ಮನರಂಜನೆ

‘ಮಾರ್ಟಿನ್’ ಜೊತೆಗೆ ಆಂಧ್ರದಲ್ಲಿ ಮೈತ್ರಿ ಮಾಡಿಕೊಂಡ ಮೈತ್ರಿ ಮೂವಿ ಮೇಕರ್ಸ್

 

ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್‍’ ಚಿತ್ರವು ಅಕ್ಟೋಬರ್‍ 11ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಚಿತ್ರದ ಬಿಡುಗಡೆಗೆ ಇನ್ನು ಎರಡು ವಾರಗಳಿದ್ದರೂ, ಅಷ್ಟೇನೂ ಸದ್ದಿರಲಿಲ್ಲ. ಒಂದು ದಿನ ಮುಂಚೆ ರಜನಿಕಾಂತ್‍ ಅಭಿನಯದ ‘ವೆಟ್ಟಾಯನ್‍’ ಚಿತ್ರ ಬಿಡುಗಡೆ ಆಗುತ್ತಿರುವುದರಿಂದ, ‘ಮಾರ್ಟಿನ್‍’ ಅಂದುಕೊಂಡಂತೆಯೇ ಬಿಡುಗಡೆಯಾಗುತ್ತದಾ? ಅಥವಾ ಮುಂದೂಡಲ್ಪಡುತ್ತದಾ? ಎಂಬ ಪ್ರಶ್ನೆ ಧ್ರುವ ಅಭಿಮಾನಿಗಳ ವಲಯದಲ್ಲಿ ಇತ್ತು.

 

ಆದರೆ, ಅಂದುಕೊಂಡಂತೆಯೇ ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಮುಂದಾಗಿದ್ದು, ‘ಮಾರ್ಟಿನ್‍’ ಚಿತ್ರದ ವ್ಯಾಪಾರ ಶುರುವಾಗಿದ್ದು, ಚಿತ್ರವನ್ನು ನಿಜಾಮ್ ಪ್ರದೇಶದಲ್ಲಿ ಬಿಡುಗಡೆ ಮಾಡುವುದಕ್ಕೆ ತೆಲುಗಿನ ಜನಪ್ರಿಯ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಮೈತ್ರಿ ಮೂವಿ ಮೇಕರ್ಸ್ ಮುಂದಾಗಿದೆ. ಈ ಚಿತ್ರವನ್ನು ನಿಜಾಮ್‍ ಪ್ರದೇಶದಲ್ಲಿ 400ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಕ್ಕೆ ಮುಂದಾಗಿದೆ. ಇನ್ನು, ಕರ್ನಾಟಕ, ತಮಿಳು ನಾಡು, ಕೇರಳ ಮತ್ತು ಉತ್ತರ ಭಾರತದಲ್ಲಿ ಚಿತ್ರ ಬಿಡುಗಡೆ ಮಾಡುವುದಕ್ಕೆ ಮಾತುಕತೆ ನಡೆಯುತ್ತಿದ್ದು ಸದ್ಯದಲ್ಲೇ ಯಾರೆಲ್ಲಾ ಯಾವ ಪ್ರದೇಶಗಳಲ್ಲಿ ಬಿಡುಗಡೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಹೊರಬೀಳಬೇಕಿದೆ.

ಇದೊಂದು ಅಂತಾರಾಷ್ಟ್ರೀಯ ಮಟ್ಟದ ಚಿತ್ರ ಎನ್ನುವ ಧ್ರುವ, ‘ಈ ಕಥೆಯಲ್ಲಿ ಎಲ್ಲವೂ ಇತ್ತು. ಒಂದು ವಿಭಿನ್ನ ಚಿತ್ರಕಥೆಗಾಗಿ ಹುಡುಕಾಡುತ್ತಿದ್ದೆ. ಚಿತ್ರ ನೋಡುತ್ತಿದ್ದಂತೆ ಪ್ರೇಕ್ಷಕರು ಸೀಟಿನಂಚಿಗೆ ಬಂದು ಕೂರುವ ನಂಬಿಕೆ ಇದೆ. ಇದು ಬರೀ ನಮ್ಮ ಭಾಷೆ ಅಥವಾ ದೇಶಕ್ಕೆ ಸೀಮಿತವಾಗಬಾರದು. ಪ್ಯಾನ್‍ ಇಂಡಿಯಾಗಿಂತ ಇನ್ನೊಂದು ಹೆಜ್ಜೆ ಮುಂದೆ ಏನು ಅಂತ ಯೋಚಿಸಿದಾಗ, ಯಾಕೆ ನಾವೊಂದು ಅಂತಾರಾಷ್ಟ್ರೀಯ ಸಿನಿಮಾ ಮಾಡಬಾರದು ಎಂದನಿಸಿತು. ಆ ನಿಟ್ಟಿನಲ್ಲಿ ಒಂದು ಅಂತಾರಾಷ್ಟ್ರೀಯ ಸಿನಿಮಾ ಮಾಡಿದ್ದೇವೆ’ ಎಂದರು.

‘ಮಾರ್ಟಿನ್‍’ ಚಿತ್ರವನ್ನು ವಾಸವಿ ಕಂಬೈನ್ಸ್ನಡಿ ಉದಯ್‍ ಮೆಹ್ತಾ ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ಧ್ರುವ ಸರ್ಜಾ, ವೈಭವಿ ಶಾಂಡಿಲ್ಯ, ಮಾಳವಿಕಾ ಅವಿನಾಶ್‍, ಅಚ್ಯುತ್‍ ಕುಮಾರ್‍ ಮುಂತಾದವರು ನಟಿಸಿದ್ದು, ಎ.ಪಿ. ಅರ್ಜುನ್‍ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ರವಿ ಬಸ್ರೂರು ಹಿನ್ನೆಲೆ ಸಂಗೀತ ಈ ಚಿತ್ರಕ್ಕಿದೆ. ಚಿತ್ರಕ್ಕೆ ಅರ್ಜುನ್ ಸರ್ಜಾ ಕಥೆ ಬರೆದಿದ್ದಾರೆ.

ಭೂಮಿಕಾ

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

21 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago