ಮನರಂಜನೆ

ಕೈವಾಡ, ಪವಾಡಗಳ ಸುತ್ತ ‘ಮಂಗಳಾಪುರಂ’; ಹೊಸ ಚಿತ್ರದಲ್ಲಿ ರಿಷಿ

ಇತ್ತೀಚೆಗಷ್ಟೇ ಇನ್‍ಸ್ಪೆಕ್ಟರ್‍ ರುದ್ರನ ಅವತಾರವೆತ್ತಿದ್ದ ರಿಷಿ, ಇದೀಗ ಕೈವಾಡ ಮತ್ತು ಪವಾಡಗಳ ಕುರಿತಾದ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ. ಈ ಹಿಂದೆ ತುಳು ಚಿತ್ರರಂಗದಲ್ಲಿ ‘ಉಮಿಲ್’ ಹಾಗೂ ‘ದೊಂಬರಾಟ’ ಚಿತ್ರಗಳನ್ನು ನಿರ್ದೇಶಿಸಿರುವ ರಂಜಿತ್ ರಾಜ್ ಸುವರ್ಣ, ರಿಷಿ ನಟನೆಯ ಹೊಸ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಅಂದ ಹಾಗೆ, ಈ ಚಿತ್ರದ ಹೆಸರು ‘ಮಂಗಳಾಪುರಂ’.

‘ರುದ್ರ ಗರುಡ ಪುರಾಣ’ ಚಿತ್ರದ ನಂತರ ರಿಷಿ ನಟಿಸಲಿರುವ ಹೊಸ ಚಿತ್ರದ ಹೆಸರು ‘ಮಂಗಳಾಪುರಂ’. ಮರ್ಡರ್‍ ಮಿಸ್ಟ್ರಿಯಾಗಿದ್ದು, ನಂಬಿಕೆ – ಮೂಡನಂಬಿಕೆ, ಕೈವಾಡ ಹಾಗೂ ಪವಾಡಗಳ ಸುತ್ತ ಕಥೆ ಸಾಗಲಿದೆ. ವಿಶೇಷವೆಂದರೆ, ರಿಷಿ ಜೊತೆಯಲ್ಲಿ ಕಾಶಿನಾಥ್ ಪುತ್ರ ಅಭಿಮನ್ಯು‌ ಕಾಶಿನಾಥ್ ಸಹ ಈ ಚಿತ್ರದಲ್ಲಿ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ರಿಷಿ ಮತ್ತು ಅಭಿ ಪಾತ್ರವೇನು ಎಂದು ಚಿತ್ರತಂಡ ಗೌಪ್ಯವಾಗಿಟ್ಟಿದೆ.

‘ಮಂಗಳಾಪುರಂ’ ಚಿತ್ರವನ್ನು ಪ್ರಸನ್ನ ತಂತ್ರಿ ಮೂಡಬಿದ್ರೆ ಹಾಗೂ‌ ರಾಮ್ ಪ್ರಸಾದ್ ನಿರ್ಮಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ನಿರ್ಮಾಪಕರಾಗಿ ಕಾಲಿಡುತ್ತಿದ್ದಾರೆ. ಸದ್ಯ ಚಿತ್ರದ ಮೊದಲ ನೋಟ ಮಾತ್ರ ಬಿಡುಗಡೆಯಾಗಿದೆ. ಇನ್ನು, ಚಿತ್ರೀಕರಣವೇನಿದ್ದರೂ ಜೂನ್‍ ತಿಂಗಳಿನಿಂದ ಪ್ರಾರಂಭವಾಗಲಿದೆಯಂತೆ. ಈ ಚಿತ್ರದಲ್ಲಿ ಯಾರೆಲ್ಲಾ ಇರುತ್ತಾರೆ ಎಂಬ ಪ್ರಶ್ನೆಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ. ಸದ್ಯಕ್ಕೆ ಆಯ್ಕೆ ನಡೆಯುತ್ತಿದ್ದು, ಆದಷ್ಟು ಬೇಗ ಕಲಾವಿದರ ಮತ್ತು ತಂತ್ರಜ್ಞರ ಕುರಿತು ಚಿತ್ರತಂಡ ಮಾಹಿತಿ ನೀಡಲಿದೆಯಂತೆ.

ಈ ಚಿತ್ರಕ್ಕಾಗಿ ಬೆಂಗಳೂರು ಅಲ್ಲದೆ ಕಾರ್ಕಳ, ತೀರ್ಥಹಳ್ಳಿ‌, ಮಡಿಕೆರಿ ಮುಂತತಾದ ಕಡೆ ಚಿತ್ರೀಕರಣ ನಡೆಯಲಿದೆ. ಅನೂಪ್ ಸಿಳೀನ್ ಸಂಗೀತ ಮತ್ತು ಅಭಿಷೇಕ್‍ ಕಾಸರಗೋಡು ಛಾಯಾಗ್ರಹಣ ಈ ಚಿತ್ರಕ್ಕಿರಲಿದೆ.

ಆಂದೋಲನ ಡೆಸ್ಕ್

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

1 hour ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

3 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

3 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

9 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

9 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

10 hours ago