ಮನರಂಜನೆ

ಮುಂಗಾರು ಮಳೆʼಗೆ 18; ನೆನಪಲ್ಲಿ ‘ಮನದ ಕಡಲಿ’ ಹಾಡು ಬಿಡುಗಡೆ

ಯೋಗರಾಜ್‍ ಭಟ್‍ ನಿರ್ದೇಶನದ ‘ಮನದ ಕಡಲು’ ಚಿತ್ರದ ಚಿತ್ರೀಕರಣ ಮುಗಿದಿದೆ. ಚಿತ್ರವು ಫೆಬ್ರವರಿಯಲ್ಲಿ ಬಿಡುಗಡೆ ಆಗುತ್ತಿದೆ. ಈ ಮಧ್ಯೆ, ಚಿತ್ರದ ಮೊದಲ ಹಾಡು ಭಾನುವಾರ ಬಿಡುಗಡೆ ಆಗಿದೆ. ಹಾಡು ಅದೇ ದಿನ ಬಿಡುಗಡೆ ಆಗುವುದಕ್ಕೂ ಕಾರಣವಿದೆ. ಅದೇನೆಂದರೆ, 18 ವರ್ಷಗಳ ಹಿಂದೆ ಡಿ. 29ರಂದು ಯೋಗರಾಜ್‍ ಭಟ್‍ ನಿರ್ದೇಶನದ ‘ಮುಂಗಾರು ಮಳೆ’ ಮತ್ತು ಇ. ಕೃಷ್ಣಪ್ಪ ನಿರ್ಮಾಣದ ‘ಮುಂಗಾರು ಮಳೆ’ ಚಿತ್ರವು ಬಿಡುಗಡೆ ಆಗಿತ್ತು. ಆ ನೆನಪಲ್ಲಿ ‘ಮನದ ಕಡಲು’ ಹಾಡು ಬಿಡುಗಡೆ ಆಗಿದೆ.

ವಿ. ಹರಿಕೃಷ್ಣ ಸಂಗೀತ ನೀಡಿರುವ ‘ಹೂ ದುಂಬಿಯ ಕಥೆಯ’ ಎಂಬ ಹಾಡು ಡಿಬೀಟ್ಸ್ ಮೂಲಕ ಬಿಡುಗಡೆಯಾಗಿದೆ. ಸಂಜಿತ್ ಹೆಗ್ಡೆ ಈ ಸುಮಧುರ ಹಾಡಿಗೆ ಧ್ವನಿಯಾಗಿದ್ದಾರೆ. ‘ಮನದ ಕಡಲು’ ಚಿತ್ರದ ಮೊದಲ ಹಾಡು ಇದ್ದಾಗಿದ್ದು,‌ ವಿ.ಹರಿಕೃಷ್ಣ ಅವರೇ ಹಾಡನ್ನು ಬಿಡುಗಡೆ ಮಾಡಿದರು. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಈ ಹಾಡಿನ ಕುರಿತು ಮಾತನಾಡುವ ಯೋಗರಾಜ್‍ ಭಟ್‍, ‘‘ಮುಂಗಾರು ಮಳೆ’ ಬಂದು 18 ವರ್ಷ ಆಯಿತು ಅಂದರೆ ನಂಬಲಿಕ್ಕೆ ಆಗುತ್ತಿಲ್ಲ. ನಿನ್ನೆ ಮೊನ್ನೆ ಆದ ಹಾಗೆ ಇದೆ. ಇದೇ ಸಂದರ್ಭದಲ್ಲಿ ಇ. ಕೃಷ್ಣಪ್ಪ ಅವರ ನಿರ್ಮಾಣದಲ್ಲಿ ಹಾಗೂ ನನ್ನ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಮನದ ಕಡಲು’ ಚಿತ್ರದ ಮೊದಲ ಗೀತೆಯನ್ನು ಬಿಡುಗಡೆ ಮಾಡುತ್ತಿದ್ದೇವೆ. ಈ ಹಾಡು ಹುಟ್ಟಿದ್ದು ನಿರ್ಮಾಪಕರ ತೋಟದ ಮನೆಯಲ್ಲಿ. ಕಂಪೋಸ್ ಆಗಿದ್ದು‌ ನನ್ನ‌ ಆಫೀಸ್ ಮೇಲಿರುವ ಸ್ಟುಡಿಯೋದಲ್ಲಿ. ಮುರಳಿ ನೃತ್ಯ ಸಂಯೋಜನೆಯಲ್ಲಿ ‘ಹೂ ದುಂಬಿಯ ಕಥೆಯ’ ಹಾಡು ಮೂಡಿಬಂದಿದೆ.‌ ಸುಮುಖ ಹಾಗೂ ರಾಶಿಕಾ ಶೆಟ್ಟಿ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ’ ಎಂದು ಹಾಡಿನ ಬಗ್ಗೆ ಮಾಹಿತಿ ನೀಡಿದರು.

