ಮನರಂಜನೆ

ಮುಂಗಾರು ಮಳೆʼಗೆ 18; ನೆನಪಲ್ಲಿ ‘ಮನದ ಕಡಲಿ’ ಹಾಡು ಬಿಡುಗಡೆ

ಯೋಗರಾಜ್‍ ಭಟ್‍ ನಿರ್ದೇಶನದ ‘ಮನದ ಕಡಲು’ ಚಿತ್ರದ ಚಿತ್ರೀಕರಣ ಮುಗಿದಿದೆ. ಚಿತ್ರವು ಫೆಬ್ರವರಿಯಲ್ಲಿ ಬಿಡುಗಡೆ ಆಗುತ್ತಿದೆ. ಈ ಮಧ್ಯೆ, ಚಿತ್ರದ ಮೊದಲ ಹಾಡು ಭಾನುವಾರ ಬಿಡುಗಡೆ ಆಗಿದೆ. ಹಾಡು ಅದೇ ದಿನ ಬಿಡುಗಡೆ ಆಗುವುದಕ್ಕೂ ಕಾರಣವಿದೆ. ಅದೇನೆಂದರೆ, 18 ವರ್ಷಗಳ ಹಿಂದೆ ಡಿ. 29ರಂದು ಯೋಗರಾಜ್‍ ಭಟ್‍ ನಿರ್ದೇಶನದ ‘ಮುಂಗಾರು ಮಳೆ’ ಮತ್ತು ಇ. ಕೃಷ್ಣಪ್ಪ ನಿರ್ಮಾಣದ ‘ಮುಂಗಾರು ಮಳೆ’ ಚಿತ್ರವು ಬಿಡುಗಡೆ ಆಗಿತ್ತು. ಆ ನೆನಪಲ್ಲಿ ‘ಮನದ ಕಡಲು’ ಹಾಡು ಬಿಡುಗಡೆ ಆಗಿದೆ.

ವಿ. ಹರಿಕೃಷ್ಣ ಸಂಗೀತ ನೀಡಿರುವ ‘ಹೂ ದುಂಬಿಯ ಕಥೆಯ’ ಎಂಬ ಹಾಡು ಡಿಬೀಟ್ಸ್ ಮೂಲಕ ಬಿಡುಗಡೆಯಾಗಿದೆ. ಸಂಜಿತ್ ಹೆಗ್ಡೆ ಈ ಸುಮಧುರ ಹಾಡಿಗೆ ಧ್ವನಿಯಾಗಿದ್ದಾರೆ. ‘ಮನದ ಕಡಲು’ ಚಿತ್ರದ ಮೊದಲ ಹಾಡು ಇದ್ದಾಗಿದ್ದು,‌ ವಿ.ಹರಿಕೃಷ್ಣ ಅವರೇ ಹಾಡನ್ನು ಬಿಡುಗಡೆ ಮಾಡಿದರು. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಈ ಹಾಡಿನ ಕುರಿತು ಮಾತನಾಡುವ ಯೋಗರಾಜ್‍ ಭಟ್‍, ‘‘ಮುಂಗಾರು ಮಳೆ’ ಬಂದು 18 ವರ್ಷ ಆಯಿತು ಅಂದರೆ ನಂಬಲಿಕ್ಕೆ ಆಗುತ್ತಿಲ್ಲ. ನಿನ್ನೆ ಮೊನ್ನೆ ಆದ ಹಾಗೆ ಇದೆ. ಇದೇ ಸಂದರ್ಭದಲ್ಲಿ ಇ. ಕೃಷ್ಣಪ್ಪ ಅವರ ನಿರ್ಮಾಣದಲ್ಲಿ ಹಾಗೂ ನನ್ನ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಮನದ ಕಡಲು’ ಚಿತ್ರದ ಮೊದಲ ಗೀತೆಯನ್ನು ಬಿಡುಗಡೆ ಮಾಡುತ್ತಿದ್ದೇವೆ. ಈ ಹಾಡು ಹುಟ್ಟಿದ್ದು ನಿರ್ಮಾಪಕರ ತೋಟದ ಮನೆಯಲ್ಲಿ. ಕಂಪೋಸ್ ಆಗಿದ್ದು‌ ನನ್ನ‌ ಆಫೀಸ್ ಮೇಲಿರುವ ಸ್ಟುಡಿಯೋದಲ್ಲಿ. ಮುರಳಿ ನೃತ್ಯ ಸಂಯೋಜನೆಯಲ್ಲಿ ‘ಹೂ ದುಂಬಿಯ ಕಥೆಯ’ ಹಾಡು ಮೂಡಿಬಂದಿದೆ.‌ ಸುಮುಖ ಹಾಗೂ ರಾಶಿಕಾ ಶೆಟ್ಟಿ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ’ ಎಂದು ಹಾಡಿನ ಬಗ್ಗೆ ಮಾಹಿತಿ ನೀಡಿದರು.

