ಮನರಂಜನೆ

ಆಗಸ್ಟ್.01ರಂದು ಬಿಡುಗಡೆ ಆಗಲಿದೆ ‘ಸು ಫ್ರಮ್ ಸೋ’ ಮಲಯಾಳಂ ಅವತರಣಿಕೆ

ರಾಜ್‍ ಬಿ. ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಚಿತ್ರವು ಈ ವರ್ಷ ಅತೀ ಹೆಚ್ಚು ಗಳಿಕೆ ಮಾಡಿದ ಕನ್ನಡದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಚಿತ್ರವು ಜುಲೈ.25ರಂದು ಬಿಡುಗಡೆಯಾಗಿದ್ದು, ಕೇವಲ ಐದು ದಿನಗಳಲ್ಲಿ 13 ಕೋಟಿ ರೂ. ಗಳಿಕೆ ಮಾಡಿದೆ. ಹೊಸಬರ ಚಿತ್ರವೊಂದು ಅತೀ ಹೆಚ್ಚು ಗಳಿಕೆ ಮಾಡಿದ ಹೆಗ್ಗಳಿಕೆಗೆ ‘ಸು ಫ್ರಮ್‍ ಸೋ’ ಪಾತ್ರವಾಗಿದೆ.

‘ಸು ಫ್ರಮ್‍ ಸೋ’ ಚಿತ್ರವು ಮಲಯಾಳಂಗೆ ಡಬ್‍ ಆಗಿ ಬಿಡುಗಡೆಯಾಗುತ್ತದೆ ಎಂಬ ಮಾತು ಕೆಲವು ದಿನಗಳಿಂದಲೇ ಕೇಳಿಬರುತ್ತಿತ್ತು. ಅದೀಗ ನಿಜವಾಗಿದೆ. ಚಿತ್ರವು ಮಲಯಾಳಂಗೆ ಡಬ್‍ ಆಗಿದ್ದು, ಇದೇ ಆಗಸ್ಟ್.01ರಂದು ಕೇರಳದಲ್ಲಿ ಬಿಡುಗಡೆಯಾಗುತ್ತಿದೆ. ವಿಶೇಷವೆಂದರೆ, ದುಲ್ಕರ್ ಸಲ್ಮಾನ್‍ ಅವರ ವೇಫೇರರ್ ಸಿನಿಮಾಸ್‍ ಸಂಸ್ಥೆಯು ಕೇರಳಾದ್ಯಂತ ಬಿಡುಗಡೆ ಮಾಡುತ್ತಿದೆ.

ಇದಾದ ಮರುವಾರವೇ ಚಿತ್ರವು ತೆಲುಗಿಗೂ ಡಬ್‍ ಆಗಿ ಬಿಡುಗಡೆ ಆಗಲಿದೆ. ಕನ್ನಡ ಚಿತ್ರಗಳಿಗೆ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲೂ ಸ್ವಲ್ಪ ಮಾರುಕಟ್ಟೆ ಇದ್ದು, ಕನ್ನಡದ ಕೆಲವು ಚಿತ್ರಗಳು ತೆಲುಗಿಗೆ ಡಬ್ ಆಗಿ ಬಿಡುಗಡೆಯಾಗಿದೆ. ಅದರಂತೆ ‘ಸು ಫ್ರಮ್‍ ಸೋ’ ಸಹ ತೆಲುಗಿಗೆ ಡಬ್‍ ಆಗಿ ಬಿಡುಗಡೆ ಆಗಲಿದೆ.

ಇದಾದ ನಂತರ ಹಿಂದಿಗೂ ಚಿತ್ರ ಡಬ್‍ ಆಗ ಬಿಡುಗಡೆ ಆಗಲಿದೆ. ಹಿಂದಿಯ ಜನಪ್ರಿಯ ವಿತರಕ ಅನಿಲ್‍ ಥಡಾನಿ ಈ ಚಿತ್ರದ ಹಿಂದಿ ಡಬ್ಬಿಂಗ್‍ ಹಕ್ಕುಗಳನ್ನು ಖರೀದಿಸಿದ್ದಾರೆ. ‘ಸು ಫ್ರಮ್‍ ಸೋ’ ಚಿತ್ರದ ಹಿಂದಿ ಅವತರಣಿಕೆಯನ್ನು ಉತ್ತರ ಭಾರತದಲ್ಲಿ ಬಿಡುಗಡೆ ಮಾಡುವುದಕ್ಕೆ ಅವರು ಮುಂದಾಗಿದ್ದಾರೆ. ಆದರೆ, ಸದ್ಯಕ್ಕೆ ಬಿಡುಗಡೆ ದಿನಾಂಕ ಇನ್ನೂ ಅಂತಿಮವಾಗಿಲ್ಲ.

ಒಂದು ಕಡೆ ಬೇರೆ ಭಾಷೆಗಳಿಗೆ ಡಬ್‍ ಆಗಿ ಬಿಡುಗಡೆ ಆಗುವುದರ ಜೊತೆಗೆ, ‘ಸು ಫ್ರಮ್‍ ಸೋ’ ಚಿತ್ರವು ಆಗಸ್ಟ್.01ರಂದು ವಿದೇಶದಲ್ಲಿ ಬಿಡುಗಡೆ ಆಗಲಿದೆ. ಚಿತ್ರವು ಅಮೇರಿಕಾ, ಜರ್ಮನಿ ಸೇರಿದಂತೆ ಮುಂತಾದ ಕಡೆ ಬಿಡುಗಡೆ ಆಗಲಿದೆ. ಫಾರ್ಸ್ ಫಿಲಂಸ್‍ ಸಂಸ್ಥೆಯು ಚಿತ್ರವನ್ನು ವಿದೇಶದಲ್ಲಿ ಬಿಡುಗಡೆ ಮಾಡುತ್ತಿದೆ.

‘ಸು ಫ್ರಮ್ ಸೋ’ ಚಿತ್ರವನ್ನು ಜೆ.ಪಿ.ತುಮಿನಾಡು ನಿರ್ದೇಶನ ಮಾಡಿದ್ದು, ಲೈಟರ್‍ ಬುದ್ಧ ಫಿಲ್ಮ್ಸ್ ನಿರ್ಮಾಣ ಮಾಡಿದೆ. ಚಿತ್ರದಲ್ಲಿ ರಾಜ್‍ ಬಿ. ಶೆಟ್ಟಿ, ಜೆ.ಪಿ. ತುಮಿನಾಡು, ಶನೀಲ್ ಗೌತಮ್, ಪ್ರಕಾಶ್ ಕೆ ತುಮಿನಾಡು, ದೀಪಕ್ ರೈ ಪಣಜೆ, ಮೈಮ್ ರಾಮದಾಸ್, ಮುಂತಾದವರು ನಟಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

7 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

7 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

8 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

9 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

9 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

9 hours ago