ಮನರಂಜನೆ

ಆಗಸ್ಟ್.01ರಂದು ಬಿಡುಗಡೆ ಆಗಲಿದೆ ‘ಸು ಫ್ರಮ್ ಸೋ’ ಮಲಯಾಳಂ ಅವತರಣಿಕೆ

ರಾಜ್‍ ಬಿ. ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಚಿತ್ರವು ಈ ವರ್ಷ ಅತೀ ಹೆಚ್ಚು ಗಳಿಕೆ ಮಾಡಿದ ಕನ್ನಡದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಚಿತ್ರವು ಜುಲೈ.25ರಂದು ಬಿಡುಗಡೆಯಾಗಿದ್ದು, ಕೇವಲ ಐದು ದಿನಗಳಲ್ಲಿ 13 ಕೋಟಿ ರೂ. ಗಳಿಕೆ ಮಾಡಿದೆ. ಹೊಸಬರ ಚಿತ್ರವೊಂದು ಅತೀ ಹೆಚ್ಚು ಗಳಿಕೆ ಮಾಡಿದ ಹೆಗ್ಗಳಿಕೆಗೆ ‘ಸು ಫ್ರಮ್‍ ಸೋ’ ಪಾತ್ರವಾಗಿದೆ.

‘ಸು ಫ್ರಮ್‍ ಸೋ’ ಚಿತ್ರವು ಮಲಯಾಳಂಗೆ ಡಬ್‍ ಆಗಿ ಬಿಡುಗಡೆಯಾಗುತ್ತದೆ ಎಂಬ ಮಾತು ಕೆಲವು ದಿನಗಳಿಂದಲೇ ಕೇಳಿಬರುತ್ತಿತ್ತು. ಅದೀಗ ನಿಜವಾಗಿದೆ. ಚಿತ್ರವು ಮಲಯಾಳಂಗೆ ಡಬ್‍ ಆಗಿದ್ದು, ಇದೇ ಆಗಸ್ಟ್.01ರಂದು ಕೇರಳದಲ್ಲಿ ಬಿಡುಗಡೆಯಾಗುತ್ತಿದೆ. ವಿಶೇಷವೆಂದರೆ, ದುಲ್ಕರ್ ಸಲ್ಮಾನ್‍ ಅವರ ವೇಫೇರರ್ ಸಿನಿಮಾಸ್‍ ಸಂಸ್ಥೆಯು ಕೇರಳಾದ್ಯಂತ ಬಿಡುಗಡೆ ಮಾಡುತ್ತಿದೆ.

ಇದಾದ ಮರುವಾರವೇ ಚಿತ್ರವು ತೆಲುಗಿಗೂ ಡಬ್‍ ಆಗಿ ಬಿಡುಗಡೆ ಆಗಲಿದೆ. ಕನ್ನಡ ಚಿತ್ರಗಳಿಗೆ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲೂ ಸ್ವಲ್ಪ ಮಾರುಕಟ್ಟೆ ಇದ್ದು, ಕನ್ನಡದ ಕೆಲವು ಚಿತ್ರಗಳು ತೆಲುಗಿಗೆ ಡಬ್ ಆಗಿ ಬಿಡುಗಡೆಯಾಗಿದೆ. ಅದರಂತೆ ‘ಸು ಫ್ರಮ್‍ ಸೋ’ ಸಹ ತೆಲುಗಿಗೆ ಡಬ್‍ ಆಗಿ ಬಿಡುಗಡೆ ಆಗಲಿದೆ.

ಇದಾದ ನಂತರ ಹಿಂದಿಗೂ ಚಿತ್ರ ಡಬ್‍ ಆಗ ಬಿಡುಗಡೆ ಆಗಲಿದೆ. ಹಿಂದಿಯ ಜನಪ್ರಿಯ ವಿತರಕ ಅನಿಲ್‍ ಥಡಾನಿ ಈ ಚಿತ್ರದ ಹಿಂದಿ ಡಬ್ಬಿಂಗ್‍ ಹಕ್ಕುಗಳನ್ನು ಖರೀದಿಸಿದ್ದಾರೆ. ‘ಸು ಫ್ರಮ್‍ ಸೋ’ ಚಿತ್ರದ ಹಿಂದಿ ಅವತರಣಿಕೆಯನ್ನು ಉತ್ತರ ಭಾರತದಲ್ಲಿ ಬಿಡುಗಡೆ ಮಾಡುವುದಕ್ಕೆ ಅವರು ಮುಂದಾಗಿದ್ದಾರೆ. ಆದರೆ, ಸದ್ಯಕ್ಕೆ ಬಿಡುಗಡೆ ದಿನಾಂಕ ಇನ್ನೂ ಅಂತಿಮವಾಗಿಲ್ಲ.

