ಮನರಂಜನೆ

13 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ‘ಮಾರ್ಟಿನ್’ ಟ್ರೇಲರ್

‘ಮಾರ್ಟಿನ್‍’ ಚಿತ್ರತಂಡದವರ ಮಧ್ಯೆ, ಎಲ್ಲವೂ ಸರಿ ಇಲ್ಲ ಎಂಬುದನ್ನು ಬಾಯಿಬಿಟ್ಟು ಹೇಳಬೇಕಾಗಿಲ್ಲ. ಕಳೆದ ಕೆಲವು ತಿಂಗಳುಗಳಿಂದ ಚಿತ್ರತಂಡದವರ ನಡುವೆ ನಡೆಯುತ್ತಿರುವ ವಿದ್ಯಮಾನಗಳು ಇದಕ್ಕೆ ಉದಾಹರಣೆ. ಮೊದಲು ನಿರ್ಮಾಪಕರು ಮತ್ತು ನಿರ್ದೇಶಕರ ನಡುವಿನ ಕಿತ್ತಾಟ ವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ರಾಜಿ-ಪಂಚಾಯ್ತಿಗಳಾದವು. ಆ ನಂತರ ನಿರ್ದೇಶಕ ಎ.ಪಿ. ಅರ್ಜುನ್‍ ಮೇಲೆ ಲಂಚದ ಆರೋಪ ಕೇಳಿ ಬರುತ್ತಿವೆ. ಹೀಗಿರುವಾಗಲೇ ಚಿತ್ರದ ದೊಡ್ಡ ಕಾರ್ಯಕ್ರಮವನ್ನು ಆಯೋಜಿಸುವುದಕ್ಕೆ ಚಿತ್ರತಂಡ ಮುಂದಾಗಿದೆ.

ಈ ಸಮಾರಂಭ ಮುಂಬೈನಲ್ಲಿ ಆಗಸ್ಟ್ 05ರಂದು ನಡೆಯಲಿದ್ದು, ಈ ಸಂದರ್ಭದಲ್ಲಿ ಚಿತ್ರದ ಮೊದಲ ಟ್ರೇಲರ್‍ ಬಿಡುಗಡೆ ಮಾಡಲಾಗುತ್ತದಂತೆ. ಅಂದು ಸಂಜೆ 5.55ಕ್ಕೆ ಕನ್ನಡ, ತಮಿಳು, ತೆಲುಗು, ಹಿಂದಿ, ಮಲಯಾಳಂ, ಬಂಗಾಲಿ, ಅರೇಬಿಕ್, ರಷ್ಯನ್, ಕೊರಿಯಾ, ಚೈನೀಸ್‍, ಇಂಗ್ಲೀಷ್ ಸೇರಿದಂತೆ ಒಟ್ಟು 13 ಭಾಷೆಗಳಲ್ಲಿ ಚಿತ್ರದ ಮೊದಲ ಟ್ರೇಲರ್‍ ಬಿಡುಗಡೆಯಾಗುತ್ತಿದೆ.

ಈ ಸಂದರ್ಭದಲ್ಲಿ ದೇಶದ ಬೇರೆಬೇರೆ ರಾಜ್ಯಗಳ ಸಿನಿಮಾ ಪತ್ರಕರ್ತರಲ್ಲದೆ, ಒಟ್ಟು 21 ದೇಶಗಳ ಪ್ರತಿನಿಧಿಗಳು ಚಿತ್ರದ ಅಂತಾರಾಷ್ಟ್ರೀಯ ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾಗಲಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಇದೇ ಮೊದಲ ಬಾರಿಗೆ ಚಿತ್ರವೊಂದರ ಅಂತಾರಾಷ್ಟ್ರೀಯ ಪತ್ರಿಕಾಗೋಷ್ಠಿ ನಡೆಯಲಿದ್ದು, ಅದಕ್ಕೆ ‘ಮಾರ್ಟಿನ್‍’ ಕಾರಣವಾಗುತ್ತಿರುವುದು ವಿಶೇಷ. ಈ ಪತ್ರಿಕಾಗೋಷ್ಠಿಯಲ್ಲಿ ಅಮೇರಿಕಾ, ಇಂಗ್ಲೆಂಡ್‍, ದುಬೈ, ಕೊರಿಯಾ, ಜಪಾನ್‍, ರಷ್ಯಾ, ಮಲೇಷ್ಯಾ ಸೇರಿದಂತೆ 21 ದೇಶಗಳ 27 ಪತ್ರಕರ್ತರು ಭಾಗವಹಿಸುತ್ತಿದ್ದಾರೆ.

ಇದಕ್ಕೂ ಮೊದಲು ಒಂದು ದಿನ ಮುಂಚೆ ಆಗಸ್ಟ್ 04ರಂದು ಚಿತ್ರದ ಕನ್ನಡ ಟ್ರೇಲರ್‍ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಮುಂದಾಗಿದೆ. ಈ ಹಿಂದೆ, ಚಿತ್ರತಂಡವು ಚಿತ್ರದ ಟೀಸರ್ ಅನ್ನು ಅಭಿಮಾನಿಗಳ ಸಮ್ಮುಖದಲ್ಲಿ ವೀರೇಶ್‍ ಚಿತ್ರಮಂದಿರದಲ್ಲಿ ಬಿಡುಗಡೆ ಮಾಡಲಾಗಿತ್ತು. ಈಗ ಅದೇ ವೀರೇಶ್ ಚಿತ್ರಮಂದಿರದಲ್ಲಿ ಆಗಸ್ಟ್ 04ರ ಮಧ್ಯಾಹ್ನ ಅಭಿಮಾನಿಗಳಿಗೆ ಬಿಡುಗಡೆ ಮಾಡಲಾಗುತ್ತಿದೆ.

‘ಮಾರ್ಟಿನ್‍’ ಚಿತ್ರದಲ್ಲಿ ಧ್ರುವ ಸರ್ಜಾ, ವೈಭವಿ ಶಾಂಡಿಲ್ಯ, ಅನ್ವೇಶಿ ಜೈನ್‍, ನವಾಬ್‍ ಷಾ, ಜಿಯಾರ್ಜಿಯಾ ಆ್ಯಂಡ್ರಿಯಾನಿ, ಚಿಕ್ಕಣ್ಣ, ಮಾಳವಿಕಾ ಅವಿನಾಶ್‍, ಅಚ್ಯುತ್‍ ಕುಮಾರ್‍ ಮುಂತಾದವರು ನಟಿಸಿದ್ದಾರೆ. ಚಿತ್ರವನ್ನು ವಾಸವಿ ಎಂಟರ್‍ಪ್ರೈಸಸ್ ಸಂಸ್ಥೆಯಡಿ ಉದಯ್‍ ಮೆಹ್ತಾ ನಿರ್ಮಿಸಿದ್ದು, ಅರ್ಜುನ್‍ ಸರ್ಜಾ ಕಥೆ ಬರೆದಿದ್ದಾರೆ. ಎ.ಪಿ. ಅರ್ಜುನ್‍ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ಭೂಮಿಕಾ

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

4 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

4 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

4 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

4 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

6 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

7 hours ago