ಮನರಂಜನೆ

ಮಲಯಾಳಂಗೆ KVN ಪ್ರೊಡಕ್ಷನ್ಸ್; ‘ಮಂಜುಮ್ಮೆಲ್ ಬಾಯ್ಸ್’ ನಿರ್ದೇಶಕರೊಂದಿಗೆ ಚಿತ್ರ

ಕನ್ನಡದ ಜನಪ್ರಿಯ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಕೆವಿಎನ್‍ ಪ್ರೊಡಕ್ಷನ್ಸ್, ನೂರಾರು ಕೋಟಿಗಳನ್ನು ಈಗಾಗಲೇ ಚಿತ್ರರಂಗದಲ್ಲಿ ಹೂಡಿಕೆ ಮಾಡಿದೆ. ಯಶ್‍ ಅಭಿನಯದ ‘ಟಾಕ್ಸಿಕ್‍’, ಧ್ರುವ ಸರ್ಜಾ ಅಭಿನಯದ ‘ಕೆಡಿ – ದಿ ಡೆವಿಲ್‍’ ಮತ್ತು ತಮಿಳಿನ ವಿಜಯ್‍ ಅಭಿನಯದಲ್ಲಿ ಚಿತ್ರಗಳನ್ನು ನಿರ್ಮಿಸುತ್ತಿದೆ. ಇದೆಲ್ಲದರ ಮಧ್ಯೆ, KVN ಪ್ರೊಡಕ್ಷನ್ಸ್ನ ವೆಂಕಟ್‍ನಾರಾಯಣ್‍, ಮಲಯಾಳಂನಲ್ಲಿ ಚಿತ್ರವೊಂದನ್ನು ನಿರ್ಮಿಸುವುದಕ್ಕೆ ಸಜ್ಜಾಗಿದ್ದಾರೆ. ಈ ಚಿತ್ರವನ್ನು ಅವರು ತೆಸ್ಪಿಯನ್ ಫಿಲ್ಮ್ಸ್ ಜೊತೆಗೆ ಸೇರಿ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ.

ಕಳೆದ ವರ್ಷ ವಿಜಯ್‍ ಅಭಿನಯದ ಚಿತ್ರವನ್ನು ನಿರ್ಮಿಸುವ ಮೂಲಕ ತಮಿಳು ಚಿತ್ರರಂಗಕ್ಕೆ ಕಾಲಿಟ್ಟಿದ್ದ KVN ಪ್ರೊಡಕ್ಷನ್ಸ್ ಸಂಸ್ಥೆಯು, ಇದೀಗ ಮಲಯಾಳಂ ಚಿತ್ರವನ್ನು ನಿರ್ಮಿಸುವ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟಿದೆ. ಈ ಚಿತ್ರವನ್ನು ಚಿದಂಬರಂ ನಿರ್ದೇಶನ ಮಾಡುತ್ತಿದ್ದಾರೆ. ಕಳೆದ ವರ್ಷ ಮಲಯಾಳಂನಲ್ಲಿ ಬಿಡುಗಡೆಯಾದ ಅತ್ಯಂತ ಯಶಸ್ವಿ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ನಿರ್ಮಿಸಿದ್ದು, ಇದೇ ಚಿದಂಬರಂ. ಇನ್ನು, ‘ರೋಮಾಂಚನಂ’, ‘ಆವೇಶಂ’ ಮುಂತಾದ ಚಿತ್ರಗಳಿಗೆ ಕಥೆ ಬರೆದಿರುವ ಜೀತು ಮಾಧವನ್ ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ.

ಈ ಕುರಿತು ಮಾತನಾಡಿರುವ ವೆಂಕಟ್‍ ಕೆ ನಾರಾಯಣ್‍, ’ನಾವು ನಮ್ಮ ಸಂಸ್ಥೆಯಿಂದ ಭಿನ್ನ ಬಗೆಯ, ಸದಭಿರುಚಿಯ ಮನರಂಜನಾತ್ಮಕ ಸಿನಿಮಾಗಳನ್ನ ನೀಡಲು ಮುಂದಾಗಿದ್ದೇವೆ. ಅದರಂತೆ ಹೊಸ ಚಿಂತನೆ ಇರುವ ನಿರ್ದೇಶಕರ ಮೂಲಕ ಪ್ರೇಕ್ಷಕರನ್ನು ತಲುಪುವತ್ತ ಹೆಜ್ಜೆ ಇಟ್ಟಿದ್ದೇವೆ. ಈ ಪ್ರಯತ್ನದಲ್ಲಿ ಇದೀಗ ಮಲಯಾಳಂನಲ್ಲಿ ಚಿತ್ರರಂಗಕ್ಕೆ ಕಾಲಿಡುವುದರ ಜೊತೆಗೆ, ಮಲಯಾಳಂನ ನಮ್ಮ ಮೊದಲ ಚಿತ್ರಕ್ಕಾಗಿ ಚಿದಂಬರಂ ಅವರ ಜೊತೆಗೆ ಕೈಜೋಡಿಸಿದ್ದೇವೆ’ ಎನ್ನುತ್ತಾರೆ.

ಈ ಹೊಸ ಚಿತ್ರದ ಪೋಸ್ಟರ್‍ ಬಿಡುಡೆಯಾಗಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ತಾಯಿಯೊಬ್ಬಳು ನಗರದತ್ತ ನಡೆದು ಹೋಗುತ್ತಿರುವ ಮತ್ತು ಆಕೆಯನ್ನು ಅವಳ ಮಗ ನೋಡುತ್ತಿರುವ ದೃಶ್ಯವಿದೆ. ಇದೊಂದು ತಾಯಿ-ಮಗನ ಸೆಂಟಿಮಮೆಂಟ್‍ನ ಚಿತ್ರವಿರಬಹುದು ಎಂದು ಹೇಳಲಾಗುತ್ತಿದೆ.

KVN ಪ್ರೊಡಕ್ಷನ್ಸ್ ಸಂಸ್ಥೆಯ ಮೊದಲ ಮಲಯಾಳಂ ಚಿತ್ರಕ್ಕೆ ಶೈಜು ಖಾಲೆದ್‍ ಛಾಯಾಗ್ರಹಣ, ಸುಶಿನ್‍ ಶ್ಯಾಮ್‍ ಸಂಗೀತವಿದೆ. ಇನ್ನು, ಕಲಾವಿದರ ಪಟ್ಟಿ ಇನ್ನಷ್ಟೇ ಬಿಡುಗಡೆ ಆಗಬೇಕಿದೆ.

ಭೂಮಿಕಾ

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

5 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

5 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

5 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

5 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

5 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

6 hours ago