ಮುಂಬೈ : ತೆಲುಗು ನಟ ವಿಜಯ್ ದೇವರಕೊಂಡ ಹಾಗೂ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಡೇಟಿಂಗ್ನಲ್ಲಿದ್ದಾರೆ ಎಂಬ ವದಂತಿ ಹಲವು ದಿನಗಳಿಂದ ಇತ್ತು. ಅಲ್ಲದೇ ಇಬ್ಬರೂ ಎಂಗೇಜ್ ಆಗಿದ್ದಾರೆ. 2026ರ ಫೆಭ್ರವರಿಯಲ್ಲೇ ಈ ಜೋಡಿ ಹಸೆಮಣೆ ಏರುತ್ತಿದ್ದಾರೆ. ಉದಯಪುರದ ಅರಮನೆಯಲ್ಲಿ ಮದುವೆ ನಡೆಯಲಿದೆ ಎಂಬೆಲ್ಲ ವಿಷಯಗಳು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಲೇ ಇದೆ. ಆದರೆ ಇದು ಯಾವುದಕ್ಕೂ ಈ ಜೋಡಿ ಎಲ್ಲಿಯೂ ಉತ್ತರಿಸಿಲ್ಲ.
ಇದೀಗ ಎಲ್ಲ ವದಂತಿಗಳಿಗೆ ನಟಿ ರಶ್ಮಿಕಾ ಫುಲ್ಸ್ಟಾಪ್ ಇಟ್ಟಿದ್ದಾರೆ. ಈ ಬಗ್ಗೆ ಮಾತನಾಡಿರುವ ರಶ್ಮಿಕಾ ಅವರು ವಿಜಯ್ ದೇವರಕೊಂಡ ಅವರನ್ನ ಮದುವೆ ಆಗುವುದಾಗಿ ಸ್ಪಷ್ಟನೆ ಕೊಟ್ಟಿದ್ದಾರೆ. ಫ್ಯಾನ್ಸ್ವೊಬ್ಬರು ಕೇಳಿದ ಪ್ರಶ್ನೆಗೆ ಮುಗುಳುನಕ್ಕ ನಟಿ ನೇರವಾಗಿ ಉತ್ತರಿಸಿದ್ದಾರೆ. ಆ ರೂಮರ್ಸ್ ಎಲ್ಲರಿಗೂ ಗೊತ್ತಿದೆ, ಅದು ಸತ್ಯ ಎಂದಿದ್ದಾರೆ. ಇದೇ ವೇಳೆ ಮದುವೆ ಆಗೋದಾದ್ರೆ ಯಾರನ್ನ ಆಗ್ತೀರಾ ಎಂಬ ಫ್ಯಾನ್ ಪ್ರಶ್ನೆಗೆ ಹಿಂದೆ ಮುಂದೆ ಯೋಚನೆ ಮಾಡದೇ ವಿಜಯ್ನ ಮದುವೆ ಆಗ್ತೀನಿ ಎಂದಿದ್ದಾರೆ.
ಇದನ್ನು ಓದಿ: ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ; ಮದುವೆ ಯಾವಾಗ?
ಎಲ್ಲಿ ಮದುವೆ?
ಸಹಜವಾಗಿ ದಕ್ಷಿಣ ಭಾರತದಲ್ಲಿ ಮದುವೆಯನ್ನು ಹುಡುಗಿಯ ಮನೆಯವರೇ ನಡೆಸಿಕೊಡುವುದರಿಂದ ರಶ್ಮಿಕಾ ಅವರ ತವರೂರಾದ ಕೊಡಗಿನಲ್ಲೇ ಮದುವೆ ನಡೆಯುಬಹುದು ಎಂದು ಕೆಲವರು ಊಹಿಸಿದ್ದರು. ಇನ್ನೂ ಕೆಲವರು ರಶ್ಮಿಕಾ ಅವರು ತೆಲುಗು ಚಿತ್ರರಂಗದಲ್ಲೇ ಈಗ ಹೆಚ್ಚು ಸಕ್ರಿಯವಾಗಿರುವುದರಿಂದ ಮದುವೆ ಹೈದರಾಬಾದ್ ನಲ್ಲೇ ನಡೆಯಬಹುದು ಎಂದು ಊಹಿಸಿದ್ದರು. ಆದ್ರೆ ಇವರಿಬ್ಬರ ಮದುವೆ ರಾಜಸ್ಥಾನದ ಉದಯಪುರದಲ್ಲಿ ನಡೆಯಲಿದೆ. ರಾಜಸ್ಥಾನದ ಉದಯಪುರದ ಅರಮನೆಯೊಂದರಲ್ಲಿ ಈ ಜೋಡಿಯ ಮದುವೆ ನಡೆಯಲಿದೆ ಎಂದು ಹೇಳಲಾಗಿದೆ. ಇದಕ್ಕಾಗಿ ಅಲ್ಲಿನ ಐಷಾರಾಮಿ ಪ್ಯಾಲೇಸ್-ಹೋಟೆಲೊಂದರ ಹುಡುಕಾಟದಲ್ಲಿ ರಶ್ಮಿಕಾ ಮದುವೆ ಜವಾಬ್ದಾರಿ ಹೊತ್ತಿರುವ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿಯೊಂದು ಹುಡುಕಾಟ ನಡೆಸಿದೆ. ಮೂರು ಪ್ಯಾಲೇಸ್ ಹೋಟೆಲ್ಗಳನ್ನ ಫೈನಲೈಸ್ ಮಾಡಲಾಗಿದ್ದು ಅವುಗಳಲ್ಲೊಂದನ್ನು ಅಂತಿಮವಾಗಿ ಆಯ್ಕೆ ಮಾಡಲಾಗುತ್ತದೆ ಎನ್ನಲಾಗಿದೆ.
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…