manohar ravichandran
ರವಿಚಂದ್ರನ್ ಅವರ ಮಗ ಮನೋರಂಜನ್ ರವಿಚಂದ್ರನ್ ಅಭಿನಯದ ಚಿತ್ರವೊಂದು ಬಿಡುಗಡೆಯಾಗಿ ಮೂರು ವರ್ಷಗಳೇ ಆಗಿವೆ. 2022ರಲ್ಲಿ ಬಿಡುಗಡೆಯಾದ ‘ಪ್ರಾರಂಭ’ ಚಿತ್ರದ ನಂತರ ಮನೋರಂಜನ್ ಒಂದೆರಡು ಚಿತ್ರಗಳನ್ನು ಒಪ್ಪಿಕೊಂಡರಾದರೂ, ಯಾವ ಚಿತ್ರವೂ ಬಿಡುಗಡೆ ಆಗಿಲ್ಲ.
ಇದೀಗ ಮನೋರಂಜನ್ ಅವರ ಐದನೇ ಸಿನಿಮಾ ಸೆಟ್ಟೇರಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಶ್ರೀ ಲಕ್ಷ್ಮಿ ನರಸಿಂಹಸ್ವಾಮಿ ಸನ್ನಿಧಿಯಲ್ಲಿ ಇತ್ತೀಚೆಗೆ ಚಿತ್ರದ ಮುಹೂರ್ತ ನೆರವೇರಿದೆ. ಮನು ಹೊಸ ಸಾಹಸಕ್ಕೆ ಸಹೋದರ ವಿಕ್ರಮ್ ರವಿಚಂದ್ರನ್ ಕ್ಲ್ಯಾಪ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ.
ರುದ್ರೇಶ್ ನಿರ್ದೇಶನದಲ್ಲಿ ಮನೋರಂಜನ್ ನಾಯಕನಾಗಿ ಅಭಿನಯಿಸುತ್ತಿದ್ದು, ಬೃಂದಾ ಆಚಾರ್ಯ ನಾಯಕಿಯಾಗಿ ಜೊತೆಯಾಗಿದ್ದಾರೆ. ನಟಿ ಅನುಷಾ ರೈ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕೆ ರುದ್ರೇಶ್ ಕಥೆ ರಚಿಸಿದ್ದು, ಒಂದು ವಿಭಿನ್ನ ವಿಷಯವನ್ನು ಕಮರ್ಷಿಯಲ್ ಚೌಕಟ್ಟಿನಲ್ಲಿ ಹೇಳುವುದಕ್ಕೆ ಮುಂದಾಗಿದ್ದಾರೆ.
ವೈಎಸ್ ಪ್ರೊಡಕ್ಷನ್ ನಡಿ ಶ್ರೀನಿವಾಸ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಜೆಸ್ಸಿ ಗಿಫ್ಟ್ ಸಂಗೀತ, ಸೆಲ್ವಂ ಛಾಯಾಗ್ರಹಣವಿದೆ. ಕೆ.ಎಂ. ಪ್ರಕಾಶ್ ಅವರ ಸಂಕಲನವಿದೆ. ಚಿತ್ರದ ಮುಹೂರ್ತವಾಗಿದ್ದರೂ, ಚಿತ್ರೀಕರಣ ಪ್ರಾರಂಭವಾಗುವುದು ಮುಂದಿನ ವಾರದಿಂದ. ಮೊದಲ ಹಂತದ ಚಿತ್ರೀಕರಣವನ್ನು ಚಿತ್ರತಂಡ ಬೆಂಗಳೂರಿನಲ್ಲಿ ನಡೆಸಲು ಯೋಜನೆ ಹಾಕಿಕೊಂಡಿದೆ. ಆ ಬಳಿಕ ಚಿತ್ರತಂಡ ಬಾದಾಮಿಯಲ್ಲಿ ಚಿತ್ರೀಕರಣ ಮುಂದುವರೆಸಲಿದೆ.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…