ಮನರಂಜನೆ

ಮಲಯಾಳಂಗೆ KVN ಪ್ರೊಡಕ್ಷನ್ಸ್; ‘ಮಂಜುಮ್ಮೆಲ್ ಬಾಯ್ಸ್’ ನಿರ್ದೇಶಕರೊಂದಿಗೆ ಚಿತ್ರ

ಕನ್ನಡದ ಜನಪ್ರಿಯ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಕೆವಿಎನ್‍ ಪ್ರೊಡಕ್ಷನ್ಸ್, ನೂರಾರು ಕೋಟಿಗಳನ್ನು ಈಗಾಗಲೇ ಚಿತ್ರರಂಗದಲ್ಲಿ ಹೂಡಿಕೆ ಮಾಡಿದೆ. ಯಶ್‍ ಅಭಿನಯದ ‘ಟಾಕ್ಸಿಕ್‍’, ಧ್ರುವ ಸರ್ಜಾ ಅಭಿನಯದ ‘ಕೆಡಿ – ದಿ ಡೆವಿಲ್‍’ ಮತ್ತು ತಮಿಳಿನ ವಿಜಯ್‍ ಅಭಿನಯದಲ್ಲಿ ಚಿತ್ರಗಳನ್ನು ನಿರ್ಮಿಸುತ್ತಿದೆ. ಇದೆಲ್ಲದರ ಮಧ್ಯೆ, KVN ಪ್ರೊಡಕ್ಷನ್ಸ್ನ ವೆಂಕಟ್‍ನಾರಾಯಣ್‍, ಮಲಯಾಳಂನಲ್ಲಿ ಚಿತ್ರವೊಂದನ್ನು ನಿರ್ಮಿಸುವುದಕ್ಕೆ ಸಜ್ಜಾಗಿದ್ದಾರೆ. ಈ ಚಿತ್ರವನ್ನು ಅವರು ತೆಸ್ಪಿಯನ್ ಫಿಲ್ಮ್ಸ್ ಜೊತೆಗೆ ಸೇರಿ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ.

ಕಳೆದ ವರ್ಷ ವಿಜಯ್‍ ಅಭಿನಯದ ಚಿತ್ರವನ್ನು ನಿರ್ಮಿಸುವ ಮೂಲಕ ತಮಿಳು ಚಿತ್ರರಂಗಕ್ಕೆ ಕಾಲಿಟ್ಟಿದ್ದ KVN ಪ್ರೊಡಕ್ಷನ್ಸ್ ಸಂಸ್ಥೆಯು, ಇದೀಗ ಮಲಯಾಳಂ ಚಿತ್ರವನ್ನು ನಿರ್ಮಿಸುವ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟಿದೆ. ಈ ಚಿತ್ರವನ್ನು ಚಿದಂಬರಂ ನಿರ್ದೇಶನ ಮಾಡುತ್ತಿದ್ದಾರೆ. ಕಳೆದ ವರ್ಷ ಮಲಯಾಳಂನಲ್ಲಿ ಬಿಡುಗಡೆಯಾದ ಅತ್ಯಂತ ಯಶಸ್ವಿ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ನಿರ್ಮಿಸಿದ್ದು, ಇದೇ ಚಿದಂಬರಂ. ಇನ್ನು, ‘ರೋಮಾಂಚನಂ’, ‘ಆವೇಶಂ’ ಮುಂತಾದ ಚಿತ್ರಗಳಿಗೆ ಕಥೆ ಬರೆದಿರುವ ಜೀತು ಮಾಧವನ್ ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ.

ಈ ಕುರಿತು ಮಾತನಾಡಿರುವ ವೆಂಕಟ್‍ ಕೆ ನಾರಾಯಣ್‍, ’ನಾವು ನಮ್ಮ ಸಂಸ್ಥೆಯಿಂದ ಭಿನ್ನ ಬಗೆಯ, ಸದಭಿರುಚಿಯ ಮನರಂಜನಾತ್ಮಕ ಸಿನಿಮಾಗಳನ್ನ ನೀಡಲು ಮುಂದಾಗಿದ್ದೇವೆ. ಅದರಂತೆ ಹೊಸ ಚಿಂತನೆ ಇರುವ ನಿರ್ದೇಶಕರ ಮೂಲಕ ಪ್ರೇಕ್ಷಕರನ್ನು ತಲುಪುವತ್ತ ಹೆಜ್ಜೆ ಇಟ್ಟಿದ್ದೇವೆ. ಈ ಪ್ರಯತ್ನದಲ್ಲಿ ಇದೀಗ ಮಲಯಾಳಂನಲ್ಲಿ ಚಿತ್ರರಂಗಕ್ಕೆ ಕಾಲಿಡುವುದರ ಜೊತೆಗೆ, ಮಲಯಾಳಂನ ನಮ್ಮ ಮೊದಲ ಚಿತ್ರಕ್ಕಾಗಿ ಚಿದಂಬರಂ ಅವರ ಜೊತೆಗೆ ಕೈಜೋಡಿಸಿದ್ದೇವೆ’ ಎನ್ನುತ್ತಾರೆ.

ಈ ಹೊಸ ಚಿತ್ರದ ಪೋಸ್ಟರ್‍ ಬಿಡುಡೆಯಾಗಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ತಾಯಿಯೊಬ್ಬಳು ನಗರದತ್ತ ನಡೆದು ಹೋಗುತ್ತಿರುವ ಮತ್ತು ಆಕೆಯನ್ನು ಅವಳ ಮಗ ನೋಡುತ್ತಿರುವ ದೃಶ್ಯವಿದೆ. ಇದೊಂದು ತಾಯಿ-ಮಗನ ಸೆಂಟಿಮಮೆಂಟ್‍ನ ಚಿತ್ರವಿರಬಹುದು ಎಂದು ಹೇಳಲಾಗುತ್ತಿದೆ.

KVN ಪ್ರೊಡಕ್ಷನ್ಸ್ ಸಂಸ್ಥೆಯ ಮೊದಲ ಮಲಯಾಳಂ ಚಿತ್ರಕ್ಕೆ ಶೈಜು ಖಾಲೆದ್‍ ಛಾಯಾಗ್ರಹಣ, ಸುಶಿನ್‍ ಶ್ಯಾಮ್‍ ಸಂಗೀತವಿದೆ. ಇನ್ನು, ಕಲಾವಿದರ ಪಟ್ಟಿ ಇನ್ನಷ್ಟೇ ಬಿಡುಗಡೆ ಆಗಬೇಕಿದೆ.

ಭೂಮಿಕಾ

Recent Posts

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

2 hours ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

2 hours ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

5 hours ago