ಮನರಂಜನೆ

ಆಗಸ್ಟ್.01ರಂದು ಬಿಡುಗಡೆ ಆಗಲಿದೆ ‘ಸು ಫ್ರಮ್ ಸೋ’ ಮಲಯಾಳಂ ಅವತರಣಿಕೆ

ರಾಜ್‍ ಬಿ. ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಚಿತ್ರವು ಈ ವರ್ಷ ಅತೀ ಹೆಚ್ಚು ಗಳಿಕೆ ಮಾಡಿದ ಕನ್ನಡದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಚಿತ್ರವು ಜುಲೈ.25ರಂದು ಬಿಡುಗಡೆಯಾಗಿದ್ದು, ಕೇವಲ ಐದು ದಿನಗಳಲ್ಲಿ 13 ಕೋಟಿ ರೂ. ಗಳಿಕೆ ಮಾಡಿದೆ. ಹೊಸಬರ ಚಿತ್ರವೊಂದು ಅತೀ ಹೆಚ್ಚು ಗಳಿಕೆ ಮಾಡಿದ ಹೆಗ್ಗಳಿಕೆಗೆ ‘ಸು ಫ್ರಮ್‍ ಸೋ’ ಪಾತ್ರವಾಗಿದೆ.

‘ಸು ಫ್ರಮ್‍ ಸೋ’ ಚಿತ್ರವು ಮಲಯಾಳಂಗೆ ಡಬ್‍ ಆಗಿ ಬಿಡುಗಡೆಯಾಗುತ್ತದೆ ಎಂಬ ಮಾತು ಕೆಲವು ದಿನಗಳಿಂದಲೇ ಕೇಳಿಬರುತ್ತಿತ್ತು. ಅದೀಗ ನಿಜವಾಗಿದೆ. ಚಿತ್ರವು ಮಲಯಾಳಂಗೆ ಡಬ್‍ ಆಗಿದ್ದು, ಇದೇ ಆಗಸ್ಟ್.01ರಂದು ಕೇರಳದಲ್ಲಿ ಬಿಡುಗಡೆಯಾಗುತ್ತಿದೆ. ವಿಶೇಷವೆಂದರೆ, ದುಲ್ಕರ್ ಸಲ್ಮಾನ್‍ ಅವರ ವೇಫೇರರ್ ಸಿನಿಮಾಸ್‍ ಸಂಸ್ಥೆಯು ಕೇರಳಾದ್ಯಂತ ಬಿಡುಗಡೆ ಮಾಡುತ್ತಿದೆ.

ಇದಾದ ಮರುವಾರವೇ ಚಿತ್ರವು ತೆಲುಗಿಗೂ ಡಬ್‍ ಆಗಿ ಬಿಡುಗಡೆ ಆಗಲಿದೆ. ಕನ್ನಡ ಚಿತ್ರಗಳಿಗೆ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲೂ ಸ್ವಲ್ಪ ಮಾರುಕಟ್ಟೆ ಇದ್ದು, ಕನ್ನಡದ ಕೆಲವು ಚಿತ್ರಗಳು ತೆಲುಗಿಗೆ ಡಬ್ ಆಗಿ ಬಿಡುಗಡೆಯಾಗಿದೆ. ಅದರಂತೆ ‘ಸು ಫ್ರಮ್‍ ಸೋ’ ಸಹ ತೆಲುಗಿಗೆ ಡಬ್‍ ಆಗಿ ಬಿಡುಗಡೆ ಆಗಲಿದೆ.

