರ್ಜಾ ಅಭಿನಯದ ‘ಕೆಡಿ – ದಿ ಡೆವಿಲ್’ ಮತ್ತು ತಮಿಳಿನ ವಿಜಯ್ ಅಭಿನಯದಲ್ಲಿ ಚಿತ್ರಗಳನ್ನು ನಿರ್ಮಿಸುತ್ತಿದೆ. ಇದೆಲ್ಲದರ ಮಧ್ಯೆ, KVN ಪ್ರೊಡಕ್ಷನ್ಸ್ನ ವೆಂಕಟ್ನಾರಾಯಣ್, ಮಲಯಾಳಂನಲ್ಲಿ ಚಿತ್ರವೊಂದನ್ನು ನಿರ್ಮಿಸುವುದಕ್ಕೆ ಸಜ್ಜಾಗಿದ್ದಾರೆ. ಈ ಚಿತ್ರವನ್ನು ಅವರು ತೆಸ್ಪಿಯನ್ ಫಿಲ್ಮ್ಸ್ ಜೊತೆಗೆ ಸೇರಿ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ.
ಕಳೆದ ವರ್ಷ ವಿಜಯ್ ಅಭಿನಯದ ಚಿತ್ರವನ್ನು ನಿರ್ಮಿಸುವ ಮೂಲಕ ತಮಿಳು ಚಿತ್ರರಂಗಕ್ಕೆ ಕಾಲಿಟ್ಟಿದ್ದ KVN ಪ್ರೊಡಕ್ಷನ್ಸ್ ಸಂಸ್ಥೆಯು, ಇದೀಗ ಮಲಯಾಳಂ ಚಿತ್ರವನ್ನು ನಿರ್ಮಿಸುವ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟಿದೆ. ಈ ಚಿತ್ರವನ್ನು ಚಿದಂಬರಂ ನಿರ್ದೇಶನ ಮಾಡುತ್ತಿದ್ದಾರೆ. ಕಳೆದ ವರ್ಷ ಮಲಯಾಳಂನಲ್ಲಿ ಬಿಡುಗಡೆಯಾದ ಅತ್ಯಂತ ಯಶಸ್ವಿ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ನಿರ್ಮಿಸಿದ್ದು, ಇದೇ ಚಿದಂಬರಂ. ಇನ್ನು, ‘ರೋಮಾಂಚನಂ’, ‘ಆವೇಶಂ’ ಮುಂತಾದ ಚಿತ್ರಗಳಿಗೆ ಕಥೆ ಬರೆದಿರುವ ಜೀತು ಮಾಧವನ್ ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ.
ಈ ಕುರಿತು ಮಾತನಾಡಿರುವ ವೆಂಕಟ್ ಕೆ ನಾರಾಯಣ್, ’ನಾವು ನಮ್ಮ ಸಂಸ್ಥೆಯಿಂದ ಭಿನ್ನ ಬಗೆಯ, ಸದಭಿರುಚಿಯ ಮನರಂಜನಾತ್ಮಕ ಸಿನಿಮಾಗಳನ್ನ ನೀಡಲು ಮುಂದಾಗಿದ್ದೇವೆ. ಅದರಂತೆ ಹೊಸ ಚಿಂತನೆ ಇರುವ ನಿರ್ದೇಶಕರ ಮೂಲಕ ಪ್ರೇಕ್ಷಕರನ್ನು ತಲುಪುವತ್ತ ಹೆಜ್ಜೆ ಇಟ್ಟಿದ್ದೇವೆ. ಈ ಪ್ರಯತ್ನದಲ್ಲಿ ಇದೀಗ ಮಲಯಾಳಂನಲ್ಲಿ ಚಿತ್ರರಂಗಕ್ಕೆ ಕಾಲಿಡುವುದರ ಜೊತೆಗೆ, ಮಲಯಾಳಂನ ನಮ್ಮ ಮೊದಲ ಚಿತ್ರಕ್ಕಾಗಿ ಚಿದಂಬರಂ ಅವರ ಜೊತೆಗೆ ಕೈಜೋಡಿಸಿದ್ದೇವೆ’ ಎನ್ನುತ್ತಾರೆ.
ಈ ಹೊಸ ಚಿತ್ರದ ಪೋಸ್ಟರ್ ಬಿಡುಡೆಯಾಗಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ತಾಯಿಯೊಬ್ಬಳು ನಗರದತ್ತ ನಡೆದು ಹೋಗುತ್ತಿರುವ ಮತ್ತು ಆಕೆಯನ್ನು ಅವಳ ಮಗ ನೋಡುತ್ತಿರುವ ದೃಶ್ಯವಿದೆ. ಇದೊಂದು ತಾಯಿ-ಮಗನ ಸೆಂಟಿಮಮೆಂಟ್ನ ಚಿತ್ರವಿರಬಹುದು ಎಂದು ಹೇಳಲಾಗುತ್ತಿದೆ.
KVN ಪ್ರೊಡಕ್ಷನ್ಸ್ ಸಂಸ್ಥೆಯ ಮೊದಲ ಮಲಯಾಳಂ ಚಿತ್ರಕ್ಕೆ ಶೈಜು ಖಾಲೆದ್ ಛಾಯಾಗ್ರಹಣ, ಸುಶಿನ್ ಶ್ಯಾಮ್ ಸಂಗೀತವಿದೆ. ಇನ್ನು, ಕಲಾವಿದರ ಪಟ್ಟಿ ಇನ್ನಷ್ಟೇ ಬಿಡುಗಡೆ ಆಗಬೇಕಿದೆ.
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…