ಮನರಂಜನೆ

ಆಗಸ್ಟ್.01ರಂದು ಬಿಡುಗಡೆ ಆಗಲಿದೆ ‘ಸು ಫ್ರಮ್ ಸೋ’ ಮಲಯಾಳಂ ಅವತರಣಿಕೆ

ರಾಜ್‍ ಬಿ. ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಚಿತ್ರವು ಈ ವರ್ಷ ಅತೀ ಹೆಚ್ಚು ಗಳಿಕೆ ಮಾಡಿದ ಕನ್ನಡದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಚಿತ್ರವು ಜುಲೈ.25ರಂದು ಬಿಡುಗಡೆಯಾಗಿದ್ದು, ಕೇವಲ ಐದು ದಿನಗಳಲ್ಲಿ 13 ಕೋಟಿ ರೂ. ಗಳಿಕೆ ಮಾಡಿದೆ. ಹೊಸಬರ ಚಿತ್ರವೊಂದು ಅತೀ ಹೆಚ್ಚು ಗಳಿಕೆ ಮಾಡಿದ ಹೆಗ್ಗಳಿಕೆಗೆ ‘ಸು ಫ್ರಮ್‍ ಸೋ’ ಪಾತ್ರವಾಗಿದೆ.

‘ಸು ಫ್ರಮ್‍ ಸೋ’ ಚಿತ್ರವು ಮಲಯಾಳಂಗೆ ಡಬ್‍ ಆಗಿ ಬಿಡುಗಡೆಯಾಗುತ್ತದೆ ಎಂಬ ಮಾತು ಕೆಲವು ದಿನಗಳಿಂದಲೇ ಕೇಳಿಬರುತ್ತಿತ್ತು. ಅದೀಗ ನಿಜವಾಗಿದೆ. ಚಿತ್ರವು ಮಲಯಾಳಂಗೆ ಡಬ್‍ ಆಗಿದ್ದು, ಇದೇ ಆಗಸ್ಟ್.01ರಂದು ಕೇರಳದಲ್ಲಿ ಬಿಡುಗಡೆಯಾಗುತ್ತಿದೆ. ವಿಶೇಷವೆಂದರೆ, ದುಲ್ಕರ್ ಸಲ್ಮಾನ್‍ ಅವರ ವೇಫೇರರ್ ಸಿನಿಮಾಸ್‍ ಸಂಸ್ಥೆಯು ಕೇರಳಾದ್ಯಂತ ಬಿಡುಗಡೆ ಮಾಡುತ್ತಿದೆ.

ಇದಾದ ಮರುವಾರವೇ ಚಿತ್ರವು ತೆಲುಗಿಗೂ ಡಬ್‍ ಆಗಿ ಬಿಡುಗಡೆ ಆಗಲಿದೆ. ಕನ್ನಡ ಚಿತ್ರಗಳಿಗೆ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲೂ ಸ್ವಲ್ಪ ಮಾರುಕಟ್ಟೆ ಇದ್ದು, ಕನ್ನಡದ ಕೆಲವು ಚಿತ್ರಗಳು ತೆಲುಗಿಗೆ ಡಬ್ ಆಗಿ ಬಿಡುಗಡೆಯಾಗಿದೆ. ಅದರಂತೆ ‘ಸು ಫ್ರಮ್‍ ಸೋ’ ಸಹ ತೆಲುಗಿಗೆ ಡಬ್‍ ಆಗಿ ಬಿಡುಗಡೆ ಆಗಲಿದೆ.

ಇದಾದ ನಂತರ ಹಿಂದಿಗೂ ಚಿತ್ರ ಡಬ್‍ ಆಗ ಬಿಡುಗಡೆ ಆಗಲಿದೆ. ಹಿಂದಿಯ ಜನಪ್ರಿಯ ವಿತರಕ ಅನಿಲ್‍ ಥಡಾನಿ ಈ ಚಿತ್ರದ ಹಿಂದಿ ಡಬ್ಬಿಂಗ್‍ ಹಕ್ಕುಗಳನ್ನು ಖರೀದಿಸಿದ್ದಾರೆ. ‘ಸು ಫ್ರಮ್‍ ಸೋ’ ಚಿತ್ರದ ಹಿಂದಿ ಅವತರಣಿಕೆಯನ್ನು ಉತ್ತರ ಭಾರತದಲ್ಲಿ ಬಿಡುಗಡೆ ಮಾಡುವುದಕ್ಕೆ ಅವರು ಮುಂದಾಗಿದ್ದಾರೆ. ಆದರೆ, ಸದ್ಯಕ್ಕೆ ಬಿಡುಗಡೆ ದಿನಾಂಕ ಇನ್ನೂ ಅಂತಿಮವಾಗಿಲ್ಲ.

ಒಂದು ಕಡೆ ಬೇರೆ ಭಾಷೆಗಳಿಗೆ ಡಬ್‍ ಆಗಿ ಬಿಡುಗಡೆ ಆಗುವುದರ ಜೊತೆಗೆ, ‘ಸು ಫ್ರಮ್‍ ಸೋ’ ಚಿತ್ರವು ಆಗಸ್ಟ್.01ರಂದು ವಿದೇಶದಲ್ಲಿ ಬಿಡುಗಡೆ ಆಗಲಿದೆ. ಚಿತ್ರವು ಅಮೇರಿಕಾ, ಜರ್ಮನಿ ಸೇರಿದಂತೆ ಮುಂತಾದ ಕಡೆ ಬಿಡುಗಡೆ ಆಗಲಿದೆ. ಫಾರ್ಸ್ ಫಿಲಂಸ್‍ ಸಂಸ್ಥೆಯು ಚಿತ್ರವನ್ನು ವಿದೇಶದಲ್ಲಿ ಬಿಡುಗಡೆ ಮಾಡುತ್ತಿದೆ.

‘ಸು ಫ್ರಮ್ ಸೋ’ ಚಿತ್ರವನ್ನು ಜೆ.ಪಿ.ತುಮಿನಾಡು ನಿರ್ದೇಶನ ಮಾಡಿದ್ದು, ಲೈಟರ್‍ ಬುದ್ಧ ಫಿಲ್ಮ್ಸ್ ನಿರ್ಮಾಣ ಮಾಡಿದೆ. ಚಿತ್ರದಲ್ಲಿ ರಾಜ್‍ ಬಿ. ಶೆಟ್ಟಿ, ಜೆ.ಪಿ. ತುಮಿನಾಡು, ಶನೀಲ್ ಗೌತಮ್, ಪ್ರಕಾಶ್ ಕೆ ತುಮಿನಾಡು, ದೀಪಕ್ ರೈ ಪಣಜೆ, ಮೈಮ್ ರಾಮದಾಸ್, ಮುಂತಾದವರು ನಟಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

5 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

7 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

7 hours ago