ಮನರಂಜನೆ

‘ಮಾರ್ಟಿನ್’ ಜೊತೆಗೆ ಆಂಧ್ರದಲ್ಲಿ ಮೈತ್ರಿ ಮಾಡಿಕೊಂಡ ಮೈತ್ರಿ ಮೂವಿ ಮೇಕರ್ಸ್

 

ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್‍’ ಚಿತ್ರವು ಅಕ್ಟೋಬರ್‍ 11ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಚಿತ್ರದ ಬಿಡುಗಡೆಗೆ ಇನ್ನು ಎರಡು ವಾರಗಳಿದ್ದರೂ, ಅಷ್ಟೇನೂ ಸದ್ದಿರಲಿಲ್ಲ. ಒಂದು ದಿನ ಮುಂಚೆ ರಜನಿಕಾಂತ್‍ ಅಭಿನಯದ ‘ವೆಟ್ಟಾಯನ್‍’ ಚಿತ್ರ ಬಿಡುಗಡೆ ಆಗುತ್ತಿರುವುದರಿಂದ, ‘ಮಾರ್ಟಿನ್‍’ ಅಂದುಕೊಂಡಂತೆಯೇ ಬಿಡುಗಡೆಯಾಗುತ್ತದಾ? ಅಥವಾ ಮುಂದೂಡಲ್ಪಡುತ್ತದಾ? ಎಂಬ ಪ್ರಶ್ನೆ ಧ್ರುವ ಅಭಿಮಾನಿಗಳ ವಲಯದಲ್ಲಿ ಇತ್ತು.

 

ಆದರೆ, ಅಂದುಕೊಂಡಂತೆಯೇ ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಮುಂದಾಗಿದ್ದು, ‘ಮಾರ್ಟಿನ್‍’ ಚಿತ್ರದ ವ್ಯಾಪಾರ ಶುರುವಾಗಿದ್ದು, ಚಿತ್ರವನ್ನು ನಿಜಾಮ್ ಪ್ರದೇಶದಲ್ಲಿ ಬಿಡುಗಡೆ ಮಾಡುವುದಕ್ಕೆ ತೆಲುಗಿನ ಜನಪ್ರಿಯ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಮೈತ್ರಿ ಮೂವಿ ಮೇಕರ್ಸ್ ಮುಂದಾಗಿದೆ. ಈ ಚಿತ್ರವನ್ನು ನಿಜಾಮ್‍ ಪ್ರದೇಶದಲ್ಲಿ 400ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಕ್ಕೆ ಮುಂದಾಗಿದೆ. ಇನ್ನು, ಕರ್ನಾಟಕ, ತಮಿಳು ನಾಡು, ಕೇರಳ ಮತ್ತು ಉತ್ತರ ಭಾರತದಲ್ಲಿ ಚಿತ್ರ ಬಿಡುಗಡೆ ಮಾಡುವುದಕ್ಕೆ ಮಾತುಕತೆ ನಡೆಯುತ್ತಿದ್ದು ಸದ್ಯದಲ್ಲೇ ಯಾರೆಲ್ಲಾ ಯಾವ ಪ್ರದೇಶಗಳಲ್ಲಿ ಬಿಡುಗಡೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಹೊರಬೀಳಬೇಕಿದೆ.

ಇದೊಂದು ಅಂತಾರಾಷ್ಟ್ರೀಯ ಮಟ್ಟದ ಚಿತ್ರ ಎನ್ನುವ ಧ್ರುವ, ‘ಈ ಕಥೆಯಲ್ಲಿ ಎಲ್ಲವೂ ಇತ್ತು. ಒಂದು ವಿಭಿನ್ನ ಚಿತ್ರಕಥೆಗಾಗಿ ಹುಡುಕಾಡುತ್ತಿದ್ದೆ. ಚಿತ್ರ ನೋಡುತ್ತಿದ್ದಂತೆ ಪ್ರೇಕ್ಷಕರು ಸೀಟಿನಂಚಿಗೆ ಬಂದು ಕೂರುವ ನಂಬಿಕೆ ಇದೆ. ಇದು ಬರೀ ನಮ್ಮ ಭಾಷೆ ಅಥವಾ ದೇಶಕ್ಕೆ ಸೀಮಿತವಾಗಬಾರದು. ಪ್ಯಾನ್‍ ಇಂಡಿಯಾಗಿಂತ ಇನ್ನೊಂದು ಹೆಜ್ಜೆ ಮುಂದೆ ಏನು ಅಂತ ಯೋಚಿಸಿದಾಗ, ಯಾಕೆ ನಾವೊಂದು ಅಂತಾರಾಷ್ಟ್ರೀಯ ಸಿನಿಮಾ ಮಾಡಬಾರದು ಎಂದನಿಸಿತು. ಆ ನಿಟ್ಟಿನಲ್ಲಿ ಒಂದು ಅಂತಾರಾಷ್ಟ್ರೀಯ ಸಿನಿಮಾ ಮಾಡಿದ್ದೇವೆ’ ಎಂದರು.

‘ಮಾರ್ಟಿನ್‍’ ಚಿತ್ರವನ್ನು ವಾಸವಿ ಕಂಬೈನ್ಸ್ನಡಿ ಉದಯ್‍ ಮೆಹ್ತಾ ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ಧ್ರುವ ಸರ್ಜಾ, ವೈಭವಿ ಶಾಂಡಿಲ್ಯ, ಮಾಳವಿಕಾ ಅವಿನಾಶ್‍, ಅಚ್ಯುತ್‍ ಕುಮಾರ್‍ ಮುಂತಾದವರು ನಟಿಸಿದ್ದು, ಎ.ಪಿ. ಅರ್ಜುನ್‍ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ರವಿ ಬಸ್ರೂರು ಹಿನ್ನೆಲೆ ಸಂಗೀತ ಈ ಚಿತ್ರಕ್ಕಿದೆ. ಚಿತ್ರಕ್ಕೆ ಅರ್ಜುನ್ ಸರ್ಜಾ ಕಥೆ ಬರೆದಿದ್ದಾರೆ.

ಭೂಮಿಕಾ

Recent Posts

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

7 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

8 hours ago

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…

8 hours ago

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…

8 hours ago

‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…

8 hours ago

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…

9 hours ago