ಗುಲ್ಬರ್ಗಾದಲ್ಲಿ ಕೆಲವು ವರ್ಷಗಳ ಹಿಂದೆ ರೌಡಿ ಶೀಟರ್ ಒಬ್ಬನನ್ನು ಸೆರೆಹಿಡಿಯುವ ಸಂದರ್ಭದಲ್ಲಿ ಪಿಎಸ್ಐ ಮಲ್ಲಿಕಾರ್ಜುನ ಬಂಡೆ ಹುತಾತ್ಮರಾದರು. ಅವರ ಕುರಿತು ಚಿತ್ರ ಮಾಡುವುದಾಗಿ ಆ ಸಂದರ್ಭದಲ್ಲಿ ಕೆಲವರು ಘೋಷಿಸಿದ್ದರು. ಸುದೀಪ್ ಅಥವಾ ದರ್ಶನ್ ಅಭಿನಯದಲ್ಲಿ ‘ಬಂಡೆ’ ಎಂಬ ಚಿತ್ರ ಮಾಡುವುದಾಗಿ ಪ್ರಚಾರ ಪಡೆದರು. ಆದರೆ, ಚಿತ್ರ ಆಗಲಿಲ್ಲ.
ಇದೀಗ ಬಂಡೆ ನಿಧನರಾಗಿ 11 ವರ್ಷಗಳ ನಂತರ ಈಗ ಕೊನೆಗೂ ಅವರ ಕುರಿತು ‘ಬಂಡೆ ಸಾಹೇಬ್’ ಎಂಬ ಚಿತ್ರ ತಯಾರಾಗಿದೆ. ಮಲ್ಲಿಗೆ ಸಿನಿ ಕಂಬೈನ್ಸ್ ಲಾಂಛನದಲ್ಲಿ ಗೋಪಣ್ಣ ದೊಡ್ಮನಿ, ಕಮಲ ದೊಡ್ಮನಿ ಹಾಗೂ ಮಾಲ ವಿ. ಕೊರಳ್ಳಿ ನಿರ್ಮಿಸಿರುವ ಈ ಚಿತ್ರವನ್ನು ಚಿನ್ಮಯ್ ರಾಮ್ ನಿರ್ದೇಶಿಸಿದ್ದಾರೆ. ‘ಕುರುಕ್ಷೇತ್ರ’, ‘ದಿ ವಿಲನ್’ ಸೇರಿದಂತೆ ಕೆಲವು ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿರುವ ಚಿನ್ಮಯ್ ರಾಮ್ಗೆ ‘ಬಂಡೆ ಸಾಹೇಬ್’ ಮೊದಲ ನಿರ್ದೇಶನದ ಚಿತ್ರ.
‘ಕೃಷ್ಣ ರುಕ್ಮಿಣಿ’ ಸೇರಿದಂತೆ ಕೆಲವು ಜನಪ್ರಿಯ ಧಾರಾವಾಹಿಗಳಲ್ಲಿ ಅಭಿನಯಿಸಿರುವ ಸಂತೋಷ್ ರಾಮ್, ಈ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದಾರೆ. ಸಂತೋಷ್ ರಾಮ್ಗೆ ನಾಯಕನಾಗಿ ಇದು ಎರಡನೇ ಚಿತ್ರ. ಕಾವ್ಯ ಭಾರದ್ವಾಜ್ ಈ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ. ವೀರಣ್ಣ ಕೊರಳ್ಳಿ, ಬಿರಾದಾರ್, ಸಿಂಬಾ ಮುಂತಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
‘ಬಂಡೆ ಸಾಹೇಬ್’ ಚಿತ್ರದ ಚಿತ್ರೀಕರಣ ಈಗಾಗಲೇ ಮುಕ್ತಾಯವಾಗಿದ್ದು, ಗುಲ್ಬರ್ಗ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಸಲಾಗಿದೆ. ಚಿತ್ರಕ್ಕೆ ವೀರಣ್ಣ ಕೊರಳ್ಳಿ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಎಂ.ಎಸ್ ತ್ಯಾಗರಾಜ್ ಸಂಗೀತ, ‘ಮುಂಜಾನೆ’ ಮಂಜು ಛಾಯಾಗ್ರಹಣವಿದೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…