18 ವರ್ಷಗಳ ನಂತರ ಯೋಗರಾಜ್ ಭಟ್ ಅವರ ಜೊತೆ ಮತ್ತೆ ಚಿತ್ರ ಮಾಡುತ್ತಿದ್ದೇನೆ ಎಂದು ಮಾತು ಪ್ರಾರಂಭಿಸಿದ ಕೃಷ್ಣಪ್ಪ, ‘ನಿಮ್ಮ ಜೊತೆ ಸಿನಿಮಾ ಮಾಡುವುದಾದರೆ ಹೊಸ ನಾಯಕನೇ ಇರಬೇಕು ಅಂದೆ. ಅದರಂತೆ ಸುಮುಖ ಅವರನ್ನು ಆಯ್ಕೆ ಮಾಡಲಾಯಿತು’ ಎಂದು ನಿರ್ಮಾಪಕ ಇ.ಕೃಷ್ಣಪ್ಪ ತಿಳಿಸಿದರು.

ಸಿನಿಮಾವನ್ನು ತುಂಬಾ ಪ್ರೀತಿಸುವ ತಂಡದ ಜೊತೆಗೆ ಕೆಲಸ ಮಾಡಿದ್ದು ತುಂಬಾ ಖುಷಿಯಾಗಿದೆ ಎಂದ ವಿ. ಹರಿಕೃಷ್ಣ, ‘ಯೋಗರಾಜ್ ಭಟ್ ಅವರು ಬರೆದಿರುವ ಹಾಡನ್ನು ಸಂಜಿತ್ ಸುಶ್ರಾವ್ಯವಾಗಿ ಹಾಡಿದ್ದಾರೆ. ತೆರೆಯ ಮೇಲೂ ಹಾಡು ಬಹಳ ಚೆನ್ನಾಗಿ ಬಂದಿದೆ’ ಎಂದರು.

‘ನನ್ನ ಹಾಗೂ ಸಂಜಿತ್ ಅವರನ್ನು ನೋಡಿದವರು ಟ್ವಿನ್ಸಾ? ಅಂತ ಕೇಳಿದರು. ನಾನು‌ ಯೋಗರಾಜ್ ಭಟ್ ಅವರ ಸಾಹಿತ್ಯಕ್ಕೆ, ಹರಿಕೃಷ್ಣ ಅವರ ಸಂಗೀತಕ್ಕೆ ಹಾಗೂ ಸಂಜಿತ್ ಅವರ ಗಾಯನಕ್ಕೆ ಅಭಿಮಾನಿ’ ಎಂದರು ನಾಯಕ ಸುಮುಖ.

‘ಮನದ ಕಡಲು’ ಚಿತ್ರದಲ್ಲಿ ಸುಮುಖ, ಅಂಜಲಿ ಅನೀಶ್‍ ಮತ್ತು ರಾಶಿಕಾ ಶೆಟ್ಟಿ ನಾಯಕ-ನಾಯಕಿಯರಾಗಿ ನಟಿಸಿದರೆ, ದತ್ತಣ್ಣ, ರಂಗಾಯಣ ರಘು ಮುಂತಾದ ಹಿರಿಯರಿದ್ದಾರೆ. ಚಿತ್ರಕ್ಕೆ ಸಂತೋಷ್‍ ರೈ ಪಾತಾಜೆ ಛಾಯಾಗ್ರಹಣ, ಜಯಂತ್‍ ಕಾಯ್ಕಿಣಿ ಸಾಹಿತ್ಯವಿದೆ.

 

ಆಂದೋಲನ ಡೆಸ್ಕ್

Recent Posts

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

6 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

8 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

9 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

9 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

9 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

11 hours ago