ಮನರಂಜನೆ

ಸಿನಿಮಾ ಆಯ್ತು ಮಲ್ಲಿಕಾರ್ಜುನ ಬಂಡೆ ಜೀವನ; ಸದ್ಯದಲ್ಲೇ ಬರಲಿದೆ ‘ಬಂಡೆ ಸಾಹೇಬ್‍’

ಗುಲ್ಬರ್ಗಾದಲ್ಲಿ ಕೆಲವು ವರ್ಷಗಳ ಹಿಂದೆ ರೌಡಿ ಶೀಟರ್‍ ಒಬ್ಬನನ್ನು ಸೆರೆಹಿಡಿಯುವ ಸಂದರ್ಭದಲ್ಲಿ ಪಿಎಸ್ಐ ಮಲ್ಲಿಕಾರ್ಜುನ ಬಂಡೆ ಹುತಾತ್ಮರಾದರು. ಅವರ ಕುರಿತು ಚಿತ್ರ ಮಾಡುವುದಾಗಿ ಆ ಸಂದರ್ಭದಲ್ಲಿ ಕೆಲವರು ಘೋಷಿಸಿದ್ದರು. ಸುದೀಪ್‍ ಅಥವಾ ದರ್ಶನ್‍ ಅಭಿನಯದಲ್ಲಿ ‘ಬಂಡೆ’ ಎಂಬ ಚಿತ್ರ ಮಾಡುವುದಾಗಿ ಪ್ರಚಾರ ಪಡೆದರು. ಆದರೆ, ಚಿತ್ರ ಆಗಲಿಲ್ಲ.

ಇದೀಗ ಬಂಡೆ ನಿಧನರಾಗಿ 11 ವರ್ಷಗಳ ನಂತರ ಈಗ ಕೊನೆಗೂ ಅವರ ಕುರಿತು ‘ಬಂಡೆ ಸಾಹೇಬ್‍’ ಎಂಬ ಚಿತ್ರ ತಯಾರಾಗಿದೆ. ಮಲ್ಲಿಗೆ ಸಿನಿ ಕಂಬೈನ್ಸ್ ಲಾಂಛನದಲ್ಲಿ ಗೋಪಣ್ಣ ದೊಡ್ಮನಿ, ಕಮಲ ದೊಡ್ಮನಿ ಹಾಗೂ ಮಾಲ ವಿ. ಕೊರಳ್ಳಿ ನಿರ್ಮಿಸಿರುವ ಈ ಚಿತ್ರವನ್ನು ಚಿನ್ಮಯ್ ರಾಮ್ ನಿರ್ದೇಶಿಸಿದ್ದಾರೆ. ‘ಕುರುಕ್ಷೇತ್ರ’, ‘ದಿ ವಿಲನ್’ ಸೇರಿದಂತೆ ಕೆಲವು ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿರುವ ಚಿನ್ಮಯ್ ರಾಮ್ಗೆ ‘ಬಂಡೆ ಸಾಹೇಬ್’ ಮೊದಲ ನಿರ್ದೇಶನದ ಚಿತ್ರ.

‘ಕೃಷ್ಣ ರುಕ್ಮಿಣಿ’ ಸೇರಿದಂತೆ ಕೆಲವು ಜನಪ್ರಿಯ ಧಾರಾವಾಹಿಗಳಲ್ಲಿ ಅಭಿನಯಿಸಿರುವ ಸಂತೋಷ್ ರಾಮ್, ಈ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದಾರೆ. ಸಂತೋಷ್ ರಾಮ್‍ಗೆ ನಾಯಕನಾಗಿ ಇದು ಎರಡನೇ ಚಿತ್ರ. ಕಾವ್ಯ ಭಾರದ್ವಾಜ್ ಈ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ. ವೀರಣ್ಣ ಕೊರಳ್ಳಿ, ಬಿರಾದಾರ್,‌ ಸಿಂಬಾ ಮುಂತಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

‘ಬಂಡೆ ಸಾಹೇಬ್’ ಚಿತ್ರದ ಚಿತ್ರೀಕರಣ ಈಗಾಗಲೇ ಮುಕ್ತಾಯವಾಗಿದ್ದು, ಗುಲ್ಬರ್ಗ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಸಲಾಗಿದೆ. ಚಿತ್ರಕ್ಕೆ ವೀರಣ್ಣ ಕೊರಳ್ಳಿ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಎಂ.ಎಸ್ ತ್ಯಾಗರಾಜ್ ಸಂಗೀತ, ‘ಮುಂಜಾನೆ’ ಮಂಜು ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

4 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

7 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

11 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

13 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

14 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

15 hours ago