ಮನರಂಜನೆ

ಸೆಟ್ಟೇರಿತು ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾ …

ರವಿಚಂದ್ರನ್‍ ಅವರ ಮಗ ಮನೋರಂಜನ್ ರವಿಚಂದ್ರನ್ ಅಭಿನಯದ ಚಿತ್ರವೊಂದು ಬಿಡುಗಡೆಯಾಗಿ ಮೂರು ವರ್ಷಗಳೇ ಆಗಿವೆ. 2022ರಲ್ಲಿ ಬಿಡುಗಡೆಯಾದ ‘ಪ್ರಾರಂಭ’ ಚಿತ್ರದ ನಂತರ ಮನೋರಂಜನ್‍ ಒಂದೆರಡು ಚಿತ್ರಗಳನ್ನು ಒಪ್ಪಿಕೊಂಡರಾದರೂ, ಯಾವ ಚಿತ್ರವೂ ಬಿಡುಗಡೆ ಆಗಿಲ್ಲ.

ಇದೀಗ ಮನೋರಂಜನ್‍ ಅವರ ಐದನೇ ಸಿನಿಮಾ ಸೆಟ್ಟೇರಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಶ್ರೀ ಲಕ್ಷ್ಮಿ ನರಸಿಂಹಸ್ವಾಮಿ ಸನ್ನಿಧಿಯಲ್ಲಿ ಇತ್ತೀಚೆಗೆ ಚಿತ್ರದ ಮುಹೂರ್ತ ನೆರವೇರಿದೆ. ಮನು ಹೊಸ ಸಾಹಸಕ್ಕೆ ಸಹೋದರ ವಿಕ್ರಮ್ ರವಿಚಂದ್ರನ್ ಕ್ಲ್ಯಾಪ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ.

ರುದ್ರೇಶ್ ನಿರ್ದೇಶನದಲ್ಲಿ ಮನೋರಂಜನ್ ನಾಯಕನಾಗಿ ಅಭಿನಯಿಸುತ್ತಿದ್ದು, ಬೃಂದಾ ಆಚಾರ್ಯ ನಾಯಕಿಯಾಗಿ ಜೊತೆಯಾಗಿದ್ದಾರೆ. ನಟಿ ಅನುಷಾ ರೈ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕೆ ರುದ್ರೇಶ್‍ ಕಥೆ ರಚಿಸಿದ್ದು, ಒಂದು ವಿಭಿನ್ನ ವಿಷಯವನ್ನು ಕಮರ್ಷಿಯಲ್ ಚೌಕಟ್ಟಿನಲ್ಲಿ ಹೇಳುವುದಕ್ಕೆ ಮುಂದಾಗಿದ್ದಾರೆ.

ವೈಎಸ್ ಪ್ರೊಡಕ್ಷನ್ ನಡಿ ಶ್ರೀನಿವಾಸ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಜೆಸ್ಸಿ ಗಿಫ್ಟ್ ಸಂಗೀತ, ಸೆಲ್ವಂ ಛಾಯಾಗ್ರಹಣವಿದೆ. ಕೆ.ಎಂ. ಪ್ರಕಾಶ್‍ ಅವರ ಸಂಕಲನವಿದೆ. ಚಿತ್ರದ ಮುಹೂರ್ತವಾಗಿದ್ದರೂ, ಚಿತ್ರೀಕರಣ ಪ್ರಾರಂಭವಾಗುವುದು ಮುಂದಿನ ವಾರದಿಂದ. ಮೊದಲ ಹಂತದ ಚಿತ್ರೀಕರಣವನ್ನು ಚಿತ್ರತಂಡ ಬೆಂಗಳೂರಿನಲ್ಲಿ ನಡೆಸಲು ಯೋಜನೆ ಹಾಕಿಕೊಂಡಿದೆ‌. ಆ ಬಳಿಕ ಚಿತ್ರತಂಡ ಬಾದಾಮಿಯಲ್ಲಿ ಚಿತ್ರೀಕರಣ ಮುಂದುವರೆಸಲಿದೆ.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

5 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

6 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

7 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

8 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

8 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

8 hours ago