ಮನರಂಜನೆ

‘ಮಾರ್ಕ್’ ಚಿತ್ರೀಕರಣ ಮುಕ್ತಾಯ: ಡಿಸೆಂಬರ್.25ಕ್ಕೆ ಚಿತ್ರಮಂದಿರಗಳಿಗೆ ಎಂಟ್ರಿ

ಸುದೀಪ್‍ ಅಭಿನಯದ ‘ಮಾರ್ಕ್’ ಚಿತ್ರವು ಕ್ರಿಸ್‌ಮಸ್‌ಗೆ ಬಿಡುಗಡೆಯಾಗಲಿದೆ ಎಂದು ಸುದೀಪ್‍, ಚಿತ್ರದ ಪ್ರಾರಂಭಕ್ಕೂ ಮೊದಲೇ ಹೇಳಿಕೊಂಡಿದ್ದರು. ಇದೀಗ ಚಿತ್ರದ ಬಿಡುಗಡೆಗೆ ಕೇವಲ ಒಂದೂವರೆ ತಿಂಗಳುಗಳು ಮಾತ್ರ ಇವೆ. ಇನ್ನೂ ಚಿತ್ರದ ಚಿತ್ರೀಕರಣ ಮುಗಿದ ಸುದ್ದಿ ಬಂದಿಲ್ಲವಲ್ಲ ಎಂದು ಸುದೀಪ್‍ ಅಭಿಮಾನಿಗಳು ಕೊರಗುತ್ತಿದ್ದರು.

ಅದಕ್ಕೆ ಸರಿಯಾಗಿ, ಇದೀಗ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಮುಗಿದಿದೆ. ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ಚಿತ್ರದ ಕೊನೆಯ ಹಂತದ ಚಿತ್ರೀಕರಣ ಮುಗಿಸಿ‌ ಚಿತ್ರತಂಡ ಕುಂಬಳಕಾಯಿ ಒಡೆದಿದೆ. ಶೂಟಿಂಗ್ ಮುಗಿಸಿರುವ ಚಿತ್ರತಂಡ ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ. ‘ಮ್ಯಾಕ್ಸ್’ ಸಿನಿಮಾದಲ್ಲಿ ಸುದೀಪ್ ಮತ್ತು ವಿಜಯ್ ಕಾರ್ತಿಕೇಯ ಅವರ ಕಾಂಬಿನೇಷನ್ ಮೋಡಿ ಮಾಡಿತ್ತು.

ಇದನ್ನು ಓದಿ: ಸೈಕ್ ಸೈತಾನ್’ ಆದ ಸುದೀಪ್‍; ‘ಮಾರ್ಕ್’ ಚಿತ್ರದ ಮೊದಲ ಹಾಡು ಬಿಡುಗಡೆ ಸುದೀಪ್‍

ಈಗ ಮತ್ತೆ ಅವರಿಬ್ಬರು ‘ಮಾರ್ಕ್’ ಸಿನಿಮಾದ ಮೂಲಕ ರಂಜಿಸಲು ಬರುತ್ತಿದ್ದಾರೆ. ‘ಮ್ಯಾಕ್ಸ್’ ರೀತಿಯೇ ಈ ಬಾರಿ ಕೂಡ ಪೊಲೀಸ್ ಆಫೀಸರ್ ಪಾತ್ರದಲ್ಲಿ ಸುದೀಪ್ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಅಜಯ್ ಮಾರ್ಕಂಡೇಯ ಎಂಬ ಪಾತ್ರವನ್ನು ಸುದೀಪ್ ಮಾಡಿದ್ದಾರೆ. ‘ಮಾರ್ಕ್’ ಚಿತ್ರಕ್ಕೆ ಶೇಖರ್ ಚಂದ್ರ ಛಾಯಾಗ್ರಹಣ ಮತ್ತು ಅಜನೀಶ್ ಬಿ. ಲೋಕನಾಥ್ ಅವರು ಸಂಗೀತ ಸಂಯೋಜಿಸಿದ್ದಾರೆ. ಈ ಚಿತ್ರವನ್ನು ಸತ್ಯಜ್ಯೋತಿ ಫಿಲ್ಮ್ಸ್ ಹಾಗೂ ಕಿಚ್ಚ ಕ್ರಿಯೇಷನ್ಸ್ ಸಂಸ್ಥೆಗಳು ಜೊತೆಯಾಗಿ ನಿರ್ಮಿಸಿದ್ದು, ಚಿತ್ರದಲ್ಲಿ ಸುದೀಪ್‍, ಡ್ರ್ಯಾಗನ್‍ ಮಂಜು, ಗೋಪಾಲಕೃಷ್ಣ ದೇಶಪಾಂಡೆ, ನಿಶ್ವಿಕಾ ನಾಯ್ಡು ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ‘ಮಾರ್ಕ್’ ಚಿತ್ರದ ಹಾಡು ಮತ್ತು ಟೀಸರ್‍ ಬಿಡುಗಡೆಯಾಗಿದ್ದು, ಮುಂದಿನ ತಿಂಗಳು ಟ್ರೇಲರ್‍ ಬಿಡುಗಡೆಯಾಗಲಿದೆ.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

11 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

11 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

11 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

12 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

12 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

12 hours ago