mathondu heluve
ರೇಡಿಯೋ ಜಾಕಿಗಳಾಗಿ ಗುರುತಿಸಿಕೊಂಡ ಹಲವರು ನಟರಾಗಿ, ನಿರ್ದೇಶಕರಾಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಆ ಸಾಲಿಗೆ ಮಯೂರ್ ಕಡಿ ಸಹ ಸೇರಿದ್ದಾರೆ. ಇವರು ‘ಮಾತೊಂದ ಹೇಳುವೆ’ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ನಟರಾಗಿಯೂ ಕೆಲಸ ಮಾಡಿದ್ದಾರೆ. ಈ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ವಿಶೇಷ ವಿಡಿಯೋ ತುಣುಕು ಬಿಡುಗಡೆ ಮಾಡುವ ಮೂಲಕ ಘೋಷಣೆ ಮಾಡಿದೆ.
ಚಿತ್ರದ ಕಥೆಯಲ್ಲಿ ನಾಯಕ ಉತ್ತರ ಕರ್ನಾಟಕದ ರೇಡಿಯೋ ಜಾಕಿ ಆಗಿರುತ್ತಾನೆ. ನಾಯಕಿ ಮೈಸೂರಿನಿಂದ ಧಾರವಾಡಕ್ಕೆ ಆಗಮಿಸುತ್ತಾಳೆ. ಇಬ್ಬರೂ ಭೇಟಿ ಆದಾಗ ನಡೆಯುವ ರೋಚಕ ಘಟನೆಗಳೇ ಚಿತ್ರದ ಜೀವಾಳ.
‘ಇದೊಂದು ವಿಭಿನ್ನ ಪ್ರೇಮಕಥೆ. ಕುಟುಂಬ ಸಮೇತ ನೋಡಬಹುದಾದ ಚಿತ್ರ. ಜೂನ್.13ರಂದು ರಾಜ್ಯಾದ್ಯಂತ ಚಿತ್ರ ಬಿಡುಗಡೆಯಾಗಲಿದೆ’ ಎನ್ನುತ್ತಾರೆ ಮಯೂರ್.
‘ಮತೊಂದು ಹೇಳುವೆ’ ಚಿತ್ರದಲ್ಲಿ ಮಯೂರ್ ಕಡಿ, ಅಪೂರ್ವ ಆರಾಧ್ಯ, ಗಿರೀಶ್ ಶಿವಣ್ಣ, ಪಿ.ಡಿ. ಸತೀಶ್ ಚಂದ್ರ, ಪ್ರತೀಕ್ ರಡ್ಡೆರ್, ಚೇತನ್ ಮರಂಬೀಡ್, ವಿದ್ಯಾಸಾಗರ ದೀಕ್ಷಿತ್, ಪ್ರತೀಕ್, ಕಾರ್ತಿಕ್ ಪತ್ತಾರ್, ಸುನಿಲ್ ಪತ್ರಿ, ಜ್ಯೋತಿ ಪುರಾಣಿಕ್ ಮುಂತಾದವರಿದ್ದಾರೆ.
ಮಹೇಶ್ವರ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ‘ಮತೊಂದು ಹೇಳುವೆ’ ಚಿತ್ರ ನಿರ್ಮಾಣವಾಗಿದೆ. ಪರ್ವತೇಶ್ ಪೋಲ್ ಛಾಯಾಗ್ರಹಣ, ಉಲ್ಲಾಸ್ ಕುಲಕರ್ಣಿ ಸಂಗೀತ ಸಂಯೋಜಿಸಿದ್ದಾರೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…