18 ವರ್ಷಗಳ ನಂತರ ಯೋಗರಾಜ್ ಭಟ್ ಅವರ ಜೊತೆ ಮತ್ತೆ ಚಿತ್ರ ಮಾಡುತ್ತಿದ್ದೇನೆ ಎಂದು ಮಾತು ಪ್ರಾರಂಭಿಸಿದ ಕೃಷ್ಣಪ್ಪ, ‘ನಿಮ್ಮ ಜೊತೆ ಸಿನಿಮಾ ಮಾಡುವುದಾದರೆ ಹೊಸ ನಾಯಕನೇ ಇರಬೇಕು ಅಂದೆ. ಅದರಂತೆ ಸುಮುಖ ಅವರನ್ನು ಆಯ್ಕೆ ಮಾಡಲಾಯಿತು’ ಎಂದು ನಿರ್ಮಾಪಕ ಇ.ಕೃಷ್ಣಪ್ಪ ತಿಳಿಸಿದರು.

ಸಿನಿಮಾವನ್ನು ತುಂಬಾ ಪ್ರೀತಿಸುವ ತಂಡದ ಜೊತೆಗೆ ಕೆಲಸ ಮಾಡಿದ್ದು ತುಂಬಾ ಖುಷಿಯಾಗಿದೆ ಎಂದ ವಿ. ಹರಿಕೃಷ್ಣ, ‘ಯೋಗರಾಜ್ ಭಟ್ ಅವರು ಬರೆದಿರುವ ಹಾಡನ್ನು ಸಂಜಿತ್ ಸುಶ್ರಾವ್ಯವಾಗಿ ಹಾಡಿದ್ದಾರೆ. ತೆರೆಯ ಮೇಲೂ ಹಾಡು ಬಹಳ ಚೆನ್ನಾಗಿ ಬಂದಿದೆ’ ಎಂದರು.

‘ನನ್ನ ಹಾಗೂ ಸಂಜಿತ್ ಅವರನ್ನು ನೋಡಿದವರು ಟ್ವಿನ್ಸಾ? ಅಂತ ಕೇಳಿದರು. ನಾನು‌ ಯೋಗರಾಜ್ ಭಟ್ ಅವರ ಸಾಹಿತ್ಯಕ್ಕೆ, ಹರಿಕೃಷ್ಣ ಅವರ ಸಂಗೀತಕ್ಕೆ ಹಾಗೂ ಸಂಜಿತ್ ಅವರ ಗಾಯನಕ್ಕೆ ಅಭಿಮಾನಿ’ ಎಂದರು ನಾಯಕ ಸುಮುಖ.