ಇದಾದ ನಂತರ ಹಿಂದಿಗೂ ಚಿತ್ರ ಡಬ್‍ ಆಗ ಬಿಡುಗಡೆ ಆಗಲಿದೆ. ಹಿಂದಿಯ ಜನಪ್ರಿಯ ವಿತರಕ ಅನಿಲ್‍ ಥಡಾನಿ ಈ ಚಿತ್ರದ ಹಿಂದಿ ಡಬ್ಬಿಂಗ್‍ ಹಕ್ಕುಗಳನ್ನು ಖರೀದಿಸಿದ್ದಾರೆ. ‘ಸು ಫ್ರಮ್‍ ಸೋ’ ಚಿತ್ರದ ಹಿಂದಿ ಅವತರಣಿಕೆಯನ್ನು ಉತ್ತರ ಭಾರತದಲ್ಲಿ ಬಿಡುಗಡೆ ಮಾಡುವುದಕ್ಕೆ ಅವರು ಮುಂದಾಗಿದ್ದಾರೆ. ಆದರೆ, ಸದ್ಯಕ್ಕೆ ಬಿಡುಗಡೆ ದಿನಾಂಕ ಇನ್ನೂ ಅಂತಿಮವಾಗಿಲ್ಲ.

ಒಂದು ಕಡೆ ಬೇರೆ ಭಾಷೆಗಳಿಗೆ ಡಬ್‍ ಆಗಿ ಬಿಡುಗಡೆ ಆಗುವುದರ ಜೊತೆಗೆ, ‘ಸು ಫ್ರಮ್‍ ಸೋ’ ಚಿತ್ರವು ಆಗಸ್ಟ್.01ರಂದು ವಿದೇಶದಲ್ಲಿ ಬಿಡುಗಡೆ ಆಗಲಿದೆ. ಚಿತ್ರವು ಅಮೇರಿಕಾ, ಜರ್ಮನಿ ಸೇರಿದಂತೆ ಮುಂತಾದ ಕಡೆ ಬಿಡುಗಡೆ ಆಗಲಿದೆ. ಫಾರ್ಸ್ ಫಿಲಂಸ್‍ ಸಂಸ್ಥೆಯು ಚಿತ್ರವನ್ನು ವಿದೇಶದಲ್ಲಿ ಬಿಡುಗಡೆ ಮಾಡುತ್ತಿದೆ.

‘ಸು ಫ್ರಮ್ ಸೋ’ ಚಿತ್ರವನ್ನು ಜೆ.ಪಿ.ತುಮಿನಾಡು ನಿರ್ದೇಶನ ಮಾಡಿದ್ದು, ಲೈಟರ್‍ ಬುದ್ಧ ಫಿಲ್ಮ್ಸ್ ನಿರ್ಮಾಣ ಮಾಡಿದೆ. ಚಿತ್ರದಲ್ಲಿ ರಾಜ್‍ ಬಿ. ಶೆಟ್ಟಿ, ಜೆ.ಪಿ. ತುಮಿನಾಡು, ಶನೀಲ್ ಗೌತಮ್, ಪ್ರಕಾಶ್ ಕೆ ತುಮಿನಾಡು, ದೀಪಕ್ ರೈ ಪಣಜೆ, ಮೈಮ್ ರಾಮದಾಸ್, ಮುಂತಾದವರು ನಟಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈವಿವಿಯಲ್ಲಿ ಫ್ರೆಂಚ್‌ ಭಾಷೆ ವಿಭಾಗ ಪುನರಾಂಭಿಸಲು ಚರ್ಚೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ…

8 mins ago

ʼಗ್ಯಾರಂಟಿʼ ಜನರ ಬದುಕಿನ ಆಧಾರ

ಬೆಳಗಾವಿ(ಸುವರ್ಣ ವಿಧಾನ ಸೌಧ) : ಗ್ಯಾರಂಟಿ ಯೋಜನೆಗಳ ಮೂಲಕ ನಾಗರಿಕರಿಗೆ ನೇರವಾಗಿ ಹಣ ವರ್ಗಾವಣೆಯಿಂದ ಅವರ ಆರ್ಥಿಕ ಬದುಕು ಬಹಳಷ್ಟು…

27 mins ago

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ…

52 mins ago

ತೊಗರಿ – ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ ; ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ‌ ಭಾರತದ ರಾಷ್ಟ್ರೀಯ ಕೃಷಿ‌ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ…

1 hour ago

ಹಾಡಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಿ: ಅರುಣ್ ಕುಮಾರ್

ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…

2 hours ago

ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ: ಕೆ.ಎನ್.ರಾಜಣ್ಣ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…

3 hours ago