ಕನ್ನಡ ಚಿತ್ರರಂಗಕ್ಕೆ ಬೇರೆಬೇರೆ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಹಲವರು ಇತ್ತೀಚಿನ ದಿನಗಳಲ್ಲಿ ಬರುತ್ತಿದ್ದಾರೆ. ಈಗ ಆ ಸಾಲಿಗೆ ಸತೀಶ್ ಕುಮಾರ್ ಸಹ ಸೇರಿದ್ದಾರೆ. ಮೂಲತಃ ಮಾರ್ಷಲ್ ಆರ್ಟ್ಸ್ ಪಟುವಾಗಿರುವ ಸತೀಶ್, ಇದುವರೆಗೂ ಸಾಕಷ್ಟು ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಭಾಗವಹಿಸಿ ಪದಕ ಪಡೆದಿದ್ದಾರೆ. ಬೆಂಗಳೂರಿನ ಕೆಲವು ಕಡೆ ಮಾರ್ಷಲ್ ಆರ್ಟ್ಸ್ ತರಭೇತಿ ಶಾಲೆಗಳನ್ನು ನಡೆಸುತ್ತಿದ್ದಾರೆ. ಇದೀಗ ಅವರು ‘ಮದ್ದಾನೆ’ ಎಂಬ ಚಿತ್ರವನ್ನು ನಿರ್ಮಿಸಿ-ನಿರ್ದೇಶಿಸಿದ್ದಾರೆ.
‘ಮದ್ದಾನೆ’ ಚಿತ್ರದಲ್ಲಿ ನಿಹಾಲ್ ರಾಜ್ ನಾಯಕನಾಗಿ ನಟಿಸುತ್ತಿದ್ದಾರೆ. ಪ್ಯಾಂಥರ್ಸ್ ಕ್ರಿಯೇಟಿವ್ ಸಿನಿಮಾಸ್ ಲಾಂಛನದಲ್ಲಿ ಸತೀಶ್ ಅವರ ಪತ್ನಿ ರಂಜನ ಎಂ ಕುಮಾವತ್ ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಇತ್ತೀಚೆಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ನಿರ್ಮಾಪಕರಾದ ಕೆ.ಮಂಜು , ರಮೇಶ್ ಯಾದವ್ ಹಾಗೂ ‘ಕಡ್ಡಿಪುಡಿ’ ಚಂದ್ರು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.
‘ಮದ್ದಾನೆ’ ಕುರಿತು ಮಾತನಾಡುವ ನಿರ್ದೇಶಕ ಸತೀಶ್ ಕುಮಾರ್, ‘ಇದೊಂದು ಹಳ್ಳಿ ಹಾಗೂ ಕಾಡಿನ ನಡುವೆ ನಡೆಯುವ ಕಥೆ. ಹೆಚ್ಚಿನ ಭಾಗದ ಚಿತ್ರೀಕರಣ ಚಿಕ್ಕಮಗಳೂರಿನಲ್ಲೇ ನಡೆಯುತ್ತದೆ. ನಿಹಾಲ್ ರಾಜ್ ನಾಯಕನಾಗಿ ನಟಿಸುತ್ತಿದ್ದಾರೆ. ನಾನು ಚಿಕ್ಕಮಗಳೂರಿಗೆ ಟೂರ್ನಿಗೆಂದು ಹೋದಾಗ, ಅಲ್ಲಿ ನೋಡಿದ ಮತ್ತು ಕೇಳಿದ ಕೆಲವು ಘಟನೆಗಳನ್ನು ಬೆಳೆಸಿ ಕಥೆ ಮಾಡಿದ್ದೇನೆ. ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದೆ’ ಎಂದರು.
ಇನ್ನು, ನಿರ್ದೇಶನದ ಬಗ್ಗೆ ಅವರಿಗೆ ಯಾವುದೇ ಅನುಭವ ಇಲ್ಲದಿದ್ದರೂ, ಒಂದಿಷ್ಟು ಕಲಿತು ಬಂದಿದ್ದಾರಂತೆ. ‘ನಾನೊಬ್ಬ ಪ್ರೇಕ್ಷಕ. ಸಾಕಷ್ಟು ಚಿತ್ರಗಳನ್ನು ನೊಡಿದ್ದೇನೆ. ಚಿತ್ರ ಮಾಡಬೇಕು ಎಂಬ ಆಸೆ ಬಹಳ ವರ್ಷಗಳಿಂದ ಇತ್ತು. ಇನ್ನು, ನಿರ್ದೇಶನದ ಬಗ್ಗೆ ಕೆಲವು ವಿಷಯಗಳನ್ನು ಕಲಿತು ನಿರ್ದೇಶನ ಮಾಡುತ್ತಿದ್ದೇನೆ. ಒಳ್ಳೆಯ ಚಿತ್ರತಂಡ ಜೊತೆಗಿದೆ. ಒಂದೊಳ್ಳೆಯ ಚಿತ್ರ ಮಾಡುವ ನಂಬಿಕೆ ಇದೆ’ ಎಂದರು.
ನಿಹಾಲ್ ರಾಜ್ ಮೂಲತಃ ರಂಗಭೂಮಿವರಂತೆ. ‘ಇದಕ್ಕೂ ಮೊದಲು ‘ರಾಣಾ’ ಹಾಗೂ ‘ವಿಷ್ಣುಪ್ರಿಯ’ ಚಿತ್ರಗಳಲ್ಲಿ ನಟಿಸಿದ್ದೇನೆ. ಕೆ. ಮಂಜು ಅವರ ಸಹಕಾರ ಮೊದಲಿನಿಂದಲೂ ಇದೆ. ಇಂದು ನಾನು ನಾಯಕನಾಗಿ ನಟಿಸುತ್ತಿರುವ ಮೊದಲ ಚಿತ್ರಕ್ಕೂ ಬಂದು ಅವರು ಹಾರೈಸಿದ್ದು ಸಂತೋಷವಾಗಿದೆ’ ಎಂದರು.
‘ಮದ್ದಾನೆ’ ಚಿತ್ರಕ್ಕೆ ವಿನೋದ್ ಭಾರತಿ ಛಾಯಾಗ್ರಹಣ, ಸ್ವಾಮಿನಾಥನ್ ಸಂಗೀತ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನವಿದೆ. ಈ ಚಿತ್ರದಲ್ಲಿ ಅರವಿಂದ್ ರಾವ್ ಒಂದು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಮಿಕ್ಕಂತೆ ಕಲಾವಿದರ ಆಯ್ಕೆ ನಡೆಯುತ್ತಿದೆ.
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…
ವಾಷಿಂಗ್ಟನ್ : ಇರಾನ್ ವಿರುದ್ಧದ ಯುದ್ಧದ ನಡುವೆಯೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊಸದಾಗಿ ಸುಂಕ ಸಮರ ಆರಂಭಿಸಿದ್ದಾರೆ.…