‘ಮನದ ಕಡಲು’ ಚಿತ್ರದಲ್ಲಿ ಸುಮುಖ, ಅಂಜಲಿ ಅನೀಶ್‍ ಮತ್ತು ರಾಶಿಕಾ ಶೆಟ್ಟಿ ನಾಯಕ-ನಾಯಕಿಯರಾಗಿ ನಟಿಸಿದರೆ, ದತ್ತಣ್ಣ, ರಂಗಾಯಣ ರಘು ಮುಂತಾದ ಹಿರಿಯರಿದ್ದಾರೆ. ಚಿತ್ರಕ್ಕೆ ಸಂತೋಷ್‍ ರೈ ಪಾತಾಜೆ ಛಾಯಾಗ್ರಹಣ, ಜಯಂತ್‍ ಕಾಯ್ಕಿಣಿ ಸಾಹಿತ್ಯವಿದೆ.

 

ಆಂದೋಲನ ಡೆಸ್ಕ್

Recent Posts

ಮೈೂಸೂರು ವಿ.ವಿ ಕುಲಪತಿ ವಿರುದ್ಧ ಎಫ್‌ಐಆರ್‌ ದಾಖಲಿಸಲು ಸೂಚನೆ

ಮೈಸೂರು : ಮೈಸೂರು ವಿಶ್ವವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗೆ ಜಾತಿ ಆಧಾರಿತ ಮಾನಸಿಕ ಕಿರುಕುಳ ನೀಡಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ…

21 mins ago

ಯೋಗೇಶ್ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು : ಯೋಗೇಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಿಗೆ ಕೊನೆಗೂ ಶಿಕ್ಷೆ ಪ್ರಕಟವಾಗಿದೆ. 17ನೇ ಆರೋಪಿ ಕಾಂಗ್ರೆಸ್ ಶಾಸಕ ವಿನಯ್…

2 hours ago

ಮೈಸೂರು | ಮನೆಯ ಮಂಚದ ಕೆಳಗೆ ಚಿರತೆ ಪ್ರಕ್ಷತ್ಯ, ಆತಂಕಕ್ಕೀಡಾದ ಮನೆಮಂದಿ

ಮೈಸೂರು : ನಗರದ ಸಿದ್ದಾರ್ಥ ನಗರದಲ್ಲಿ ಚಿರತೆಯೊಂದು ಮನೆಯೊಳಗೆ ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಸುರೇಶ್ ಎಂಬುವವರ ಮನೆಯಲ್ಲಿ…

2 hours ago

ಚಾರಣಿಗರ ಮೊಬೈಲ್ ಗೆ ಟ್ರ್ಯಾಕಿಂಗ್ ಆಪ್ ಅಳವಡಿಕೆ ಕಡ್ಡಾಯ: ಈಶ್ವರ ಖಂಡ್ರೆ

ಬೆಂಗಳೂರು : ರಾಜ್ಯದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ಅನುಮೋದಿತ ಚಾರಣ ಪಥಗಳಲ್ಲಿ ಇನ್ನು ಮುಂದೆ ಪ್ರಕೃತಿ ಮಾರ್ಗದರ್ಶಕ…

3 hours ago

ಅಮೆರಿಕ-ಇರಾನ್ ಎರಡನೇ ಸುತ್ತಿನ ಮಾತುಕತೆಗೆ ಪಾಕಿಸ್ತಾನ ಸಿದ್ಧತೆ

ಇಸ್ಲಾಮಾಬಾದ್ : ಅಮೆರಿಕ ಮತ್ತು ಇರಾನ್ ನಡುವಿನ ಎರಡನೇ ಸುತ್ತಿನ ಶಾಂತಿ ಮಾತುಕತೆ ಪಾಕಿಸ್ತಾನದಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ ಅಧಿಕಾರಿಗಳು…

3 hours ago

ಕಾರು-ಖಾಸಗಿ ಬಸ್‌ ಡಿಕ್ಕಿ : 6 ಮಂದಿ ಸಜೀವ ದಹನ

ಯಾದಗಿರಿ : ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಹೊತ್ತಿಯುರಿದಿದ್ದು, 6 ಮಂದಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ…

5 hours ago