ಮನರಂಜನೆ

ಬೆಂಗಳೂರು ಬಿಟ್ಟು ದೂರ ತೀರದಲ್ಲಿ ಚಿತ್ರ ತೋರಿಸಿದ ಮಂಸೋರೆ

ಸಾಮಾನ್ಯವಾಗಿ ಒಂದು ಚಿತ್ರದ ಪ್ರೀಮಿಯರ್‌ ಪ್ರದರ್ಶನ ಬೆಂಗಳೂರಿನಲ್ಲಿ ನಡೆದು, ಆ ನಂತರ ಬೇರೆ ಊರುಗಳಲ್ಲಿ ಚಿತ್ರ ಬಿಡುಗಡೆಯಾಗುತ್ತದೆ. ಈ ವಾರ ಬಿಡುಗಡೆಯಾಗುತ್ತಿರುವ ತಮ್ಮ ‘ದೂರ ತೀರ ಯಾನ’ ಚಿತ್ರದ ಮೂಲಕ ಹೊಸ ಪ್ರಯೋಗವನ್ನು ಮಂಸೋರೆ ಮಾಡುತ್ತಿದ್ದಾರೆ. ಈಗಾಗಲೇ ಅವರು ತಮ್ಮ ಚಿತ್ರವನ್ನು ಬೆಂಗಳೂರಿಗೂ ಮೊದಲೇ ಧಾರವಾಡದ ಪದ್ಮ ಚಿತ್ರಮಂದಿರದಲ್ಲಿ ತೋರಿಸಿದ್ದಾರೆ.

ಇಷ್ಟಕ್ಕೂ ಬೆಂಗಳೂರು ಬಿಟ್ಟು, ಧಾರವಾಡದಲ್ಲಿ ಮಂಸೋರೆ ಚಿತ್ರ ತೋರಿಸಿದ್ದು ಯಾಕೆ? ಈ ಕುರಿತು ಮಾತನಾಡಿರುವ ಅವರು, ‘ಧಾರವಾಡದಲ್ಲಿ ಪ್ರೀಮಿಯರ್‍ ಶೋ ಮಾಡಿದ್ದೇವೆ. ಸಾಮಾನ್ಯವಾಗಿ, ನಾವು ಬೆಂಗಳೂರಿನಲ್ಲಿ ಸೆಲೆಬ್ರಿಟಿಗಳನ್ನು ಕರೆದು ಪ್ರೀಮಿಯರ್‍ ಶೋ ಮಾಡುತ್ತೇವೆ. ಇಲ್ಲಿ ಸಿಕ್ಕ ಪ್ರತಿಕ್ರಿಯೆನ್ನು ಕರ್ನಾಟಕದ ಜನರ ಜೊತೆಗೆ ಹಂಚಿಕೊಳ್ಳುತ್ತೇವೆ. ಮೊದಲು ಪ್ರೇಕ್ಷಕರು ಚಿತ್ರ ನೋಡಲಿ, ಆ ನಂತರ ಸೆಲೆಬ್ರಿಟಿಗಳು ಚಿತ್ರ ನೋಡಲಿ ಎಂಬುದು ನಮ್ಮ ಉದ್ದೇಶ. ಪ್ರೇಕ್ಷಕರೇ ನಮ್ಮ ಚಿತ್ರದ ಸೆಲೆಬ್ರಿಟಿ.‌ ಅವರು ನೋಡಿ ನಮ್ಮ ಚಿತ್ರ ಚೆನ್ನಾಗಿದೆ ಎಂದು ಇನ್ನೊಬ್ಬರಿಗೆ ಹೇಳಿದಾಗ ಖಂಡಿತವಾಗಿ ಹೆಚ್ಚಿನ ಜನರು ಚಿತ್ರಮಂದಿರಗಳಿಗೆ ಬರುತ್ತಾರೆ. ಸಿನಿಮಾ ಬದುಕಿರುವುದೇ ಪ್ರೇಕ್ಷಕರಿಂದ. ಪ್ರೇಕ್ಷಕರು ನೋಡಿದರೆ ಮಾತ್ರ ಚಿತ್ರ ಮಾಡಬಹುದು. ಚಿತ್ರ ತಯಾರಕರು ಮತ್ತು ಪ್ರೇಕ್ಷಕರು ಒಂದು ಗಾಡಿಗೆ ಎರಡು ಚಕ್ರಗಳಿದ್ದಂತೆ. ಅವೆರಡೂ ಜೊತೆಯಾಗಿ ಹೋದರೆ ಮಾತ್ರ, ಸಿನಿಮಾ ತಯಾರಾಗುತ್ತದೆ. ಒಂದು ಚಕ್ರ ಪಕ್ಕಕ್ಕೆ ಹೋದರೂ, ಇಡೀ ಬಾಡಿ ಅಲ್ಲೇ ಉಳಿಯುತ್ತದೆ’ ಎಂದರು.