ಒಂದು ಕಡೆ ಬೇರೆ ಭಾಷೆಗಳಿಗೆ ಡಬ್‍ ಆಗಿ ಬಿಡುಗಡೆ ಆಗುವುದರ ಜೊತೆಗೆ, ‘ಸು ಫ್ರಮ್‍ ಸೋ’ ಚಿತ್ರವು ಆಗಸ್ಟ್.01ರಂದು ವಿದೇಶದಲ್ಲಿ ಬಿಡುಗಡೆ ಆಗಲಿದೆ. ಚಿತ್ರವು ಅಮೇರಿಕಾ, ಜರ್ಮನಿ ಸೇರಿದಂತೆ ಮುಂತಾದ ಕಡೆ ಬಿಡುಗಡೆ ಆಗಲಿದೆ. ಫಾರ್ಸ್ ಫಿಲಂಸ್‍ ಸಂಸ್ಥೆಯು ಚಿತ್ರವನ್ನು ವಿದೇಶದಲ್ಲಿ ಬಿಡುಗಡೆ ಮಾಡುತ್ತಿದೆ.

‘ಸು ಫ್ರಮ್ ಸೋ’ ಚಿತ್ರವನ್ನು ಜೆ.ಪಿ.ತುಮಿನಾಡು ನಿರ್ದೇಶನ ಮಾಡಿದ್ದು, ಲೈಟರ್‍ ಬುದ್ಧ ಫಿಲ್ಮ್ಸ್ ನಿರ್ಮಾಣ ಮಾಡಿದೆ. ಚಿತ್ರದಲ್ಲಿ ರಾಜ್‍ ಬಿ. ಶೆಟ್ಟಿ, ಜೆ.ಪಿ. ತುಮಿನಾಡು, ಶನೀಲ್ ಗೌತಮ್, ಪ್ರಕಾಶ್ ಕೆ ತುಮಿನಾಡು, ದೀಪಕ್ ರೈ ಪಣಜೆ, ಮೈಮ್ ರಾಮದಾಸ್, ಮುಂತಾದವರು ನಟಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಡಿಕೇರಿ: ವಿದ್ಯುತ್ ತಂತಿ ಮೇಲೆ ಮರ ಬೀಳಿಸಿ ಕಾಡಾನೆಗಳ ಪುಂಡಾಟ

ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…

10 hours ago

ಶ್ರೀಲಂಕಾ ಜೈಲಿನಲ್ಲಿ ಗ್ಯಾಂಗ್‌ ವಾರ್:‌ 25 ಕೈದಿಗಳು ಸಾವು

ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…

11 hours ago

ಜನತೆಗೆ ಮತ್ತೊಂದು ಬ್ಯಾಡ್‌ನ್ಯೂಸ್:‌ ದುಬಾರಿಯಾಗಲಿದೆ ಸೇಬು

ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್‌ ನ್ಯೂಸ್‌ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…

11 hours ago

ಮೊಬೈಲ್‌ ಟಾರ್ಚ್‌ ಹಿಡಿದು ಬಸ್‌ ಚಾಲನೆ: ಮೂವರು ಅಮಾನತು

ಕಲಬುರ್ಗಿ: ಟಾರ್ಚ್‌ ಹಿಡಿದು ಬಸ್‌ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ ಡ್ರೈವರ್‌ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…

11 hours ago

ರಾಜ್ಯದಲ್ಲಿ ಚುರುಕು ಪಡೆದುಕೊಂಡ ಮಳೆ: ಜಲಾಶಯಗಳ ಒಳಹರಿವಿನಲ್ಲಿ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…

11 hours ago

ಧಾರಾಕಾರ ಮಳೆಗೆ ತತ್ತರಿಸಿದ ಮುಂಬೈ

ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…

12 hours ago