ಮನರಂಜನೆ

ಕೈವಾಡ, ಪವಾಡಗಳ ಸುತ್ತ ‘ಮಂಗಳಾಪುರಂ’; ಹೊಸ ಚಿತ್ರದಲ್ಲಿ ರಿಷಿ

ಇತ್ತೀಚೆಗಷ್ಟೇ ಇನ್‍ಸ್ಪೆಕ್ಟರ್‍ ರುದ್ರನ ಅವತಾರವೆತ್ತಿದ್ದ ರಿಷಿ, ಇದೀಗ ಕೈವಾಡ ಮತ್ತು ಪವಾಡಗಳ ಕುರಿತಾದ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ. ಈ ಹಿಂದೆ ತುಳು ಚಿತ್ರರಂಗದಲ್ಲಿ ‘ಉಮಿಲ್’ ಹಾಗೂ ‘ದೊಂಬರಾಟ’ ಚಿತ್ರಗಳನ್ನು ನಿರ್ದೇಶಿಸಿರುವ ರಂಜಿತ್ ರಾಜ್ ಸುವರ್ಣ, ರಿಷಿ ನಟನೆಯ ಹೊಸ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಅಂದ ಹಾಗೆ, ಈ ಚಿತ್ರದ ಹೆಸರು ‘ಮಂಗಳಾಪುರಂ’.

‘ರುದ್ರ ಗರುಡ ಪುರಾಣ’ ಚಿತ್ರದ ನಂತರ ರಿಷಿ ನಟಿಸಲಿರುವ ಹೊಸ ಚಿತ್ರದ ಹೆಸರು ‘ಮಂಗಳಾಪುರಂ’. ಮರ್ಡರ್‍ ಮಿಸ್ಟ್ರಿಯಾಗಿದ್ದು, ನಂಬಿಕೆ – ಮೂಡನಂಬಿಕೆ, ಕೈವಾಡ ಹಾಗೂ ಪವಾಡಗಳ ಸುತ್ತ ಕಥೆ ಸಾಗಲಿದೆ. ವಿಶೇಷವೆಂದರೆ, ರಿಷಿ ಜೊತೆಯಲ್ಲಿ ಕಾಶಿನಾಥ್ ಪುತ್ರ ಅಭಿಮನ್ಯು‌ ಕಾಶಿನಾಥ್ ಸಹ ಈ ಚಿತ್ರದಲ್ಲಿ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ರಿಷಿ ಮತ್ತು ಅಭಿ ಪಾತ್ರವೇನು ಎಂದು ಚಿತ್ರತಂಡ ಗೌಪ್ಯವಾಗಿಟ್ಟಿದೆ.

‘ಮಂಗಳಾಪುರಂ’ ಚಿತ್ರವನ್ನು ಪ್ರಸನ್ನ ತಂತ್ರಿ ಮೂಡಬಿದ್ರೆ ಹಾಗೂ‌ ರಾಮ್ ಪ್ರಸಾದ್ ನಿರ್ಮಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ನಿರ್ಮಾಪಕರಾಗಿ ಕಾಲಿಡುತ್ತಿದ್ದಾರೆ. ಸದ್ಯ ಚಿತ್ರದ ಮೊದಲ ನೋಟ ಮಾತ್ರ ಬಿಡುಗಡೆಯಾಗಿದೆ. ಇನ್ನು, ಚಿತ್ರೀಕರಣವೇನಿದ್ದರೂ ಜೂನ್‍ ತಿಂಗಳಿನಿಂದ ಪ್ರಾರಂಭವಾಗಲಿದೆಯಂತೆ. ಈ ಚಿತ್ರದಲ್ಲಿ ಯಾರೆಲ್ಲಾ ಇರುತ್ತಾರೆ ಎಂಬ ಪ್ರಶ್ನೆಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ. ಸದ್ಯಕ್ಕೆ ಆಯ್ಕೆ ನಡೆಯುತ್ತಿದ್ದು, ಆದಷ್ಟು ಬೇಗ ಕಲಾವಿದರ ಮತ್ತು ತಂತ್ರಜ್ಞರ ಕುರಿತು ಚಿತ್ರತಂಡ ಮಾಹಿತಿ ನೀಡಲಿದೆಯಂತೆ.

ಈ ಚಿತ್ರಕ್ಕಾಗಿ ಬೆಂಗಳೂರು ಅಲ್ಲದೆ ಕಾರ್ಕಳ, ತೀರ್ಥಹಳ್ಳಿ‌, ಮಡಿಕೆರಿ ಮುಂತತಾದ ಕಡೆ ಚಿತ್ರೀಕರಣ ನಡೆಯಲಿದೆ. ಅನೂಪ್ ಸಿಳೀನ್ ಸಂಗೀತ ಮತ್ತು ಅಭಿಷೇಕ್‍ ಕಾಸರಗೋಡು ಛಾಯಾಗ್ರಹಣ ಈ ಚಿತ್ರಕ್ಕಿರಲಿದೆ.

ಆಂದೋಲನ ಡೆಸ್ಕ್

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

4 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

5 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

6 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

6 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

6 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

7 hours ago