ಕನ್ನಡದಲ್ಲಿ ನಡೆಯುತ್ತಿರುವ ಒಳ್ಳೆಯ ಪ್ರಯತ್ನಗಳ ಬಗ್ಗೆ ಬೇರೆ ಕಡೆ ಗಮನಸೆಳೆಯುವ ಪ್ರಯತ್ನ ಇದು ಎಂದ ಮಂಸೋರೆ, ‘ಇಂಟರ್ನೆಟ್‍ ಬರುವ ಮುನ್ನ ಸುದ್ದಿ ಎಲ್ಲರಿಗೂ ಸರಿಯಾಗಿ ತಲುಪುತ್ತಿತ್ತು. ಆದರೆ, ಇಂಟರ್ನೆಟ್‍ ಬಂದ ಮೇಲೆ, ಒಂದು ಪೋಸ್ಟರ್ ಒಂದು ಪ್ರದೇಶ ಬಿಟ್ಟು ಇನ್ನೊಂದು ಕಡೆ ಹೋಗಲ್ಲ. ನಮ್ಮ ಪ್ರಚಾರ ಸರಿಯಾಗಿ ತಲುಪುತ್ತಿಲ್ಲ. ಎಷ್ಟೋ ಬಾರಿ ಒಳ್ಳೆಯ ಸಿನಿಮಾಗಳು ಬಂದರೂ, ಅದು ಬೇರೆ ಕಡೆ ತಲುಪುವುದಿಲ್ಲ. ಹಾಗಾಗಿ, ನಾವು ನಮ್ಮ ಚಿತ್ರವನ್ನು ಬೇರೆ ಪ್ರದೇಶದಲ್ಲಿ ತೋರಿಸಿ, ಅಲ್ಲಿ ಜನ ಚಿತ್ರ ನೋಡಿ, ಕನ್ನಡ ಚಿತ್ರರಂಗದಲ್ಲಿ ನಡೆಯುತ್ತಿರುವ ಒಳ್ಳೆಯ ಪ್ರಯತ್ನಗಳ ಬಗ್ಗೆ ಅಲ್ಲೂ ವಿಷಯಗಳು ಮುಟ್ಟಲಿ ಎಂಬ ನಂಬಿಕೆ ಮೇಲೆ ಈ ಪ್ರದರ್ಶನ ಮಾಡಿದ್ದೇವೆ. ಈ ಚಿತ್ರವನ್ನು ಹೆಚ್ಚಾಗಿ ಮಲ್ಟಿಪ್ಲೆಕ್ಸ್‌ಗಳಲ್ಲೇ ನಾವು ಬಿಡುಗಡೆ ಮಾಡುತ್ತಿದ್ದೇವೆ’ ಎಂದರು.

ವಿಜಯ್ ಕೃಷ್ಣ ಹಾಗೂ ಪ್ರಿಯಾಂಕ ಕುಮಾರ್ ಮುಖ್ಯಪಾತ್ರದಲ್ಲಿ ನಟಿಸಿರುವ ‘ದೂರ ತೀರ ಯಾಬ’ ಚಿತ್ರವನ್ನು ಡಿ ಕ್ರಿಯೇಶನ್ಸ್ ಬ್ಯಾನರ್‍ ಅಡಿ ದೇವರಾಜ್‍ ನಿರ್ಮಿಸಿದ್ದಾರೆ. ಇದು ಅವರ ನಿರ್ಮಾಣದ ಐದನೇ ಚಿತ್ರ. ಪ್ರಯಾಣದಲ್ಲಿ ನಡೆಯುವ ಪ್ರೇಮಕಥೆ ಇರುವ ಈ ಚಿತ್ರಕ್ಕೆ ಮಂಸೋರೆ ಕಥೆ ಬರೆದಿದ್ದಾರೆ. ಚೇತನಾ ತೀರ್ಥಹಳ್ಳಿ ಸಂಭಾಷಣೆ ಬರೆದಿದ್ದಾರೆ.

‘ದೂರ ತೀರ ಯಾನ’ ಚಿತ್ರದಲ್ಲಿ ವಿಜಯ್‍ ಕೃಷ್ಣ, ಪ್ರಿಯಾಂಕಾ ಜೊತೆಗೆ ಶ್ರುತಿ ಹರಿಹರನ್‍, ಶರತ್ ಲೋಹಿತಾಶ್ವ, ಅರುಣ್‍ ಸಾಗರ್‍ ಮುಂತಾದವರು ನಟಿಸಿರುವ ಈ ಚಿತ್ರಕ್ಕೆ ಶೇಖರ್‍ ಚಂದ್ರ ಛಾಯಾಗ್ರಹಣ ಮತ್ತು ಬಕ್ಕೇಶ್‍ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ಬೃಹತ್ ಮಹಾನಗರ ಪಾಲಿಕೆ ಬಜೆಟ್; ಹತ್ತಾರು ನಿರೀಕ್ಷೆ

ಕೆ.ಬಿ.ರಮೇಶನಾಯಕ ಈ ಬಾರಿಯೂ ಆಡಳಿತಾಧಿಕಾರಿಯಿಂದಲೇ ಬಜೆಟ್ ಮಂಡನೆ ಯಾವುದೇ ಕ್ಷಣದಲ್ಲಿ ಸರ್ಕಾರದಿಂದ ಅಧಿಕೃತ ಅಧಿಸೂಚನೆ ಜಾರಿ ಮೈಸೂರು: ರಾಜ್ಯ ಸರ್ಕಾರ…

4 mins ago

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

12 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

13 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

13 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

13 hours ago