ಮನರಂಜನೆ

ಮಲಯಾಳಂಗೆ KVN ಪ್ರೊಡಕ್ಷನ್ಸ್; ‘ಮಂಜುಮ್ಮೆಲ್ ಬಾಯ್ಸ್’ ನಿರ್ದೇಶಕರೊಂದಿಗೆ ಚಿತ್ರ

ಕನ್ನಡದ ಜನಪ್ರಿಯ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಕೆವಿಎನ್‍ ಪ್ರೊಡಕ್ಷನ್ಸ್, ನೂರಾರು ಕೋಟಿಗಳನ್ನು ಈಗಾಗಲೇ ಚಿತ್ರರಂಗದಲ್ಲಿ ಹೂಡಿಕೆ ಮಾಡಿದೆ. ಯಶ್‍ ಅಭಿನಯದ ‘ಟಾಕ್ಸಿಕ್‍’, ಧ್ರುವ ಸರ್ಜಾ ಅಭಿನಯದ ‘ಕೆಡಿ – ದಿ ಡೆವಿಲ್‍’ ಮತ್ತು ತಮಿಳಿನ ವಿಜಯ್‍ ಅಭಿನಯದಲ್ಲಿ ಚಿತ್ರಗಳನ್ನು ನಿರ್ಮಿಸುತ್ತಿದೆ. ಇದೆಲ್ಲದರ ಮಧ್ಯೆ, KVN ಪ್ರೊಡಕ್ಷನ್ಸ್ನ ವೆಂಕಟ್‍ನಾರಾಯಣ್‍, ಮಲಯಾಳಂನಲ್ಲಿ ಚಿತ್ರವೊಂದನ್ನು ನಿರ್ಮಿಸುವುದಕ್ಕೆ ಸಜ್ಜಾಗಿದ್ದಾರೆ. ಈ ಚಿತ್ರವನ್ನು ಅವರು ತೆಸ್ಪಿಯನ್ ಫಿಲ್ಮ್ಸ್ ಜೊತೆಗೆ ಸೇರಿ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ.

ಕಳೆದ ವರ್ಷ ವಿಜಯ್‍ ಅಭಿನಯದ ಚಿತ್ರವನ್ನು ನಿರ್ಮಿಸುವ ಮೂಲಕ ತಮಿಳು ಚಿತ್ರರಂಗಕ್ಕೆ ಕಾಲಿಟ್ಟಿದ್ದ KVN ಪ್ರೊಡಕ್ಷನ್ಸ್ ಸಂಸ್ಥೆಯು, ಇದೀಗ ಮಲಯಾಳಂ ಚಿತ್ರವನ್ನು ನಿರ್ಮಿಸುವ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟಿದೆ. ಈ ಚಿತ್ರವನ್ನು ಚಿದಂಬರಂ ನಿರ್ದೇಶನ ಮಾಡುತ್ತಿದ್ದಾರೆ. ಕಳೆದ ವರ್ಷ ಮಲಯಾಳಂನಲ್ಲಿ ಬಿಡುಗಡೆಯಾದ ಅತ್ಯಂತ ಯಶಸ್ವಿ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ನಿರ್ಮಿಸಿದ್ದು, ಇದೇ ಚಿದಂಬರಂ. ಇನ್ನು, ‘ರೋಮಾಂಚನಂ’, ‘ಆವೇಶಂ’ ಮುಂತಾದ ಚಿತ್ರಗಳಿಗೆ ಕಥೆ ಬರೆದಿರುವ ಜೀತು ಮಾಧವನ್ ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ.

ಈ ಕುರಿತು ಮಾತನಾಡಿರುವ ವೆಂಕಟ್‍ ಕೆ ನಾರಾಯಣ್‍, ’ನಾವು ನಮ್ಮ ಸಂಸ್ಥೆಯಿಂದ ಭಿನ್ನ ಬಗೆಯ, ಸದಭಿರುಚಿಯ ಮನರಂಜನಾತ್ಮಕ ಸಿನಿಮಾಗಳನ್ನ ನೀಡಲು ಮುಂದಾಗಿದ್ದೇವೆ. ಅದರಂತೆ ಹೊಸ ಚಿಂತನೆ ಇರುವ ನಿರ್ದೇಶಕರ ಮೂಲಕ ಪ್ರೇಕ್ಷಕರನ್ನು ತಲುಪುವತ್ತ ಹೆಜ್ಜೆ ಇಟ್ಟಿದ್ದೇವೆ. ಈ ಪ್ರಯತ್ನದಲ್ಲಿ ಇದೀಗ ಮಲಯಾಳಂನಲ್ಲಿ ಚಿತ್ರರಂಗಕ್ಕೆ ಕಾಲಿಡುವುದರ ಜೊತೆಗೆ, ಮಲಯಾಳಂನ ನಮ್ಮ ಮೊದಲ ಚಿತ್ರಕ್ಕಾಗಿ ಚಿದಂಬರಂ ಅವರ ಜೊತೆಗೆ ಕೈಜೋಡಿಸಿದ್ದೇವೆ’ ಎನ್ನುತ್ತಾರೆ.

ಈ ಹೊಸ ಚಿತ್ರದ ಪೋಸ್ಟರ್‍ ಬಿಡುಡೆಯಾಗಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ತಾಯಿಯೊಬ್ಬಳು ನಗರದತ್ತ ನಡೆದು ಹೋಗುತ್ತಿರುವ ಮತ್ತು ಆಕೆಯನ್ನು ಅವಳ ಮಗ ನೋಡುತ್ತಿರುವ ದೃಶ್ಯವಿದೆ. ಇದೊಂದು ತಾಯಿ-ಮಗನ ಸೆಂಟಿಮಮೆಂಟ್‍ನ ಚಿತ್ರವಿರಬಹುದು ಎಂದು ಹೇಳಲಾಗುತ್ತಿದೆ.

KVN ಪ್ರೊಡಕ್ಷನ್ಸ್ ಸಂಸ್ಥೆಯ ಮೊದಲ ಮಲಯಾಳಂ ಚಿತ್ರಕ್ಕೆ ಶೈಜು ಖಾಲೆದ್‍ ಛಾಯಾಗ್ರಹಣ, ಸುಶಿನ್‍ ಶ್ಯಾಮ್‍ ಸಂಗೀತವಿದೆ. ಇನ್ನು, ಕಲಾವಿದರ ಪಟ್ಟಿ ಇನ್ನಷ್ಟೇ ಬಿಡುಗಡೆ ಆಗಬೇಕಿದೆ.

ಭೂಮಿಕಾ

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

8 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

8 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

8 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

8 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

8 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

8 hours ago