su from so
ರಾಜ್ ಬಿ. ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಚಿತ್ರವು ಈ ವರ್ಷ ಅತೀ ಹೆಚ್ಚು ಗಳಿಕೆ ಮಾಡಿದ ಕನ್ನಡದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಚಿತ್ರವು ಜುಲೈ.25ರಂದು ಬಿಡುಗಡೆಯಾಗಿದ್ದು, ಕೇವಲ ಐದು ದಿನಗಳಲ್ಲಿ 13 ಕೋಟಿ ರೂ. ಗಳಿಕೆ ಮಾಡಿದೆ. ಹೊಸಬರ ಚಿತ್ರವೊಂದು ಅತೀ ಹೆಚ್ಚು ಗಳಿಕೆ ಮಾಡಿದ ಹೆಗ್ಗಳಿಕೆಗೆ ‘ಸು ಫ್ರಮ್ ಸೋ’ ಪಾತ್ರವಾಗಿದೆ.
‘ಸು ಫ್ರಮ್ ಸೋ’ ಚಿತ್ರವು ಮಲಯಾಳಂಗೆ ಡಬ್ ಆಗಿ ಬಿಡುಗಡೆಯಾಗುತ್ತದೆ ಎಂಬ ಮಾತು ಕೆಲವು ದಿನಗಳಿಂದಲೇ ಕೇಳಿಬರುತ್ತಿತ್ತು. ಅದೀಗ ನಿಜವಾಗಿದೆ. ಚಿತ್ರವು ಮಲಯಾಳಂಗೆ ಡಬ್ ಆಗಿದ್ದು, ಇದೇ ಆಗಸ್ಟ್.01ರಂದು ಕೇರಳದಲ್ಲಿ ಬಿಡುಗಡೆಯಾಗುತ್ತಿದೆ. ವಿಶೇಷವೆಂದರೆ, ದುಲ್ಕರ್ ಸಲ್ಮಾನ್ ಅವರ ವೇಫೇರರ್ ಸಿನಿಮಾಸ್ ಸಂಸ್ಥೆಯು ಕೇರಳಾದ್ಯಂತ ಬಿಡುಗಡೆ ಮಾಡುತ್ತಿದೆ.
ಇದಾದ ಮರುವಾರವೇ ಚಿತ್ರವು ತೆಲುಗಿಗೂ ಡಬ್ ಆಗಿ ಬಿಡುಗಡೆ ಆಗಲಿದೆ. ಕನ್ನಡ ಚಿತ್ರಗಳಿಗೆ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲೂ ಸ್ವಲ್ಪ ಮಾರುಕಟ್ಟೆ ಇದ್ದು, ಕನ್ನಡದ ಕೆಲವು ಚಿತ್ರಗಳು ತೆಲುಗಿಗೆ ಡಬ್ ಆಗಿ ಬಿಡುಗಡೆಯಾಗಿದೆ. ಅದರಂತೆ ‘ಸು ಫ್ರಮ್ ಸೋ’ ಸಹ ತೆಲುಗಿಗೆ ಡಬ್ ಆಗಿ ಬಿಡುಗಡೆ ಆಗಲಿದೆ.
ಇದಾದ ನಂತರ ಹಿಂದಿಗೂ ಚಿತ್ರ ಡಬ್ ಆಗ ಬಿಡುಗಡೆ ಆಗಲಿದೆ. ಹಿಂದಿಯ ಜನಪ್ರಿಯ ವಿತರಕ ಅನಿಲ್ ಥಡಾನಿ ಈ ಚಿತ್ರದ ಹಿಂದಿ ಡಬ್ಬಿಂಗ್ ಹಕ್ಕುಗಳನ್ನು ಖರೀದಿಸಿದ್ದಾರೆ. ‘ಸು ಫ್ರಮ್ ಸೋ’ ಚಿತ್ರದ ಹಿಂದಿ ಅವತರಣಿಕೆಯನ್ನು ಉತ್ತರ ಭಾರತದಲ್ಲಿ ಬಿಡುಗಡೆ ಮಾಡುವುದಕ್ಕೆ ಅವರು ಮುಂದಾಗಿದ್ದಾರೆ. ಆದರೆ, ಸದ್ಯಕ್ಕೆ ಬಿಡುಗಡೆ ದಿನಾಂಕ ಇನ್ನೂ ಅಂತಿಮವಾಗಿಲ್ಲ.
ಒಂದು ಕಡೆ ಬೇರೆ ಭಾಷೆಗಳಿಗೆ ಡಬ್ ಆಗಿ ಬಿಡುಗಡೆ ಆಗುವುದರ ಜೊತೆಗೆ, ‘ಸು ಫ್ರಮ್ ಸೋ’ ಚಿತ್ರವು ಆಗಸ್ಟ್.01ರಂದು ವಿದೇಶದಲ್ಲಿ ಬಿಡುಗಡೆ ಆಗಲಿದೆ. ಚಿತ್ರವು ಅಮೇರಿಕಾ, ಜರ್ಮನಿ ಸೇರಿದಂತೆ ಮುಂತಾದ ಕಡೆ ಬಿಡುಗಡೆ ಆಗಲಿದೆ. ಫಾರ್ಸ್ ಫಿಲಂಸ್ ಸಂಸ್ಥೆಯು ಚಿತ್ರವನ್ನು ವಿದೇಶದಲ್ಲಿ ಬಿಡುಗಡೆ ಮಾಡುತ್ತಿದೆ.
‘ಸು ಫ್ರಮ್ ಸೋ’ ಚಿತ್ರವನ್ನು ಜೆ.ಪಿ.ತುಮಿನಾಡು ನಿರ್ದೇಶನ ಮಾಡಿದ್ದು, ಲೈಟರ್ ಬುದ್ಧ ಫಿಲ್ಮ್ಸ್ ನಿರ್ಮಾಣ ಮಾಡಿದೆ. ಚಿತ್ರದಲ್ಲಿ ರಾಜ್ ಬಿ. ಶೆಟ್ಟಿ, ಜೆ.ಪಿ. ತುಮಿನಾಡು, ಶನೀಲ್ ಗೌತಮ್, ಪ್ರಕಾಶ್ ಕೆ ತುಮಿನಾಡು, ದೀಪಕ್ ರೈ ಪಣಜೆ, ಮೈಮ್ ರಾಮದಾಸ್, ಮುಂತಾದವರು ನಟಿಸಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…