ಮನರಂಜನೆ

‘ಮಾರ್ಟಿನ್’ ಜೊತೆಗೆ ಆಂಧ್ರದಲ್ಲಿ ಮೈತ್ರಿ ಮಾಡಿಕೊಂಡ ಮೈತ್ರಿ ಮೂವಿ ಮೇಕರ್ಸ್

 

ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್‍’ ಚಿತ್ರವು ಅಕ್ಟೋಬರ್‍ 11ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಚಿತ್ರದ ಬಿಡುಗಡೆಗೆ ಇನ್ನು ಎರಡು ವಾರಗಳಿದ್ದರೂ, ಅಷ್ಟೇನೂ ಸದ್ದಿರಲಿಲ್ಲ. ಒಂದು ದಿನ ಮುಂಚೆ ರಜನಿಕಾಂತ್‍ ಅಭಿನಯದ ‘ವೆಟ್ಟಾಯನ್‍’ ಚಿತ್ರ ಬಿಡುಗಡೆ ಆಗುತ್ತಿರುವುದರಿಂದ, ‘ಮಾರ್ಟಿನ್‍’ ಅಂದುಕೊಂಡಂತೆಯೇ ಬಿಡುಗಡೆಯಾಗುತ್ತದಾ? ಅಥವಾ ಮುಂದೂಡಲ್ಪಡುತ್ತದಾ? ಎಂಬ ಪ್ರಶ್ನೆ ಧ್ರುವ ಅಭಿಮಾನಿಗಳ ವಲಯದಲ್ಲಿ ಇತ್ತು.

 

ಆದರೆ, ಅಂದುಕೊಂಡಂತೆಯೇ ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಮುಂದಾಗಿದ್ದು, ‘ಮಾರ್ಟಿನ್‍’ ಚಿತ್ರದ ವ್ಯಾಪಾರ ಶುರುವಾಗಿದ್ದು, ಚಿತ್ರವನ್ನು ನಿಜಾಮ್ ಪ್ರದೇಶದಲ್ಲಿ ಬಿಡುಗಡೆ ಮಾಡುವುದಕ್ಕೆ ತೆಲುಗಿನ ಜನಪ್ರಿಯ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಮೈತ್ರಿ ಮೂವಿ ಮೇಕರ್ಸ್ ಮುಂದಾಗಿದೆ. ಈ ಚಿತ್ರವನ್ನು ನಿಜಾಮ್‍ ಪ್ರದೇಶದಲ್ಲಿ 400ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಕ್ಕೆ ಮುಂದಾಗಿದೆ. ಇನ್ನು, ಕರ್ನಾಟಕ, ತಮಿಳು ನಾಡು, ಕೇರಳ ಮತ್ತು ಉತ್ತರ ಭಾರತದಲ್ಲಿ ಚಿತ್ರ ಬಿಡುಗಡೆ ಮಾಡುವುದಕ್ಕೆ ಮಾತುಕತೆ ನಡೆಯುತ್ತಿದ್ದು ಸದ್ಯದಲ್ಲೇ ಯಾರೆಲ್ಲಾ ಯಾವ ಪ್ರದೇಶಗಳಲ್ಲಿ ಬಿಡುಗಡೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಹೊರಬೀಳಬೇಕಿದೆ.

ಇದೊಂದು ಅಂತಾರಾಷ್ಟ್ರೀಯ ಮಟ್ಟದ ಚಿತ್ರ ಎನ್ನುವ ಧ್ರುವ, ‘ಈ ಕಥೆಯಲ್ಲಿ ಎಲ್ಲವೂ ಇತ್ತು. ಒಂದು ವಿಭಿನ್ನ ಚಿತ್ರಕಥೆಗಾಗಿ ಹುಡುಕಾಡುತ್ತಿದ್ದೆ. ಚಿತ್ರ ನೋಡುತ್ತಿದ್ದಂತೆ ಪ್ರೇಕ್ಷಕರು ಸೀಟಿನಂಚಿಗೆ ಬಂದು ಕೂರುವ ನಂಬಿಕೆ ಇದೆ. ಇದು ಬರೀ ನಮ್ಮ ಭಾಷೆ ಅಥವಾ ದೇಶಕ್ಕೆ ಸೀಮಿತವಾಗಬಾರದು. ಪ್ಯಾನ್‍ ಇಂಡಿಯಾಗಿಂತ ಇನ್ನೊಂದು ಹೆಜ್ಜೆ ಮುಂದೆ ಏನು ಅಂತ ಯೋಚಿಸಿದಾಗ, ಯಾಕೆ ನಾವೊಂದು ಅಂತಾರಾಷ್ಟ್ರೀಯ ಸಿನಿಮಾ ಮಾಡಬಾರದು ಎಂದನಿಸಿತು. ಆ ನಿಟ್ಟಿನಲ್ಲಿ ಒಂದು ಅಂತಾರಾಷ್ಟ್ರೀಯ ಸಿನಿಮಾ ಮಾಡಿದ್ದೇವೆ’ ಎಂದರು.

‘ಮಾರ್ಟಿನ್‍’ ಚಿತ್ರವನ್ನು ವಾಸವಿ ಕಂಬೈನ್ಸ್ನಡಿ ಉದಯ್‍ ಮೆಹ್ತಾ ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ಧ್ರುವ ಸರ್ಜಾ, ವೈಭವಿ ಶಾಂಡಿಲ್ಯ, ಮಾಳವಿಕಾ ಅವಿನಾಶ್‍, ಅಚ್ಯುತ್‍ ಕುಮಾರ್‍ ಮುಂತಾದವರು ನಟಿಸಿದ್ದು, ಎ.ಪಿ. ಅರ್ಜುನ್‍ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ರವಿ ಬಸ್ರೂರು ಹಿನ್ನೆಲೆ ಸಂಗೀತ ಈ ಚಿತ್ರಕ್ಕಿದೆ. ಚಿತ್ರಕ್ಕೆ ಅರ್ಜುನ್ ಸರ್ಜಾ ಕಥೆ ಬರೆದಿದ್ದಾರೆ.

ಭೂಮಿಕಾ

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago